ರಾಜಸ್ಥಾನ | ನಿರಂತರ ದ್ವೇಷ ಹರಡುವ ‘ಜೈಪುರ್ ಡೈಲಾಗ್ಸ್‌’ನ ನಿರ್ದೇಶಕನಿಗೆ ಕಾಂಗ್ರೆಸ್ ಟಿಕೆಟ್!

Date:

ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ರಾಜಸ್ಥಾನದ ‘ಜೈಪುರ್ ಡೈಲಾಗ್ಸ್‌’ನ ನಿರ್ದೇಶಕನಿಗೆ ಕಾಂಗ್ರೆಸ್ ಲೋಕಸಭಾ ಟಿಕೆಟ್ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಸೇರಿದಂತೆ ಧರ್ಮಾಧಾರಿತ ದ್ವೇಷ ಹರಡುವ ಕೆಲಸ ಮಾಡುತ್ತಿರುವ thejaipurdialogues.comನ ಪಾಲುದಾರ ಹಾಗೂ ನಿರ್ದೇಶಕನೂ ಆಗಿರುವ ಸುನಿಲ್ ಶರ್ಮಾಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಸುನಿಲ್ ಶರ್ಮಾ ಅವರು ಜೈಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್ ಮೂಲಕ ಗಮನ ಸೆಳೆದಿರುವ ಆಲ್ಟ್ ನ್ಯೂಸ್ ಸಹಸಂಸ್ಥಾಪಕ, ದ್ವೇಷ ಹರಡುವವರ ವಿರುದ್ಧ ನಿರಂತರ ಬೇಟೆಯಾಡುತ್ತಿರುವ ಮುಹಮ್ಮದ್ ಝುಬೈರ್, “ಜೈಪುರ್ ಡೈಲಾಗ್ಸ್‌ನ ಪಾಲುದಾರ ಹಾಗೂ ನಿರ್ದೇಶಕ ಸುನೀಲ್ ಶರ್ಮಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಆಹಾ. ಇದು ಅದ್ಭುತವೇ ಸರಿ” ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಟ್ಯಾಗ್ ಮಾಡಿದ್ದಾರೆ.

ಝುಬೈರ್ ಅವರು ಹಂಚಿಕೊಂಡಿರುವ ವೀಡಿಯೋದಲ್ಲಿ ರಾಜಸ್ಥಾನ್ ಚೌಕ್ ಎಂಬ ಡಿಜಿಟಲ್ ಮೀಡಿಯಾದ ವರದಿಗಾರರೊಬ್ಬರು ಸುನಿಲ್ ಶರ್ಮಾ ಅವರನ್ನು ಜೈಪುರ್ ಡೈಲಾಗ್ಸ್ ಬಗ್ಗೆ ಪ್ರಶ್ನಿಸಿದ್ದಕ್ಕೆ, ಸುನಿಲ್ ಶರ್ಮಾ ಕ್ಯಾಮೆರಾದಿಂದ ತಪ್ಪಿಸಿಕೊಂಡು ಹೋಗುವುದು ದೃಶ್ಯಗಳಲ್ಲಿ ಸೆರೆಯಾಗಿದೆ.

ಅಲ್ಲದೇ, ಈ ಹಿಂದೆ ದೇಶದ ಖ್ಯಾತ ಪತ್ರಕರ್ತ ರವೀಶ್ ಕುಮಾರ್, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಜೈನ್ ಸೇರಿದಂತೆ ಹಲವರ ವಿರುದ್ಧ ಮಾಡಿರುವ ದ್ವೇಷದ ಪೋಸ್ಟ್‌ಗಳನ್ನು ಕೂಡ ಝುಬೈರ್ ಹಂಚಿಕೊಂಡಿದ್ದಾರೆ.

‘ಜೈಪುರ್ ಡೈಲಾಗ್ಸ್‌’ ಬಲಪಂಥೀಯ ವಿಚಾರಧಾರೆ, ದ್ವೇಷವನ್ನು ವೆಬ್‌ಸೈಟ್‌ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಹಂಚುವಲ್ಲಿ ಕುಖ್ಯಾತಿ ಪಡೆದಿದೆ. ಇವರ ಯೂಟ್ಯೂಬ್ ಚಾನೆಲ್ ಸುಮಾರು 14 ಲಕ್ಷ Subcribers ಅನ್ನು ಕೂಡ ಹೊಂದಿದೆ. ಇದಕ್ಕೆ ಐವರು ನಿರ್ದೇಶಕರಿದ್ದು, ಅದರಲ್ಲಿ ಸುನಿಲ್ ಶರ್ಮಾ ಕೂಡ ಒಬ್ಬರು.

ರಾಜಸ್ಥಾನದಲ್ಲಿ ‘ಜೈಪುರ್ ಡೈಲಾಗ್ಸ್‌’ನಂತೆಯೇ ಕರ್ನಾಟಕದಲ್ಲಿಯೂ ಕೂಡ ಸಂವಾದ, ಟಿವಿ ವಿಕ್ರಮ ಹೆಸರಿನ ಯೂಟ್ಯೂಬ್‌ ಚಾನೆಲ್ ಇದೇ ರೀತಿ ದ್ವೇಷ ಹರಡವುದರಲ್ಲಿ ನಿರತವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...