ಮಮತಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಪ್ರಚಾರ ನಡೆಸದಂತೆ ಬಿಜೆಪಿ ಅಭ್ಯರ್ಥಿ, ಮಾಜಿ ನ್ಯಾಯಮೂರ್ತಿಗೆ ನಿರ್ಬಂಧ

Date:

ಚುನಾವಣಾ ಭಾಷಣದ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರು 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಮಂಗಳವಾರ ನಿರ್ಬಂಧ ವಿಧಿಸಿದೆ.

ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯೂ ಆಗಿರುವ ಗಂಗೋಪಾಧ್ಯಾಯ ಅವರು ಪಶ್ಚಿಮ ಬಂಗಾಳದ ತಾಮ್ಲುಕ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಗಂಗೋಪಾಧ್ಯಾಯ ಅವರು ಮೇ 15ರಂದು ಹಲ್ಲಿಯಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಮತಾ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಪಕ್ಷದ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ದೂರಿಗೆ ಸಂಬಂಧಿಸಿದಂತೆ ಆಯೋಗವು ಅವರಿಗೆ ಶೋಕಾಸ್ ನೋಟಿಸ್‌ ಕಳುಹಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆಲ್‌ರೌಂಡರ್ ಸ್ವಪ್ನಿಲ್ ಸಿಂಗ್: ಆರ್‌ಸಿಬಿ ತಂಡದ ‘ಹೊಸ ಲಕ್ಕಿ ಚಾರ್ಮ್’

‘ಗಂಗೋಪಾಧ್ಯಾಯ ಅವರು ನೋಟಿಸ್‌ಗೆ ನೀಡಿದ ಉತ್ತರವನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ. ಅವರು ಮಮತಾ ವಿರುದ್ಧ ನೀಡಿದ್ದ ಹೇಳಿಕೆಯನ್ನು ಮತ್ತೊಮ್ಮೆ ಪರಿಶೀಲಿಸಿದ್ದೇವೆ. ಮುಖ್ಯಮಂತ್ರಿ ವಿರುದ್ಧ ‘ಕೀಳುಮಟ್ಟದ ವೈಯಕ್ತಿಕ ದಾಳಿ’ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದೆ’ ಎಂದು ಆಯೋಗ ತಿಳಿಸಿದೆ. ನಿರ್ಬಂಧವು ಮಂಗಳವಾರ ಸಂಜೆ 5ರಿಂದ ಜಾರಿಗೆ ಬಂದಿದ್ದು, ಬುಧವಾರ ಸಂಜೆ 5ರವರೆಗೆ ಜಾರಿಯಲ್ಲಿರಲಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...