ನವೋದ್ಯಮಗಳಿಗೆ ₹100 ಕೋಟಿ ಆರ್ಥಿಕ ನೆರವು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

- ಮೊದಲ ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮ್ಮೇಳನ ಉದ್ಘಾಟನೆ

- 23 ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಪ್ರಶಸ್ತಿ

ಹಸಿರು ಹೈಡ್ರೋಜನ್‌ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ ₹100 ಕೋಟಿ ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ನವದೆಹಲಿಯಲ್ಲಿ ಶುಕ್ರವಾರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದ್ದ ಮೊದಲ ವಾರ್ಷಿಕ ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ನವೋದ್ಯಮಗಳ ಪ್ರತಿ ಯೋಜನೆಗೆ ಗರಿಷ್ಠ ₹5 ಕೋಟಿ ನೆರವು ನೀಡುವುದಾಗಿ ಘೋಷಿಸಿದರು.

“ಹಸಿರು ಹೈಡ್ರೋಜನ್‌ ನಾವೀನ್ಯತೆಯಲ್ಲಿ ನವೋದ್ಯಮಗಳನ್ನು ಬೆಂಬಲಿಸಲು ₹100 ಕೋಟಿ ಆರ್ಥಿಕ ನೆರವಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ನವೀನ ಜಲಜನಕ ಉತ್ಪಾದನೆ, ಸಂಗ್ರಹಣೆ, ಸಾರಿಗೆ ಮತ್ತು ಬಳಕೆಯಲ್ಲಿ ತಂತ್ರಜ್ಞಾನ ಅಳವಡಿಕೆಯ ಪ್ರತಿ ಯೋಜನೆಗೆ ₹5 ಕೋಟಿ ವರೆಗೆ ಒದಗಿಸುತ್ತದೆ. ಎಲೆಕ್ಟ್ರೋಲೈಜರ್ ಉತ್ಪಾದನೆಯಿಂದ ಹಿಡಿದು AI-ಚಾಲಿತ 25 ನವೋದ್ಯಮಗಳು ನಾವೀನ್ಯತೆ ಪ್ರದರ್ಶಿಸುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಸಿರು ಅಮೋನಿಯಾ ₹49.75 ಕಡಿಮೆ ಬೆಲೆ: “ರಸಗೊಬ್ಬರಗಳಲ್ಲಿ ಭಾರತ ಮೊದಲ ಹಸಿರು ಅಮೋನಿಯಾ ಹರಾಜು ನಡೆಸಿದ್ದು, 2024ರಲ್ಲಿ ಪ್ರತಿ ಕೆಜಿಗೆ ₹100.28ಕ್ಕೆ ಇದ್ದರೆ, ಇದೀಗ ಪ್ರತಿ ಕೆಜಿಗೆ ಅದರ ಅರ್ಧದಷ್ಟು ಅಂದರೆ ಕೇವಲ ₹49.75 ಐತಿಹಾಸಿಕ ಕಡಿಮೆ ಬೆಲೆ ದಾಖಲಾಗಿದೆ. ಒಡಿಶಾದ ಪ್ಯಾರದೀಪ್ ಫಾಸ್ಫೇಟ್‌ಗಳಲ್ಲಿ ಸರಬರಾಜು ಪ್ರಾರಂಭವಾಗಲಿದೆ. ಜುಲೈ 14ರಂದು ಆರಂಭಿಸಿದ 2ನೇ ಸುತ್ತಿನ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಸ್ತಾವನೆಗಳು ಸೆ.15ರವರೆಗೆ ತೆರೆದಿರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಇಯು-ಭಾರತ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗ ನೀಡಲಿದೆ. ತ್ಯಾಜ್ಯದಿಂದ ಹೈಡ್ರೋಜನ್ ಉತ್ಪಾದನೆಗೆ 30ಕ್ಕೂ ಹೆಚ್ಚು ಜಂಟಿ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ” ಎಂದು ತಿಳಿಸಿದರು.

ವಾರ್ಷಿಕ 5 ಮಿ.ಮೆ. ಟನ್‌ ಹಸಿರು ಹೈಡ್ರೋಜನ್‌: “ಭಾರತ 2030ರ ವೇಳೆಗೆ ವಾರ್ಷಿಕವಾಗಿ 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ ಹೊಂದಿದ್ದು, 125 GW ಹೊಸ ನವೀಕರಿಸಬಹುದಾದ ಸಾಮರ್ಥ್ಯ ಮತ್ತು ₹8 ಲಕ್ಷ ಕೋಟಿ ಹೂಡಿಕೆಗೆ ಒತ್ತು ನೀಡಲಾಗಿದೆ. ಇದರಿಂದ 6 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಪ್ರತಿ ವರ್ಷ 50 ಮಿಲಿಯನ್ ಟನ್ CO₂ ಕಡಿತವಾಗಲಿದೆ. ಮೊದಲ ಸುತ್ತಲ್ಲೇ 23 ಯೋಜನೆಗಳು: ಕೇಂದ್ರ ಸರ್ಕಾರ 2023ರಲ್ಲಿ ₹19,744 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ (NGHM) ಪ್ರಾರಂಭಿಸಿದ ಮೇಲೆ ಭಾರತ ಹಸಿರು ಹೈಡ್ರೋಜನ್‌ಗಾಗಿ ಜಾಗತಿಕ ಕೇಂದ್ರವಾಗಿ ಗುರುತಿಸಿಕೊಳ್ಳುತ್ತಿದೆ. ಹಸಿರು ಅಮೋನಿಯಾ ಸಂಶೋಧನೆ ಮತ್ತು ಅಭಿವೃದ್ಧಿ ಕುರಿತಂತೆ ಮೊದಲ ಸುತ್ತಿನಲ್ಲೇ 23 ಯೋಜನೆಗಳನ್ನು ನೀಡಿದ್ದು, ಐಐಟಿ, ಐಐಎಸ್ಇಆರ್‌, ಸಿಎಸ್ಐಆರ್ ಪ್ರಯೋಗಾಲಯ ಮತ್ತು ಕೈಗಾರಿಕಾ ಪಾಲುದಾರರು ಈ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ” ಎಂದರು.

“ಭಾರತದ ಮೊದಲ ಬಂದರು ಆಧಾರಿತ ಹಸಿರು ಹೈಡ್ರೋಜನ್ ಪೈಲಟ್ ಯೋಜನೆಯನ್ನು ತಮಿಳುನಾಡಿನ ವಿ.ಒ.ಚಿದಂಬರನಾರ್ ಬಂದರಿನಲ್ಲಿ ಪ್ರಾರಂಭಿಸಲಾಗಿದೆ. ಉಕ್ಕಿನ ವಲಯದಲ್ಲಿ ಐದು ಪೈಲಟ್ ಯೋಜನೆಗಳು ಹೈಡ್ರೋಜನ್ ಆಧಾರಿತ ಡಿಕಾರ್ಬೊನೈಸೇಶನ್ ಪ್ರದರ್ಶಿಸುತ್ತಿವೆ. ಇಂಧನ ಭರ್ತಿ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಹೈಡ್ರೋಜನ್ ಬಸ್‌ ಮತ್ತು ಇಂಧನ ತುಂಬುವ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ” ಎಂದು ಹೇಳಿದರು.

ಲಕ್ಷಾಂತರ ಉದ್ಯೋಗ ಸೃಷ್ಟಿ: “ಭಾರತದ ರಫ್ತು ಬಲಪಡಿಸಲು ಕಾಂಡ್ಲಾ, ಪ್ಯಾರದೀಪ್ ಮತ್ತು ಟುಟಿಕೋರಿನ್ ಬಂದರುಗಳಲ್ಲಿ ಹೈಡ್ರೋಜನ್ ಹಬ್‌ ಅಭಿವೃದ್ಧಿಪಡಿಸಲಾಗುತ್ತಿದೆ. ಎನ್‌ಟಿಪಿಸಿ, ರಿಲಯನ್ಸ್ ಮತ್ತು ಐಒಸಿಎಲ್‌ನಂತಹ ದೊಡ್ಡ ಉದ್ಯಮಗಳು, ಸ್ಟಾರ್ಟ್-ಅಪ್‌ಗಳು ಮತ್ತು ಎಂಎಸ್‌ಎಂಇಗಳು ಹೈಡ್ರೋಜನ್‌ನಲ್ಲಿ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿವೆ. ಲಕ್ಷಾಂತರ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿವೆ” ಎಂದರು.

MNRE ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ ಮಾತನಾಡಿ, “ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಕ್ರಮ ₹400 ಕೋಟಿ ಬಜೆಟ್ ವೆಚ್ಚ ಹೊಂದಿದ್ದು, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಚಾಲನೆ ಬೆಂಬಲಿಸಲು MNRE ಸಿದ್ಧವಾಗಿದೆ” ಎಂದು ಹೇಳಿದರು.

ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್‌ ನಿರ್ದೇಶಕ ಡಾ.ಅಭಯ್ ಭಾಕ್ರೆ, ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ. ಅಜಯ್ ಕುಮಾರ್ ಸೂದ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...