ಮಧ್ಯಪ್ರದೇಶ| ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ; 11 ಮನೆಗಳನ್ನು ಕೆಡವಿದ ಪೊಲೀಸರು!

Date:

ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆಯಾದ ಬಳಿಕ 11 ಮನೆಗಳನ್ನು ಪೊಲೀಸರು ಕೆಡವಿದ ಘಟನೆ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಂಡ್ಲಾದಲ್ಲಿ ನಡೆದಿದೆ.

ಮಧ್ಯಪ್ರದೇಶದಲ್ಲಿ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ ಪೊಲೀಸರು 11 ಮನೆಗಳನ್ನು ಕೆಡವಿದ್ದಾರೆ.

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ 11 ಜನರು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದ ಮನೆಗಳನ್ನು ನೆಲಸಮಗೊಳಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ವಧೆ ಮಾಡಲೆಂದು ತಂದಿರಿಸಲಾಗಿದ್ದ ಅಧಿಕ ಸಂಖ್ಯೆಯ ಹಸುಗಳನ್ನು ಪಡಿಸಿಕೊಳ್ಳಲಾಗಿದೆ ಎಂಬ ಸುಳಿವು ದೊರೆತ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ಪಿಟಿಐಗೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಗೋಮಾಂಸ ರುಚಿಯಾಗಿರಲು ಹಸುಗಳಿಗೆ ಡ್ರೈ ಫ್ರೂಟ್ಸ್‌ ತಿನ್ನಿಸಿ, ಬಿಯರ್‌ ಕುಡಿಸಿ: ಮಾರ್ಕ್‌ ಜುಕರ್‌ಬರ್ಗ್‌

“ಮಾಹಿತಿ ದೊರೆತ ಬಳಿಕ ತಂಡವು ಅಲ್ಲಿಗೆ ಧಾವಿಸಿದೆ. ಆರೋಪಿಗಳ ಹಿತ್ತಲಿನಲ್ಲಿ ಕಟ್ಟಿಹಾಕಲಾಗಿದ್ದ 150 ಹಸುಗಳನ್ನು ನಾವು ಪತ್ತೆ ಹಚ್ಚಿದ್ದೇವೆ. ಎಲ್ಲಾ 11 ಆರೋಪಿಗಳ ಮನೆಗಳ ಫ್ರಿಡ್ಜ್‌ನಲ್ಲಿದ್ದ ದನದ ಮಾಂಸವನ್ನು ನಾವು ವಶಪಡಿಸಿಕೊಂಡಿದ್ದೇವೆ. ಕೊಠಡಿಯಲ್ಲಿ ದನದ ಕೊಬ್ಬು, ದನದ ಚರ್ಮ, ಮೂಳೆಗಳು ಕೂಡಾ ಪತ್ತೆಯಾಗಿದೆ” ಎಂದು ರಜತ್ ಸಕ್ಲೇಚಾ ಮಾಹಿತಿ ನೀಡಿದ್ದಾರೆ.

ಸ್ಥಳೀಯ ಸರ್ಕಾರಿ ಪಶುವೈದ್ಯರು ವಶಪಡಿಸಿಕೊಂಡ ಮಾಂಸವು ದನದ ಮಾಂಸ ಎಂದು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಹೈದರಾಬಾದ್‌ಗೆ ಮಾದರಿಗಳನ್ನು ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿರುವುದರಿಂದ ಅವುಗಳನ್ನು ನೆಲಸಮ ಮಾಡಲಾಗಿದೆ ಎಂದು ಎಸ್‌ಪಿ ಹೇಳಿದರು.

“ಶುಕ್ರವಾರ ರಾತ್ರಿ ಹಸುಗಳು ಮತ್ತು ದನದ ಮಾಂಸವನ್ನು ವಶಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು ಉಳಿದ 10 ಮಂದಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ಆರೋಪಿಗಳೆಲ್ಲರೂ ಮುಸ್ಲಿಮರು” ಎಂದು ತಿಳಿಸಿದರು.

“150 ಹಸುಗಳನ್ನು ಗೋಶಾಲೆಗೆ ಕಳುಹಿಸಲಾಗಿದೆ. ಭೈನಸ್ವಾಹಿ ಪ್ರದೇಶವು ಕೆಲವು ಸಮಯದಿಂದ ಗೋವು ಕಳ್ಳಸಾಗಣೆಯ ಕೇಂದ್ರವಾಗಿದೆ. ಗೋ ಹತ್ಯೆ ಮಾಡಿದರೆ ಮಧ್ಯಪ್ರದೇಶದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ” ಎಂದು ಸಕ್ಲೇಚಾ ಹೇಳಿದರು.

ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತ

ಇನ್ನು ಪೊಲೀಸರ ಈ ಕ್ರಮಕ್ಕೆ ಖಂಡನೆ ವ್ಯಕ್ತವಾಗಿದೆ. ಈ ಸುದ್ದಿಯನ್ನು ಹಂಚಿಕೊಂಡಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಇದು ಜಂಗಲ್ (ಕಾಡು) ಫ್ಯಾಸಿಸ್ಟ್ ಆಳ್ವಿಕೆ! ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ” ಎಂದು ಹೇಳಿದ್ದಾರೆ.

ಸುದ್ದಿಗೆ ಕಾಮೆಂಟ್ ಮಾಡಿರುವ ನೆಟ್ಟಿಗರೊಬ್ಬರು, “ಗೋಮಾಂಸ ತಿನ್ನುವ ಮಹಿಳೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದರೆ ಏನು ಶಿಕ್ಷೆ. ನಾನು ಪ್ರಧಾನಿ ಪರವಾಗಿ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಮೊದಲನೆಯದಾಗಿ ನಮ್ಮ ದೇಶ ಸಸ್ಯಾಹಾರಿ ದೇಶವಲ್ಲ. ಎರಡನೆಯದಾಗಿ ನಮ್ಮ ದೇಶದಲ್ಲಿ ದನದ ಮಾಂಸ ತಿನ್ನುವುದು ಬ್ಯಾನ್ ಆಗಿಲ್ಲ. ಮೂರನೆಯದಾಗಿ ಗೋ ಹತ್ಯೆ ಮಾತ್ರ ನಿಷೇಧವಾಗಿರುವುದು. ನಾಲ್ಕನೆಯದಾಗಿ ಭಾರತ ಎರಡನೇ ಅತೀ ದೊಡ್ಡ ಗೋ ಮಾಂಸ ರಫ್ತು ಮಾಡುವ ದೇಶ. ಅಷ್ಟಕ್ಕೂ ಫ್ರಿಡ್ಜ್‌ನಲ್ಲಿದದ್ದು ಗೋಮಾಂಸವೇ ಎನ್ನುವುದಕ್ಕೆ ಸಾಕ್ಷಿ ಕೇಳಬೇಕಾಗುತ್ತದೆ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...