ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಮತ್ತಷ್ಟು ಜೀವ ಬಂದಿದೆ.
ಎಸ್ಐಟಿಯಿಂದ ಬುಧವಾರ ನಡೆದ ಬಂಗ್ಲೆಗುಡ್ಡೆ ಕಾಡಿನೊಳಗಿನ ಸ್ಥಳ ಮಹಜರು ವೇಳೆ ಒಂಬತ್ತು ಕಡೆ ಮಾನವನ ಮೂಳೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಈ ಹಿಂದೆ ಸಾಕ್ಷಿ ದೂರುದಾರ ಗುರುತಿಸಿದ ಸ್ಥಳದ 11ನೇ ಪಾಯಿಂಟ್ ಬಳಿಯಲ್ಲಿ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಸ್ಥಿಪಂಜರಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
ಈ ಹಿಂದೆ ಸಾಕ್ಷಿದಾರ ವಿಠಲಗೌಡರನ್ನು ಎಸ್ಐಟಿ ಅಧಿಕಾರಿಗಳು ಕರೆದುಕೊಂಡು ಬಂದು ಎರಡು ಸಲಾ ಇದೇ ಜಾಗದ ಬಳಿ ಸ್ಥಳ ಮಹಜರು ನಡೆಸಿದ್ದರು. ಆ ಸಂದರ್ಭದಲ್ಲಿ ವಿಠಲಗೌಡರು ಅಧಿಕಾರಿಗಳಿಗೆ ಅಸ್ಥಿಪಂಜರ ಇರುವ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡನೇ ಹಂತದಲ್ಲಿ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.





