ಚಾರ್‌ ಧಾಮ್ ಯಾತ್ರೆ| ಯಾತ್ರಿಕರ ಸಂಖ್ಯೆ ದುಪ್ಪಟ್ಟು; ಮೊದಲ ಐದು ದಿನಗಳಲ್ಲಿ 11 ಸಾವು

Date:

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ಮೇ 10ರಂದು ಪ್ರಾರಂಭವಾಗಿದ್ದು ಪ್ರಸ್ತುತ ಯಾತ್ರಿಕರ ಪ್ರಮಾಣವು ದುಪ್ಪಟ್ಟಾಗಿದೆ. ಮೊದಲ ಐದು ದಿನಗಳಲ್ಲಿ 11 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ವರದಿ ಮಾಡಿದೆ.

ಯಾವುದೇ ವೈದ್ಯಕೀಯ ಸ್ಥಿತಿಯ, ತೊಂದರೆಯ ಬಗ್ಗೆ ಪಾರದರ್ಶಕವಾಗಿ ಬಹಿರಂಗಪಡಿಸುವಂತೆ ಯಾತ್ರಾರ್ಥಿಗಳ ಬಳಿ ಗರ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ ವಿನಂತಿಸಿದ್ದಾರೆ. ಸಮಗ್ರ ಆರೋಗ್ಯ ತಪಾಸಣೆ ಕ್ರಮಗಳನ್ನು ಜಾರಿಗೆ ತರುವ ಭರವಸೆಯನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಕರ್ನಾಟಕದ ಅಮರನಾಥ ಯಾತ್ರಾರ್ಥಿಗಳು ಸುರಕ್ಷಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲಾ ಭಕ್ತರ ಸ್ಕ್ರೀನಿಂಗ್‌ ಮಾಡಲಾಗುತ್ತಿದೆ. ಹಾಗೆಯೇ ಭಕ್ತರ ವೈದ್ಯಕೀಯ ಇತಿಹಾಸವನ್ನು ವಿವರಿಸಲು ಫಾರ್ಮ್‌ಗಳನ್ನು ಒದಗಿಸಲಾಗುತ್ತಿದೆ” ಎಂದು ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

“ಭಕ್ತರು ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸುವುದು ಕಡ್ಡಾಯವಾಗಿದೆ. ನಾಲ್ಕು ಧಾಮಗಳು ಅಧಿಕ ಎತ್ತರದಲ್ಲಿದೆ. ಹವಾಮಾನ ಬದಲಾವಣೆಗೆ ಒಗ್ಗಿಕೊಳ್ಳುವುದು ಸವಾಲಾಗಿರುತ್ತದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಹಿಮಪಾತ | ಕೇದಾರನಾಥ ಯಾತ್ರೆ ಸ್ಥಗಿತ; ಆರೆಂಜ್‌ ಅಲರ್ಟ್

“ಇಲ್ಲಿಯವರೆಗೆ, ವಿವಿಧ ಸ್ಥಳಗಳಲ್ಲಿ 11 ವ್ಯಕ್ತಿಗಳ ನಿಧನವಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಹೆಚ್ಚಾಗಿ ಉಸಿರಾಟ ಅಥವಾ ಇತರ ವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿರುವ ವೃದ್ಧರು ಸಾವನ್ನಪ್ಪಿದ್ದಾರೆ” ಎಂದು ಮಾಹಿತಿ ನೀಡಿದರು.

ಚಾರ್ ಧಾಮ್ ಯಾತ್ರೆಯಲ್ಲಿ ಯಾತ್ರಾರ್ಥಿಗಳ ಸಂಖ್ಯೆಯು ಭಾರೀ ಪ್ರಮಾಣದಲ್ಲಿ ಅಧಿಕವಾದ ಕಾರಣದಿಂದಾಗಿ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರತುರಿ ಅವರು ವಿಐಪಿ ದರ್ಶನದ ಮೇಲಿನ ನಿಷೇಧವನ್ನು ಮೇ 31ರವರೆಗೆ ವಿಸ್ತರಿಸಿದ್ದಾರೆ.

ಯಮುನೋತ್ರಿ, ಗಂಗೋತ್ರಿ ಮತ್ತು ಕೇದಾರನಾಥ ಧಾಮಕ್ಕೆ ಮೇ 10ರಂದು ತೀರ್ಥಯಾತ್ರೆ ಪ್ರಾರಂಭವಾಗಿದೆ. ಮೇ 12ರಂದು ಬದರಿನಾಥ ಧಾಮದ ಬಾಗಿಲು ತೆರೆದಿದೆ. ಈಗಾಗಲೇ 1.55 ಲಕ್ಷ ಯಾತ್ರಿಕರು ಕೇದಾರನಾಥಕ್ಕೆ, 70,000 ಕ್ಕೂ ಹೆಚ್ಚು ಯಮುನೋತ್ರಿಗೆ ಮತ್ತು 63,000 ಕ್ಕೂ ಹೆಚ್ಚು ಯಾತ್ರಿಕರು ಗಂಗೋತ್ರಿಗೆ ಪ್ರಯಾಣಿಸಿದ್ದಾರೆ. ಕೇವಲ ಮೂರು ದಿನಗಳಲ್ಲಿ, ಬದರಿನಾಥ ಧಾಮ್ 45,000 ಯಾತ್ರಿಕರು ಆಗಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...