‘ತಮ್ಮ ಅಭ್ಯರ್ಥಿ’ ಎಂದು ರೈಲಿನಿಂದ ಬಂದಿಳಿದಾತನಿಗೆ ಸನ್ಮಾನಿಸಿದ ಬಿಜೆಪಿ ಕಾರ್ಯಕರ್ತರು!

Date:

ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿಚಿತ್ರ ಪ್ರಸಂಗವೊಂದು ನಡೆದಿದೆ. ‘ತಮ್ಮ ಅಭ್ಯರ್ಥಿ’ ಎಂದು ರೈಲಿನಿಂದ ಬಂದಿಳಿದ ಪಕ್ಷದ ಇನ್ನೋರ್ವ ವ್ಯಕ್ತಿಗೆ ಹೂಹಾರ ಹಾಕಿದ ಬಳಿಕ ಬಿಜೆಪಿ ಕಾರ್ಯಕರ್ತರು ಪೇಚಿಗೆ ಸಿಲುಕಿದ ಘಟನೆ ನಡೆದಿದೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾನ್ಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ಪಡೆಯುವ ವಿಚಾರದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ನಡುವೆ ಭಾರೀ ಕಸರತ್ತು ಏರ್ಪಟ್ಟಿತ್ತು. ಈ ಪೈಪೋಟಿಯಲ್ಲಿ ಹೈಕಮಾಂಡ್‌ನ ಮನವೊಲಿಸಿ ಬಿಜೆಪಿ ಟಿಕೆಟ್ ಪಡೆಯುವಲ್ಲಿ ರಮೇಶ್ ಅವಸ್ಥಿ ಎನ್ನುವವರು ಯಶಸ್ವಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಹೆಸರು ಪ್ರಕಟವಾದ ಬೆನ್ನಲ್ಲೇ ದೆಹಲಿಯಲ್ಲಿದ್ದ ರಮೇಶ್ ಅವಸ್ಥಿ ಬುಧವಾರ ಕಾನ್ಪುರ ನಗರಕ್ಕೆ ಆಗಮಿಸಿದರು. ದೆಹಲಿಯಿಂದ ಶತಾಬ್ದಿ ಎಕ್ಸ್‌ಪ್ರೆಸ್ ಮೂಲಕ ಕಾನ್ಪುರ ಸೆಂಟ್ರಲ್ ಸ್ಟೇಷನ್‌ಗೆ ಆಗಮಿಸಿದ ರಮೇಶ್ ಅವಸ್ತಿ ಅವರನ್ನು ಸ್ವಾಗತಿಸಲು, ಹೂ ಹಾರಗಳನ್ನು ಹಿಡಿದುಕೊಂಡು ನೂರಾರು ಬಿಜೆಪಿ ಕಾರ್ಯಕರ್ತರು ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಪ್ರತಿನಿಧಿಗಳು ಕೂಡ ಸ್ಥಳದಲ್ಲಿದ್ದರು.

ರೈಲು ಸ್ಟೇಷನ್ ತಲುಪುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಯೋಗಿ-ಮೋದಿ ಜಿಂದಾಬಾದ್ ಮತ್ತು ರಮೇಶ್ ಅವಸ್ಥಿ ಜಿಂದಾಬದ್ ಹೆಸರಿನಲ್ಲಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ರೈಲು ನಿಂತಾಗ ಅಭ್ಯರ್ಥಿ ರಮೇಶ್ ಅವಸ್ಥಿ ಹೊರಬರುವ ಮೊದಲೇ ರಾಜ್ಯಸಭಾ ಸಂಸದ ಬಾಬೂರಾಮ್ ನಿಶಾದ್ ಹೊರಬಂದರು. ಈ ವೇಳೆ ಇವರೇ ‘ನಮ್ಮ ಅಭ್ಯರ್ಥಿ’ ಎಂದು ತಪ್ಪಾಗಿ ತಿಳಿದುಕೊಂಡ ಬಿಜೆಪಿ ಕಾರ್ಯಕರ್ತರು ಬಾಬೂರಾಮ್ ನಿಶಾದ್ ಅವರಿಗೆ ಹೂ-ಹಾರ, ಶಾಲು ಹಾಕಿ ಸನ್ಮಾನಿಸಿದ್ದಾರೆ.

ಈ ವೇಳೆ ಬಾಬೂರಾಮ್ ಅವರು, “ರಮೇಶ್ ಅವಸ್ಥಿ ಇನ್ನೂ ರೈಲೊಳಗೆ ಇದ್ದಾರೆ” ಎಂದು ತಿಳಿಸಲು ಪ್ರಯತ್ನಿಸಿದರಾದರೂ, ಕಾರ್ಯಕರ್ತರಿಗೆ ಅದು ಕೇಳಲಿಲ್ಲ. ಇದೇ ವೇಳೆ ರಮೇಶ್ ಅವಸ್ಥಿ ಅವರು ಹೊರ ಬರುವುದನ್ನು ಗಮನಿಸಿದ ಶಾಸ್ತ್ರಿನಗರ ಮತ್ತು ದಬೌಲಿಯ ಕಾರ್ಯಕರ್ತರು ಪೇಚಿಗೆ ಸಿಲುಕಿದರು. ಬಳಿಕ ಬಾಬೂರಾಮ್ ಅವರಿಗೆ ಹಾಕಿದ್ದ ಶಾಲು, ಹೂಹಾರಗಳನ್ನು ‘ತಮ್ಮ ನೈಜ ಅಭ್ಯರ್ಥಿ’ ರಮೇಶ್ ಅವಸ್ಥಿ ಅವರಿಗೆ ಹಾಕಿದ್ದಾರೆ.

babu lal and ramesh awasti
ರಮೇಶ್ ಅವಸ್ಥಿ ಹಾಗೂ ಬಾಬೂರಾಮ್ ನಿಶಾದ್(ಕನ್ನಡಕ ಹಾಕಿದವರು)

ಬಾಬೂರಾಮ್ ಅವರು ಉಡುಗೆ ಮತ್ತು ನೋಟದಲ್ಲಿ ರಮೇಶ್ ಅವಸ್ಥಿಯನ್ನೇ ಹೋಲುತ್ತಿದ್ದರಿಂದ ಬಿಜೆಪಿ ಕಾರ್ಯಕರ್ತರು ಈ ರೀತಿ ಪೇಚಿಗೆ ಸಿಲುಕಿ, ಮಾಧ್ಯಮಗಳ ಎದುರೇ ಮುಜುಗರಕ್ಕೊಳಗಾದರು. ಸದ್ಯ ಇದರ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಟ್ರೋಲಿಗರಿಗೆ ಆಹಾರವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...