ನೋಯ್ಡಾ ವ್ಯಾಲೆಂಟೈನ್ಸ್‌ ಡೇ ದುರಂತ: 15 ವರ್ಷಗಳ ಪ್ರೇಮ ಒಂದು ‘ವಾಟ್ಸಾಪ್‌ ಸಂದೇಶ’ದಲ್ಲಿ ಅಂತ್ಯ!

Date:

ಉತ್ತರ ಪ್ರದೇಶದ ನೋಯ್ಡಾದಲ್ಲಿ ಪ್ರೇಮಿಗಳ ದಿನದಂದೇ (ವ್ಯಾಲೆಂಟೈನ್ಸ್ ಡೇ) ಕಾರಿನೊಳಗೆ ಶವವಾಗಿ ಪತ್ತೆಯಾದ ಸುಮಿತ್ ಮತ್ತು ರೇಖಾ ಅವರ ಸಾವಿನ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. 15 ವರ್ಷಗಳ ಸುದೀರ್ಘ ಪ್ರೀತಿಯ ನಂತರ ಈ ಜೋಡಿ ದುರಂತ ಅಂತ್ಯ ಕಂಡಿದ್ದು, ಸಾವಿಗೂ ಮುನ್ನ ಸುಮಿತ್ ಬರೆದಿದ್ದಾನೆ ಎನ್ನಲಾದ ಒಂದು ‘ವಾಟ್ಸಾಪ್ ಮೆಸೇಜ್’ ಈಗ ತನಿಖೆಯ ದಿಕ್ಕನ್ನೇ ಬದಲಿಸಿದೆ. ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಶಂಕಿಸಿದ್ದರೆ, ಮೃತರ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸುತ್ತಿದ್ದಾರೆ

ಮೃತರನ್ನು ದೆಹಲಿಯ ತ್ರಿಲೋಕಪುರಿ ನಿವಾಸಿ ಸುಮಿತ್ (32) ಮತ್ತು ನೋಯ್ಡಾದ ಸೆಕ್ಟರ್ 101ರ ನಿವಾಸಿ ರೇಖಾ (26) ಎಂದು ಗುರುತಿಸಲಾಗಿದೆ. ಶನಿವಾರದಂದು ಸೆಕ್ಟರ್ 107ರ ಸಮೀಪವಿರುವ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನೊಳಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಇಬ್ಬರ ದೇಹಗಳ ಮೇಲೂ ಗುಂಡೇಟಿನ ಗಾಯಗಳಿದ್ದು, ಕಾರು ಒಳಗಿನಿಂದ ಲಾಕ್ ಆಗಿತ್ತು. ಸುಮಿತ್ ಕೈಯಲ್ಲಿ ಪಿಸ್ತೂಲು ಪತ್ತೆಯಾಗಿರುವುದರಿಂದ, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣದಂತೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 3.39ಕ್ಕೆ ಸುಮಿತ್ ಟೈಪ್ ಮಾಡಿದ್ದಾನೆ ಎನ್ನಲಾದ ವಾಟ್ಸಾಪ್ ಸಂದೇಶವನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆ ಸಂದೇಶದಲ್ಲಿ, “ನಾನು ಮತ್ತು ರೇಖಾ ಕಳೆದ 15 ವರ್ಷಗಳಿಂದ ಪ್ರೀತಿಸುತ್ತಿದ್ದೆವು ಮತ್ತು ಮದುವೆಯಾಗಲು ನಿರ್ಧರಿಸಿದ್ದೆವು. ಆದರೆ ರೇಖಾ ಇತ್ತೀಚೆಗೆ ಬೇರೆಯವರನ್ನು ಮದುವೆಯಾಗಲು ನಿರ್ಧರಿಸಿದ್ದಾಳೆ,” ಎಂದು ಬರೆಯಲಾಗಿದ್ದು, ಈ ಬೆಳವಣಿಗೆಯೇ ತಾನು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕಾರಣ ಎಂದು ಉಲ್ಲೇಖಿಸಲಾಗಿದೆ. ಆದರೆ, ಈ ಸಂದೇಶವನ್ನು ಯಾರಿಗಾದರೂ ಕಳುಹಿಸಲಾಗಿದೆಯೇ ಅಥವಾ ಅದು ಡ್ರಾಫ್ಟ್ ರೂಪದಲ್ಲಿ ಉಳಿದಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

ಈ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಎರಡೂ ಕುಟುಂಬಗಳು ಭಿನ್ನ ಹೇಳಿಕೆಗಳನ್ನು ನೀಡಿವೆ. ಪೊಲೀಸರ ಆತ್ಮಹತ್ಯೆ ವರದಿಯನ್ನು ಸುಮಿತ್ ಕುಟುಂಬದವರು ತಳ್ಳಿಹಾಕಿದ್ದಾರೆ. “ಇಬ್ಬರನ್ನೂ ಜಾತಿ ದ್ವೇಷದ ಕಾರಣದಿಂದ ಕೊಲೆ ಮಾಡಲಾಗಿದೆ. ಇಬ್ಬರೂ 10 ವರ್ಷಕ್ಕೂ ಹೆಚ್ಚು ಕಾಲ ಒಟ್ಟಿಗೆ ಇದ್ದರು ಮತ್ತು ಅವರ ಸಂಬಂಧದ ಬಗ್ಗೆ ಎರಡೂ ಕುಟುಂಬಗಳಿಗೆ ತಿಳಿದಿತ್ತು. ರೇಖಾ ನಮ್ಮ ಮನೆಯ ಹಲವಾರು ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾಳೆ,” ಎಂದು ಸುಮಿತ್ ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ಸುಮಿತ್ ಕುಟುಂಬಕ್ಕೆ ಅಂತಾರಾಷ್ಟ್ರೀಯ ಸಂಖ್ಯೆಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದವು ಎಂದೂ ಅವರು ಆರೋಪಿಸಿದ್ದಾರೆ.

ರೇಖಾ ಕುಟುಂಬದವರು ಬೇರೆಯದೇ ಆಯಾಮವನ್ನು ತೆರೆದಿಟ್ಟಿದ್ದಾರೆ. ಸುಮಿತ್ ಈ ಹಿಂದೆ ರೇಖಾಳಿಗೆ ಕಿರುಕುಳ ನೀಡಿದ್ದ ಮತ್ತು ಈ ಬಗ್ಗೆ ದೂರು ನೀಡಲಾಗಿತ್ತು, ನಂತರ ಸುಮಿತ್ ಕ್ಷಮೆ ಕೇಳಿದ ಮೇಲೆ ವಿವಾದ ಬಗೆಹರಿದಿತ್ತು ಎಂದು ಅವರು ಹೇಳಿದ್ದಾರೆ. ಇಬ್ಬರ ಜಾತಿ ಬೇರೆಯಾಗಿದ್ದರಿಂದ ರೇಖಾ ಮನೆಯವರು ಆಕೆಗೆ ಬೇರೆಡೆ ಮದುವೆ ನಿಗದಿಪಡಿಸಿದ್ದರು. ಈ ಕಾರಣದಿಂದ ಇತ್ತೀಚೆಗೆ ಅವರ ಸಂಬಂಧ ಹಳಸಿತ್ತು. ಅಲ್ಲದೆ, ತಮ್ಮ ಗ್ರಾಮವಾದ ಸಾಲಾರ್‌ಪುರದಿಂದ ಕೇವಲ ಕೆಲವು ನೂರು ಮೀಟರ್‌ಗಳ ದೂರದಲ್ಲಿ ಕಾರು ಪತ್ತೆಯಾಗಿರುವುದು ಸಂಶಯಾಸ್ಪದವಾಗಿದೆ ಎಂದು ರೇಖಾ ಸಹೋದರ ಆರೋಪಿಸಿದ್ದಾರೆ.

ಸುಮಿತ್ ಕೈಯಲ್ಲಿ ಪಿಸ್ತೂಲು ಸಿಕ್ಕಿರುವುದು ಮತ್ತು ಕಾರು ಒಳಗಿನಿಂದ ಲಾಕ್ ಆಗಿರುವುದು ಆತ್ಮಹತ್ಯೆಯ ಕಡೆಗೆ ಬೊಟ್ಟು ಮಾಡುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿನ ನೈಜ ಕಾರಣ ತಿಳಿಯಲಿದೆ. ಎರಡೂ ಕುಟುಂಬಗಳ ಆರೋಪಗಳನ್ನು ಒಳಗೊಂಡಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...