11 ಮಕ್ಕಳ ಸಾವು | ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಮಾರಾಟ ನಿಷೇಧ

Date:

ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ಭಾರೀ ವಿರೋಧ, ವಿವಾದಕ್ಕೆ ಗುರಿಯಾಗಿದೆ. ಕೇಂದ್ರ ಸರ್ಕಾರವು 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ನಿರ್ದೆಶನ ಹೊರಡಿಸಿದೆ. ಮಕ್ಕಳಿಗೆ ನೀಡಲಾಗಿದ್ದ ಕೋಲ್‌ಡ್ರಿಫ್ ಸಿರಪ್ ಮಾರಾಟವನ್ನು ಮಧ್ಯಪ್ರದೇಶ ಸರ್ಕಾರ ನಿಷೇಧಿಸಿದೆ. ಕೇರಳದಲ್ಲಿಯೂ ಸಿರಪ್ ಅನ್ನು ನಿಷೇಧಿಸಿ, ಅಲ್ಲಿ ಸರ್ಕಾರ ಆದೇಶಿಸಿದೆ.

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಆ ಸಿರಪ್ ಕೊಟ್ಟು, ಮಕ್ಕಳ ಸಾವಿಗೆ ಕಾರಣನಾಅಗಿದ್ದ ವೈದ್ಯನನ್ನು ಕೂಡ ಬಂಧಿಸಲಾಗಿದೆ ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ. ಚಿಂದ್ವಾರ ಜಿಲ್ಲೆಯ ಪಾರಾಸಿಯಾದ ಮಕ್ಕಳ ತಜ್ಞ ಪ್ರವೀಣ್ ಸೋನಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸೋನಿ ಅವರು ಸರ್ಕಾರಿ ವೈದ್ಯರಾಗಿದ್ದಾರೆ. ಆದಾಗ್ಯೂ, ಅವರು ಖಾಸಗಿ ಕ್ಲಿನಿಕ್ಅನ್ನು ನಡೆಸುತ್ತಿದ್ದು, ಆ ಕ್ಲಿನಿಕ್‌ಗೆ ಬಂದಿದ್ದ ಮಕ್ಕಳಿಗೆ ಸಿರಪ್ ಕೊಟ್ಟಿದ್ದರು ಎಂದು ವರದಿಯಾಗಿದೆ.

ಸರ್ಕಾರವು ಈ ಹಿಂದೆ ಕೋಲ್‌ಡ್ರಿಫ್ ಸಿರಪ್ ಮಾರಾಟವನ್ನು ನಿಷೇಧಿಸಿತ್ತು. ಔಷಧದ ಮಾದರಿಗಳಲ್ಲಿ 48.6% ಡೈಥಿಲೀನ್ ಗ್ಲೈಕಾಲ್ ಎಂಬ ವಿಷಕಾರಿ ವಸ್ತು ಪತ್ತೆಯಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ, ಈ ಸಿರಪ್‌ಅನ್ನು ಪರೀಕ್ಷಿಸಿದ್ದ ಚೆನ್ನೈನಲ್ಲಿರುವ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ಔಷಧ ವಿಶ್ಲೇಷಕರು ‘ಪ್ರಮಾಣಿತ ಗುಣಮಟ್ಟದಲ್ಲಿಲ್ಲ’ ಎಂದು ವರದಿ ನೀಡಿದ್ದರು. ಆ ವರದಿ ಆಧರಿಸಿ ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶನಾಲಯವು ಸಿರಪ್ ಮಾರಾಟ ನಿಷೇಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲ್‌ಡ್ರಿಫ್ ಲೇಬಲ್‌ನ ಕೆಮ್ಮಿನ ಸಿರಪ್‌ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ವಿರುದ್ಧವೂ ಮಧ್ಯಪ್ರದೇಶ ಸರ್ಕಾರ ಪ್ರಕರಣ ದಾಖಲಿಸಿದೆ.

ಈ ಲೇಖನ ಓದಿದ್ದೀರಾ?: ಸಮೀಕ್ಷೆಯ ಸಮೀಕ್ಷೆ; ನಗರವಾಸಿಗಳ ಜಾತಿ ಮನಸ್ಥಿತಿ ಅನಾವರಣ

ಮಧ್ಯಪ್ರದೇಶದಲ್ಲಿ ಸಂಭವಿಸಿರುವ ಸಾವುಗಳನ್ನು ಅಲ್ಲಿನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ‘ಅತ್ಯಂತ ದುರಂತ’ ಎಂದಿದ್ದಾರೆ. ಈ ಸಾವುಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

“ಕೋಲ್‌ಡ್ರಿಫ್ ಸಿರಪ್‌ನಿಂದಾಗಿ ಚಿಂದ್ವಾರದಲ್ಲಿ ಮಕ್ಕಳ ಸಾವುಗಳು ಅತ್ಯಂತ ದುರಂತ. ಈ ಸಿರಪ್ ಮಾರಾಟವನ್ನು ಮಧ್ಯಪ್ರದೇಶದಾದ್ಯಂತ ನಿಷೇಧಿಸಲಾಗಿದೆ. ಸಿರಪ್ ತಯಾರಿಸುವ ಕಂಪನಿ ಮೇಲೂ ನಿಷೇಧ ಹೇರಲಾಗುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...