ವಿಕಲಚೇತನ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: 17 ಜನರ ಡಿಎನ್‌ಎ ಪರೀಕ್ಷೆಯ ಬಳಿಕ ಸತ್ಯ ಬಯಲು

Date:

ಮಾತನಾಡದ ಹಾಗೂ ಕಿವಿ ಕೇಳಿಸಿಕೊಳ್ಳಲಾಗದ ತನ್ನ 20 ವರ್ಷದ ವಿಕಲಚೇತನ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರವೆಸಗಿ, ಆಕೆ ಗರ್ಭಿಣಿಯಾಗಲು ಕಾರಣವಾದ ಅಮಾನವೀಯ ಘಟನೆಯೊಂದು ಮುಂಬೈನ ಕಫ್ ಪರೇಡ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ಭ್ರೂಣದ ಡಿಎನ್‌ಎ ಪರೀಕ್ಷೆಯು ತಂದೆಯ ಡಿಎನ್‌ಎಗೆ ಹೋಲಿಕೆಯಾದ ಬಳಿಕ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ಒಟ್ಟು 17 ಶಂಕಿತರ ಡಿಎನ್‌ಎ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದರು. ಈ ಪೈಕಿ ಸಂತ್ರಸ್ತೆಯ ತಂದೆಯ ವರದಿ ‘ಪಾಸಿಟಿವ್’ ಬಂದಿದ್ದು, ಈ ಘೋರ ಕೃತ್ಯದಲ್ಲಿ ಆತನ ಪಾತ್ರವನ್ನು ದೃಢಪಡಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ (2025) ಈ ಪ್ರಕರಣ ಬೆಳಕಿಗೆ ಬಂದಿತ್ತು. ಸಂತ್ರಸ್ತ ಯುವತಿ ತನಗೆ ಹೊಟ್ಟೆಯಲ್ಲಿ ತೀವ್ರ ಅಸ್ವಸ್ಥತೆ ಉಂಟಾಗುತ್ತಿದ್ದು, “ಹೊಟ್ಟೆಯೊಳಗೆ ಹುಳುಗಳು ಹರಿದಾಡಿದಂತಾಗುತ್ತಿದೆ” ಎಂದು ಸನ್ನೆಗಳ ಮೂಲಕ ತನ್ನ ಅಜ್ಜಿಗೆ ತಿಳಿಸಿದ್ದಳು. ಕೂಡಲೇ ಆಕೆಯನ್ನು ನಗರದ ‘ಕಾಮಾ ಮತ್ತು ಅಲ್ಬ್ಲೆಸ್’ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ತಪಾಸಣೆಯ ವೇಳೆ ಯುವತಿ ಐದು ತಿಂಗಳ ಗರ್ಭಿಣಿ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿತು. ಆಸ್ಪತ್ರೆಯ ಆಡಳಿತ ಮಂಡಳಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಬೈಲ್ ಮೃತ್ಯು ಮೋಡಿಯಿಂದ ಮಕ್ಕಳನ್ನು ರಕ್ಷಿಸುವವರಾರು?

ಸಂತ್ರಸ್ತೆಗೆ ಮಾತನಾಡಲು ಸಾಧ್ಯವಾಗದ ಕಾರಣ ಹಾಗೂ ಹೇಳಿಕೆ ನೀಡಲು ಆಕೆ ಹಿಂಜರಿದಿದ್ದರಿಂದ ಪೊಲೀಸರಿಗೆ ಆರಂಭದಲ್ಲಿ ತನಿಖೆ ನಡೆಸುವುದು ಕಷ್ಟಕರವಾಗಿತ್ತು. ಈ ವೇಳೆ ಪೊಲೀಸರು ತಂದೆಯನ್ನು ಪ್ರಶ್ನಿಸಿದಾಗ, ಆತ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ತಳ್ಳಿಹಾಕಿದ್ದಲ್ಲದೆ, ಮಗಳು ಹೇಗೆ ಗರ್ಭಿಣಿಯಾದಳು ಎಂಬುದು ತನಗೆ ತಿಳಿದಿಲ್ಲ ಎಂದು ನಾಟಕವಾಡಿದ್ದನು. ಅಲ್ಲದೆ, ದೂರು ದಾಖಲಿಸಲು ಸಹ ಆತ ನಿರಾಕರಿಸಿದ್ದನು.

ನಂತರ ಆಪ್ತಸಮಾಲೋಚನೆ ನಡೆಸಿದ ಬಳಿಕ, ಸಂತ್ರಸ್ತೆ ದೂರು ನೀಡಲು ಒಪ್ಪಿಕೊಂಡಳು. ಆಕೆ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಒಬ್ಬ ಅಪ್ರಾಪ್ತ ಬಾಲಕ (17 ವರ್ಷ) ಸೇರಿದಂತೆ ಇಬ್ಬರನ್ನು ಆರಂಭದಲ್ಲಿ ವಶಕ್ಕೆ ಪಡೆದಿದ್ದರು. ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯಲು ಪೊಲೀಸರು ತಂದೆ ಸೇರಿದಂತೆ ಒಟ್ಟು 17 ಶಂಕಿತರ ರಕ್ತ ಮತ್ತು ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದರು. ಇವುಗಳನ್ನು ಭ್ರೂಣದ ಆನುವಂಶಿಕ ಮಾಹಿತಿಯೊಂದಿಗೆ ಹೋಲಿಕೆ ಮಾಡಲಾಯಿತು.

ಜನವರಿ 27 ರಂದು ಬಂದ ವರದಿಯಲ್ಲಿ ಕೇವಲ ಒಬ್ಬರ ಡಿಎನ್‌ಎ ಮಾತ್ರ ಭ್ರೂಣದೊಂದಿಗೆ ತಾಳೆಯಾಗಿದೆ. ಅದು ಸಂತ್ರಸ್ತೆಯ ತಂದೆಯದ್ದೇ ಆಗಿತ್ತು ಎಂಬುದು ತನಿಖೆಯಲ್ಲಿ ತಿರುವು ನೀಡಿತು. ಕಳೆದ ವರ್ಷದ ಮಾರ್ಚ್ ಮತ್ತು ಸೆಪ್ಟೆಂಬರ್ 21ರ ನಡುವೆ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 22 ರಂದು ಪ್ರಕರಣ ದಾಖಲಾಗಿತ್ತು. ಈಗ ಡಿಎನ್‌ಎ ವರದಿ ಆಧಾರದ ಮೇಲೆ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...