PTI V/s ANI : ಡಿ ಕೆ ಸುರೇಶ್ ಎದುರೇ ವರದಿಗಾರ್ತಿ ಮೇಲೆ ಹಲ್ಲೆಗೈದ ಪತ್ರಕರ್ತ: ವಿಡಿಯೋ ವೈರಲ್

Date:

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಲೆಂದು ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ರಾಷ್ಟ್ರೀಯ ಸುದ್ದಿ ಸಂಸ್ಥೆಯಾಗಿರುವ ಪಿಟಿಐ ಪತ್ರಕರ್ತೆಯ ಮೇಲೆ ಎಎನ್‌ಐ ಸುದ್ದಿ ಸಂಸ್ಥೆಯ ಪತ್ರಕರ್ತನೋರ್ವ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿರುವ ಪಿಟಿಐ ಸುದ್ದಿ ಸಂಸ್ಥೆ, ಎಎನ್‌ಐ ಪತ್ರಕರ್ತನ ನಡವಳಿಕೆಯನ್ನು ಖಂಡಿಸಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಟ್ವೀಟ್‌ನಲ್ಲಿ ಪಿಟಿಐ, “ಎಎನ್‌ಐ ಪತ್ರಕರ್ತನಿಂದ ಅಸಹ್ಯಕರ ನಡವಳಿಕೆ ಇದು. ಡಿ ಕೆ ಶಿವಕುಮಾರ್ ಹಾಗೂ ಡಿ ಕೆ ಸುರೇಶ್ ಅವರಿದ್ದ ಕಾರ್ಯಕ್ರಮವೊಂದರಲ್ಲಿ ಯುವ ಪಿಟಿಐ ಮಹಿಳಾ ವರದಿಗಾರ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಲೈಂಗಿಕ ಕಿರುಕುಳ ನೀಡಿದ್ದಾನೆ” ಎಂದು ಆರೋಪಿಸಿದೆ.

ಅಲ್ಲದೇ, ಎಎನ್‌ಐಯ ನಿರ್ದೇಶಕಿ ಸ್ಮಿತಾಪ್ರಕಾಶ್ ಅವರನ್ನು ಟ್ಯಾಗ್ ಮಾಡಿರುವ ಪಿಟಿಐ, “ನಿಮ್ಮ ಸಿಬ್ಬಂದಿಯ ಇಂತಹ ವರ್ತನೆಯನ್ನು ಒಪ್ಪುತ್ತೀರಾ?” ಎಂದು ಪ್ರಶ್ನಿಸಿದೆ.

“ಪಿಟಿಐ ತನ್ನ ಉದ್ಯೋಗಿಗಳನ್ನು ರಕ್ಷಿಸಲು ಯಾವ ಹಂತಕ್ಕೂ ಹೋಗಲಿದೆ. ಹಲ್ಲೆಯಿಂದಾಗಿ ನಮ್ಮ ವರದಿಗಾರ್ತಿಯು ಆಘಾತಕ್ಕೊಳಗಾಗಿದ್ದಾರೆ. ಘಟನೆಯ ಕುರಿತು ಎಫ್‌ಐಆರ್ ದಾಖಲಿಸಲಿದ್ದೇವೆ. ಅಲ್ಲದೇ, ಪಿಟಿಐ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ನೀಡಲಿದೆ” ಎಂದು ತಿಳಿಸಿದೆ.

ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಲೆಂದು ಇಂದು ರಾಮನಗರದಲ್ಲಿ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಪತ್ರಕರ್ತರ ಜೊತೆಗೆ ತೆರೆದ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಸ್ಥಳೀಯ ಹಲವು ಮಂದಿ ಪತ್ರಕರ್ತರೂ ಸೇರಿ ರಾಷ್ಟ್ರೀಯ ಮಾಧ್ಯಮದ ಪತ್ರಕರ್ತರು ಕೂಡ ವಾಹನದಲ್ಲಿದ್ದರು. ಈ ನಡುವೆ ‘ಬೈಟ್ಸ್‌’ ಪಡೆದುಕೊಳ್ಳುವ ವಿಚಾರವಾಗಿ ಎಎನ್‌ಐ ಪತ್ರಕರ್ತ ಹಾಗೂ ಪಿಟಿಐ ಪತ್ರಕರ್ತೆಯ ನಡುವೆ ವಾಗ್ವಾದ ನಡೆದಿದೆ.

ಈ ವಾಗ್ವಾದದ ಮಧ್ಯೆಯೇ ಎಎನ್‌ಐ ಪತ್ರಕರ್ತ ವರದಿಗಾರ್ತಿಗೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಹಲ್ಲೆಯ ವೇಳೆ ಸ್ಥಳದಲ್ಲಿದ್ದ ಡಿ ಕೆ ಸುರೇಶ್ ಅವರ ಬೆಂಬಲಿಗರು ಎಎನ್‌ಐ ಪತ್ರಕರ್ತನನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ದೃಶ್ಯವು ವಿಡಿಯೋದಲ್ಲಿದೆ. ಈ ಘಟನೆಯನ್ನು ದೇಶದ ನಾನಾ ಪತ್ರಕರ್ತರು ಖಂಡಿಸಿದ್ದು, ಈ ರೀತಿಯ ವರ್ತನೆ ಸರಿಯಲ್ಲ. ತಪ್ಪು ಯಾರೇ ಮಾಡಿದರೂ ತಪ್ಪು ಎಂದು ಅಭಿಪ್ರಾಯಿಸಿದ್ದಾರೆ.

ಈ ಘಟನೆಯ ಬಗ್ಗೆ ಎಎನ್‌ಐ ಸುದ್ದಿಯ ನಿರ್ದೇಶಕಿ ಸ್ಮಿತಾ ಪ್ರಕಾಶ್ ಅವರನ್ನು ಈ ದಿನ.ಕಾಮ್ ಸಂಪರ್ಕಿಸಿತು. “ಘಟನೆಯ ಮಾಹಿತಿ ದೊರಕಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಸಂಸ್ಥೆಯಿಂದ ಅಧಿಕೃತ ಪ್ರಕಟಣೆ ಹೊರಡಿಸುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...