ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಉತ್ಸವ ‘ಒಂದೆಡೆ ರಂಗೋತ್ಸವ’ವು ನಡೆಯಲಿದೆ. ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಭಾರತೀಯ ಸಾಮಾಜಿಕ ಸಂಸ್ಥೆ, ರಾಜ್ಯ ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ ಸಹಕಾರದಲ್ಲಿ ‘ಒಂದೆಡೆ’ ಸಂಘಟನೆಯು ಈ ಉತ್ಸವವನ್ನು ಆಯೋಜಿಸುತ್ತಿದೆ. ಎರಡು ದಿನಗಳ ಈ ಲಿಂಗತ್ವ ಅಲ್ಪಸಂಖ್ಯಾತರ ಸಾಂಸ್ಕೃತಿಕ ಸಮ್ಮಿಲನ ಫೆಬ್ರವರಿ 21 ಅಂದರೆ ಇಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಅದಕ್ಕೂ ಮುನ್ನವೇ ವೈಷ್ಣವಿ ನಾಟ್ಯಶಾಲಾ ತಂಡದ ಸದಸ್ಯರಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ. ಬಳಿಕ ರಂಗಪಯಣ ತಂಡವು `ಅಕ್ಕೆ-ಕರುಣೆಗೊಂದು ಸವಾಲು’ ರಂಗ ಪ್ರಸ್ತುತಿ ನೀಡಲಿದೆ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ




