ಪಂಜಾಬ್‌ | ಲುಧಿಯಾನ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ; 11 ಮಂದಿ ಸಾವು

Date:

  • ಪಂಜಾಬ್‌ನ ಲುಧಿಯಾನ ನಗರದಲ್ಲಿ ಮಿಥೇನ್‌ಅನಿಲ ಸೋರಿಕೆ ಶಂಕೆ
  • ಶೇರ್ಪುರ್‌ ಚೌಕ್‌ ಬಳಿಯ ಗಿಯಾಸ್‌ಪುರ ಪ್ರದೇಶದ ಕಾರ್ಖಾನೆಯಲ್ಲಿ ಘಟನೆ

ಪಂಜಾಬ್‌ನ ಲುಧಿಯಾನ ನಗರದಲ್ಲಿನ ಕಾರ್ಖಾನೆಯೊಂದರಲ್ಲಿ ಭಾನುವಾರ (ಏಪ್ರಿಲ್ 30) ಅನಿಲ ಸೋರಿಕೆ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನ ಲುಧಿಯಾನ ನಗರದ ಶೇರ್ಪುರ್‌ ಚೌಕ್‌ ಬಳಿಯ ಗಿಯಾಸ್‌ಪುರ ಪ್ರದೇಶದ ಸುವಾ ರಸ್ತೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಿಗ್ಗೆ 7.15ಕ್ಕೆ ಅನಿಲ ಸೋರಿಕೆಯಾಗಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಐವರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಿಲ ಸೋರಿಕೆ ಬಳಿಕ ಪ್ರದೇಶದಲ್ಲಿ ಜನರ ಸಂಚಾರ ಬಂದ್‌ ಮಾಡಲಾಗಿದ್ದು, ಲುಧಿಯಾನ ನಗರದಲ್ಲಿ ನಿಗಾ ವಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರದೇಶಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ವೈದ್ಯರ ತಂಡ ಹಾಗೂ ಆಂಬುಲೆನ್ಸ್‌ ಸ್ಥಳದಲ್ಲಿ ಬೀಡುಬಿಟ್ಟಿವೆ ಎಂದು ಪೊಲೀಸರು ತಿಳಿಸಿದರು.

ಅನಿಲ ಸೋರಿಕೆಯಾಗಿ ಅಸ್ವಸ್ಥಗೊಂಡವರಲ್ಲಿ ಐದು ಮಂದಿ ಮಹಿಳೆಯರು, ಆರು ಪುರುಷರು ಮತ್ತು ಇಬ್ಬರು ಬಾಲಕರು ಸೇರಿದ್ದಾರೆ. “ಅನಿಲ ಸೋರಿಕೆಗೆ ಕಾರಣ ಪತ್ತೆಯಾಗಿಲ್ಲ. ಇದರ ಬಗ್ಗೆ ಎನ್‌ಡಿಆರ್‌ಎಫ್‌ ತನಿಖೆ ನಡೆಸುತ್ತದೆ” ಎಂದು ಲುಧಿಯಾನದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್‌ ಸ್ವಾತಿ ತಿವಾನಾ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಅತಿ ಹೆಚ್ಚು ಕಳ್ಳತನವಾಗುತ್ತಿರುವ ಕಾರು-ಬೈಕ್‌ ಯಾವುದು ಗೊತ್ತಾ?

“ಈವರೆಗೆ ಲುಧಿಯಾನದ ಘಟನೆಯಲ್ಲಿ 11 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮಿಥೇನ್‌ ಅನಿಲ ದುರಂತಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ. ಮಾದರಿ ಸಂಗ್ರಹಿಸುತ್ತಿದ್ದು ಪರಿಶೀಲಿಸಲಾಗುತ್ತದೆ” ಎಂದು ಲುಧಿಯಾನದ ಉಪ ಆಯುಕ್ತೆ ಸುರಭಿ ಮಲಿಕ್‌ ತಿಳಿಸಿದರು.

ಮೃತರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್‌ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

“ಅನಿಲ ಸೋರಿಕೆ ಘಟನೆಯಿಂದ ತೀವ್ರ ದುಃಖವಾಗಿದೆ. ಪೊಲೀಸರು, ಎನ್‌ಡಿಆರ್‌ಎಫ್‌ ಮತ್ತು ಸರ್ಕಾರ ಸ್ಥಳದಲ್ಲಿದೆ. ಎಲ್ಲ ರೀತಿಯ ನೆರವು ನೀಡಲಾಗುವುದು” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...