ಡೀಸೆಲ್ ವಾಹನಗಳ ಮೇಲೆ ಶೇ.10ರಷ್ಟು ಮಾಲಿನ್ಯ ತೆರಿಗೆಯ ಪ್ರಸ್ತಾಪ | ವಾಹನಗಳು ದುಬಾರಿ ಸಾಧ್ಯತೆ

Date:

ವಾಯು ಮಾಲಿನ್ಯವನ್ನು ತಗ್ಗಿಸುವ ನೆಪದಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್‌ಸೆಟ್‌ಗಳ ಮೇಲೆ 10% ಹೆಚ್ಚುವರಿ ಜಿಎಸ್‌ಟಿ ರೂಪದಲ್ಲಿ ‘ಮಾಲಿನ್ಯ ತೆರಿಗೆಯನ್ನು ವಿಧಿಸಲು ಕೋರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ.

63 ನೇ ವಾರ್ಷಿಕ SIAM ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು, ‘ಹೆಚ್ಚುತ್ತಿರುವ ಮಾಲಿನ್ಯ ಮಟ್ಟವು ನಾಗರಿಕರ ಆರೋಗ್ಯಕ್ಕೆ ಅಪಾಯವಾಗಿದೆ. ಡೀಸೆಲ್ ಚಾಲಿತ ವಾಹನಗಳ ಮೇಲೆ ಹೆಚ್ಚುವರಿಯಾಗಿ ಶೇ 10ರಷ್ಟು ಜಿಎಸ್‌ಟಿ ಹಾಕುವಂತೆ ನಾನು ಇಂದು ಸಂಜೆ ಹಣಕಾಸು ಸಚಿವರಿಗೆ ಪತ್ರವನ್ನು ನೀಡಲಿದ್ದೇನೆ’ ಎಂದು ಹೇಳಿದರು.

‘ಡೀಸೆಲ್‌ಗೆ ವಿದಾಯ ಹೇಳಿ. ಅವುಗಳ ತಯಾರಿಕೆಯನ್ನು ನಿಲ್ಲಿಸಿ, ಇಲ್ಲದಿದ್ದರೆ ನಾವು ಡೀಸೆಲ್ ಕಾರುಗಳನ್ನು ಮಾರಾಟ ಮಾಡಲು ಕಷ್ಟವಾಗುವಷ್ಟು ತೆರಿಗೆಯನ್ನು ಹೆಚ್ಚಿಸುತ್ತೇವೆ’ ಎಂದು ಗಡ್ಕರಿ ಎಚ್ಚರಿಸಿದರು. ಡೀಸೆಲ್ ಚಾಲಿತ ಜನರೇಟರ್‌ಗಳ ಮೇಲೆ ಹೆಚ್ಚುವರಿ ಜಿಎಸ್‌ಟಿಯನ್ನು ಪ್ರಸ್ತಾಪಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದಲ್ಲಿ ಈಗಾಗಲೇ ಡೀಸೆಲ್ ಕಾರುಗಳ ಕೊಡುಗೆ ತೀವ್ರವಾಗಿ ಕುಸಿದಿದ್ದು, ತಯಾರಕರು ಮಾರುಕಟ್ಟೆಯಲ್ಲಿ ಅವುಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಬೇಕಾಗಿದೆ ಎಂದರು.

ಪ್ರಯಾಣಿಕ ವಾಹನ ವಿಭಾಗದಲ್ಲಿ, ಮಾರುತಿ ಸುಜುಕಿ ಇಂಡಿಯಾ ಮತ್ತು ಹೋಂಡಾ ಸೇರಿದಂತೆ ವಿವಿಧ ಕಾರು ತಯಾರಕರು ಈಗಾಗಲೇ ಡೀಸೆಲ್ ಕಾರುಗಳ ಉತ್ಪಾದನೆಯನ್ನು ನಿಲ್ಲಿಸಿವೆ.

ಈ ಸುದ್ದಿ ಓದಿದ್ದೀರಾ: ಜಿ 20 ಶೃಂಗಸಭೆ ಮುಗಿದಿದೆ, ಮೋದಿ ಸರ್ಕಾರ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಪ್ರಸ್ತುತ, ಆಟೋಮೊಬೈಲ್‌ಗಳಿಗೆ ಪ್ರಸ್ತುತ ಶೇಕಡಾ 28 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ವಾಹನದ ಪ್ರಕಾರವನ್ನು ಅವಲಂಬಿಸಿ ಹೆಚ್ಚುವರಿ ಸೆಸ್ ಶೇಕಡಾ 1 ರಿಂದ 22 ರವರೆಗೆ ಇರುತ್ತದೆ. SUV ಗಳು 22 ಪ್ರತಿಶತದಷ್ಟು ಪರಿಹಾರದ ಸೆಸ್ ಜೊತೆಗೆ 28 ​​ಶೇಕಡಾ ದರದಲ್ಲಿ ಅತ್ಯಧಿಕ GST ಅನ್ನು ತೆರುತ್ತಿವೆ.

ದೇಶದ ಬಹುತೇಕ ವಾಣಿಜ್ಯ ವಾಹನಗಳು ಪ್ರಸ್ತುತ ಡೀಸೆಲ್‌ನಲ್ಲಿ ಚಲಿಸುತ್ತಿವೆ. ಇದರಿಂದ ಮುಂದಿನ ದಿನಗಳಲ್ಲಿ ಡೀಸೆಲ್ ವಾಹನಗಳು ದುಬಾರಿಯಾಗುವ ಸಾಧ್ಯತೆ ಇದೆ.

ಸಚಿವರು ಈ ಘೋಷಣೆ ಮಾಡಿದ ತಕ್ಷಣ, ಮಾರುತಿ ಮತ್ತು ಟಾಟಾ ಮೋಟಾರ್ಸ್ ಸೇರಿದಂತೆ ಆಟೋ ಷೇರುಗಳು ತೀವ್ರ

ಕುಸಿತ ಕಂಡಿವೆ.

ಕೆಲವೇ ಗಂಟೆಗಳಲ್ಲಿ ಉಲ್ಟಾ ಹೊಡೆದ ಗಡ್ಕರಿಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಮಾಲಿನ್ಯ ತೆರಿಗೆ ಕುರಿತ ಹೇಳಿಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಪಡೆಯುತ್ತಿದ್ದಂತೆ ಎಚ್ಚೆತ್ತ ಸಚಿವರು, ಸ್ಪಷ್ಟೀಕರಣ ನೀಡಿದ್ದಾರೆ. ಸದ್ಯಕ್ಕೆ ಅಂಥ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...