ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಸಾವು

Date:

  • ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ಸಾವನ್ನಪ್ಪಿದವರ ಬಗ್ಗೆ ಅಧಿಕೃತ ಮಾಹಿತಿ
  • ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹5 ಲಕ್ಷ ಘೋಷಿಸಿದ ದೇವೇಂದ್ರ ಫಡ್ನಾವಿಸ್

ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಿದ್ದ ಮಹಾರಾಷ್ಟ್ರ ಸರ್ಕಾರ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಜನರಲ್ಲಿ 11 ಮಂದಿ ಸುಡು ಬಿಸಿಲನ್ನು ತಾಳಲಾರದೆ ಮೃತಪಟ್ಟಿದ್ದಾರೆ.

ಸೂಕ್ತ ವ್ಯವಸ್ಥೆಯಿಲ್ಲದೆ ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ನಡೆದಿರುವ ಅನಾಹುತದ ಬಗ್ಗೆ ಸ್ವತಃ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ತಡವಾಗಿಯಾದರೂ ಮಾಹಿತಿ ನೀಡಿದ್ದಾರೆ.

ಭಾನುವಾರ ನವಿ ಮುಂಬೈನಲ್ಲಿ ಗರಿಷ್ಠ 38 ಡಿಗ್ರಿ ತಾಪಮಾನ ದಾಖಲಾಗಿತ್ತು. ಬಿಸಿಲಿನ ಝಳಕ್ಕೆ ಜನರು ಹೈರಾಣಾಗಿದ್ದಾರೆ. ಅನೇಕರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸುಮಾರು 50 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವಿ ಮುಂಬೈನ ಖಾರ್‌ಘರ್‌ನಲ್ಲಿ ಭಾನುವಾರ ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಯಾನೆ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಸನ್ಮಾನಿಸಲು ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ’ ಸಮಾರಂಭ ಆಯೋಜಿಸಲಾಗಿತ್ತು. ಅಮಿತ್ ಶಾ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು. ಸಮಾರಂಭಕ್ಕೆ ಭಾಗವಹಿಸಿದ್ದವರಲ್ಲಿ 11 ಮಂದಿ ಸುಡು ಬಿಸಿಲಿಗೆ ಬಲಿಯಾಗಿದ್ದಾರೆ.

ವಿವಿಐಪಿ ಅತಿಥಿಗಳಿಗಾಗಿ ಕಾಯುತ್ತಿದ್ದ ಅನೇಕರು ಗಂಟೆಗಟ್ಟಲೆ ಬಿಸಿಲಿನಲ್ಲಿ ಕುಳಿತ ಕಾರಣ ಅಸ್ವಸ್ಥರಾಗಿದ್ದರು. 123ಕ್ಕೂ ಹೆಚ್ಚು ಜನರಿಗೆ ಸುಡು ಬಿಸಿಲಿಗೆ ಬಸವಳಿದು ನಿರ್ಜಲೀಕರಣ, ಆಯಾಸದಂತಹ ಆರೋಗ್ಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಅಸ್ವಸ್ಥರನ್ನು ಆಸ್ಪತ್ರೆಗೆ ಸೇರಿಸಿದರೂ 11 ಜನರು ಮೃತಪಟ್ಟಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ.

ಈ ಸುದ್ದಿ ಓದಿದ್ದೀರಾ? ಉಮೇಶ್‌ ಪಾಲ್‌ ಹತ್ಯೆ | ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಕುಟುಂಬ ಬಹುತೇಕ ಅಂತ್ಯಗೊಳಿಸಿದ ಯೋಗಿ ಸರ್ಕಾರ

ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರ ₹5 ಲಕ್ಷ ಪರಿಹಾರ ಘೋಷಿಸಿದೆ. ಆಸ್ಪತ್ರೆಗೆ ದಾಖಲಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ.

ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ಬಿಸಿಲಿಗೆ ಇಷ್ಟೊಂದು ಜನರು ಮೃತಪಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಹೇಳಿದೆ. ಆದರೆ ಮುಂಜಾಗ್ರತೆ ಕೈಗೊಳ್ಳದೆ ಇರುವ ಬಗ್ಗೆ ಸರ್ಕಾರದ ಮೇಲೆ ಟೀಕೆ ವ್ಯಕ್ತವಾಗಿದೆ.

ಅವಘಡ ಸಂಭವಿಸಿದ ನಂತರ ಮುಖ್ಯಮಂತ್ರಿ ಏಕನಾಥ್‌ ಶಿಂದೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು.

ಕಾರ್ಯಕ್ರಮದಲ್ಲಿ ಏಕನಾಥ್‌ ಶಿಂದೆ, ಫಡ್ನಾವಿಸ್‌ ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಫೆಬ್ರವರಿಯಿಂದ ದೇಶದಲ್ಲಿ ಹೆಚ್ಚಿನ ತಾಪಮಾನ ವರದಿಯಾಗಿದೆ. ಸಮಾರಂಭ ನಡೆದ ದಿನ ಪ್ರದೇಶದಲ್ಲಿ 38 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...