ರಾಹುಲ್‌ ಗಾಂಧಿಗೆ ಬೆಂಬಲ; ಕಪ್ಪು ಬಟ್ಟೆ ಧರಿಸಿ ಒಗ್ಗಟ್ಟು ಪ್ರದರ್ಶಿಸಿದ ವಿಪಕ್ಷಗಳು

Date:

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ಮತ್ತು ಅದಾನಿ ಕುರಿತ ಹಿಂಡನ್‌ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಅಂಶಗಳ ತನಿಖೆಗೆ ಸಂಬಂಧಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆಗೆ ಮುಂದಾಗಿದ್ದು, ಉಭಯ ಸದನಗಳ ಕಲಾಪಗಳನ್ನು ಸೋಮವಾರ ಮತ್ತೆ ಮುಂದೂಡಲಾಗಿದೆ. ರಾಜ್ಯಸಭೆಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮತ್ತು ಲೋಕಸಭೆ ಕಲಾಪವನ್ನು ಸಂಜೆ 4 ಗಂಟೆಯವರೆಗೆ ಮುಂದೂಡಲಾಗಿದೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ಸಂಸತ್‌ ಕಲಾಪ ಆರಂಭವಾಗುತ್ತಲೇ ಪ್ರತಿಪಕ್ಷಗಳು ಒಗ್ಗಟ್ಟಾಗಿ ಪ್ರತಿಭಟನೆಯ ಮೂಲಕ ಬಜೆಟ್ ಅಧಿವೇಶನಕ್ಕೆ ಮತ್ತೆ ಅಡ್ಡಿಪಡಿಸಿದವು. ರಾಹುಲ್‌ ಗಾಂಧಿ ಅನರ್ಹತೆ ವಿಚಾರದಲ್ಲಿ ಕಾಂಗ್ರೆಸ್‌ನ ಸಂಸದರು ಕಪ್ಪು ಬಟ್ಟೆ ಧರಿಸಿ ಕಲಾಪಕ್ಕೆ ಆಗಮಿಸಿದ್ದರು. ಇದಲ್ಲದೆ, ಅದಾನಿ ವಿವಾದದ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಹಲವು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಕೇಂದ್ರದ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರವಾಗಿಸಲು ಪ್ರತಿಪಕ್ಷಗಳು ನಿರ್ಧಿರಿಸಿದ್ದು, ಈ ಕುರಿತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ 17 ಪ್ರಮುಖ ವಿಪಕ್ಷಗಳ ನಾಯಕರು ಭಾಗವಹಿಸಿದ್ದರು. ಬಳಿಕ ವಿರೋಧ ಪಕ್ಷದ ನಾಯಕರು ಸಂಸತ್‌ ಭವನದಿಂದ ವಿಜಯ್ ಚೌಕ್‌ಗೆ ತೆರಳಿ ಜಂಟಿ ʻಸತ್ಯಮೇಯ ಜಯತೆʼ ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದರು. ತೃಣಮೂಲ ಕಾಂಗ್ರೆಸ್ ಸಂಸದರು ಸೋಮವಾರ ಮೊದಲ ಬಾರಿಗೆ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ಸಂಸತ್ ಅಧಿವೇಶನದ ಸಂದರ್ಭ ವಿಪಕ್ಷಗಳ ಒಗ್ಗಟ್ಟಿನ ವಿರೋಧದಿಂದ ಈವರೆಗೆ ಟಿಎಂಸಿ ದೂರವೇ ಉಳಿದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಪಕ್ಷಗಳಿಗೆ ಧನ್ಯವಾದ ಹೇಳಿದ ಖರ್ಗೆ

ರಾಹುಲ್ ಗಾಂಧಿಗೆ ಬೆಂಬಲ ನೀಡಿದ ಎಲ್ಲಾ ವಿರೋಧ ಪಕ್ಷಗಳಿಗೆ ಮಲಿಕಾರ್ಜುನ ಖರ್ಗೆ ಧನ್ಯವಾದ ತಿಳಿಸಿದ್ದಾರೆ. ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ಪ್ರಧಾನಿ ಮೋದಿ ಕೊಲ್ಲುತ್ತಿದ್ದಾರೆ. ಪ್ರಧಾನಿಗೆ ತಲೆಬಾಗದವರನ್ನು ಕೇಂದ್ರ ಏಜೆನ್ಸಿಗಳನ್ನು ಬಳಸಿ ಬೇಟೆಯಾಡುತ್ತಿದ್ದಾರೆ. ನರೇಂದ್ರ ಮೋದಿ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜನರಿಗೆ ತೋರಿಸಲು ಮತ್ತು ಹೇಳಲು ನಾವು ಬಯಸುತ್ತೇವೆ. ಮೂರು ವರ್ಷಗಳಲ್ಲಿ ಅದಾನಿ ಆದಾಯ ₹12 ಲಕ್ಷ ಕೋಟಿಯಷ್ಟು ಹೆಚ್ಚಾಗಿದೆ.  ಇದು ಹೇಗೆ ಸಾಧ್ಯ? ರಾಹುಲ್ ಗಾಂಧಿಯ ಜೊತೆ ಎಲ್ಲಾ ಪ್ರತಿಪಕ್ಷಗಳು ಈ ಪ್ರಶ್ನೆಯನ್ನು ಮುಂದಿಟ್ಟು, ಈ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸುತ್ತಲೇ ಬಂದಿದ್ದೇವೆ  ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...