ಇಂದು(ನ.7) ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲಾಧಿಕಾರಿಗಳು ಆನ್ಲೈನ್ ಮೂಲಕ ಸಭೆಯಲ್ಲಿ ಭಾಗಯಾಗಲಿದ್ದಾರೆ. 46 ಮಂದಿ ರೈತ ಮುಖಂಡರುಗಳಿಗೂ ಸಭೆಗೆ ಆಹ್ವಾನಿಸಲಾಗಿದೆ. ಗುರುವಾರ ಮಧ್ಯಾಹ್ನ ಸಿಎಂ ಸುದ್ದಿಗೋಷ್ಠಿ ನಂತರ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಸ್ಥಳಕ್ಕೆ ಹೋದ ವೇಳೆ ರೈತ ಮುಖಂಡರು ಸಭೆ ಬಹಿಷ್ಕರಿಸಿದ್ದರು.




