ಗುಜರಾತ್ : ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಂತರ ಅಂಧರಾದ 17 ಮಂದಿ!

Date:

ಗುಜರಾತ್‌ ರಾಜ್ಯದ ವಿರಾಮ್ ಗಾಮ್ ಗ್ರಾಮದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ 17 ಮಂದಿ ಅಂಧತ್ವ ಸಮಸ್ಯೆ ಅನುಭವಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಸ್ತ್ರಚಿಕಿತ್ಸಕರ ವಿರುದ್ಧ ಉದಾಸೀನ ಚಿಕಿತ್ಸೆಯ ಗಂಭೀರ ಆರೋಪ ಕೇಳಿಬಂದಿದೆ.

ಈ ಸಮಸ್ಯೆಯಿಂದ ಐವರು ರೋಗಿಗಳು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ವೈದ್ಯಕೀಯ ಚಿಕಿತ್ಸೆಗಾಗಿ ತೆರಳಿದ್ದಾರೆ.

ಗುಜರಾತ್‌ ನ ಅಹಮದಾಬಾದ್ ಜಿಲ್ಲೆಯ ಮಂಡಲ್ ತಾಲೂಕಿನ ಸೇವಾ ನಿಕೇತನ ಟ್ರಸ್ಟ್‌ನ ಒಡೆತನದ ರಮಾನಂದ್ ಕಣ್ಣಿನ ಆಸ್ಪತ್ರೆಯು ಜನವರಿ 10 ರಂದು 28 ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಿತ್ತು. 17 ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಿದ ಕೆಲವೇ ದಿನಗಳಲ್ಲಿ ಕಡಿಮೆ/ಮಸುಕಾದ ದೃಷ್ಟಿ ಉಂಟಾಯಿತು ಹಾಗೂ ಹಲವರು ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಗಿಗಳಲ್ಲಿ ಹೆಚ್ಚಾಗಿ ವಯಸ್ಸಾದವರು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ತೊಂದರೆ ಅನುಭವಿಸಿದರು. ಸಂತ್ರಸ್ತರ ಕುಟುಂಬದ ಪ್ರಕಾರ, ಆಸ್ಪತ್ರೆಯ ವೈದ್ಯರ ಸಂಪೂರ್ಣ ನಿರ್ಲಕ್ಷ್ಯದ ಪರಿಣಾಮವಾಗಿ ಇದು ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಕಿ ಖಟ್ಲೆಗಳ ಭಾರದಡಿ ಕುಸಿದಿರುವ ನ್ಯಾಯಾಂಗ ಮತ್ತು ಸಿನಿಕ ಸಾರ್ವಜನಿಕರು

ಆಸ್ಪತ್ರೆಯ ವೈದ್ಯರ ವಿರುದ್ಧ ಆರೋಪಿಸಿದ ಸೋಲಂಕಿ ಗೋವಿಂದ್, ‘‘ಪತ್ನಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆಂದು ಆ.10ರಂದು ರಮಾನಂದ್ ಕಣ್ಣಿನ ಆಸ್ಪತ್ರೆಗೆ ಹೋಗಿದ್ದೆವು. ಸಂಜೆ ವೈದ್ಯರು ಮನೆಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದು, ನನ್ನ ಪತ್ನಿ ಎರಡು ದಿನ ಚೆನ್ನಾಗಿದ್ದರು. ಮೂರನೆಯ ದಿನ ಅವಳು ತನ್ನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಳು” ಎಂದರು.

“ನಾನು ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದೆ. ನಂತರ ಅವರು ಕಣ್ಣಿನ ಹನಿಗಳನ್ನು ಸೂಚಿಸಿದರು. ಆದರೆ ಹನಿಗಳು ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ. ಆದ್ದರಿಂದ ಸೋಮವಾರ, ನಾವು ನನ್ನ ಹೆಂಡತಿಯನ್ನು ಅದೇ ಆಸ್ಪತ್ರೆಗೆ ಸೇರಿಸಿದ್ದೇವೆ. ಕಣ್ಣಿನ ಸಮಸ್ಯೆ ಕಡಿಮೆಯಾಗಿಲ್ಲ” ಎಂದು ಸೋಲಂಕಿ ಗೋವಿಂದ್ ಹೇಳಿದರು.

ಬಹುತೇಕರು ದೃಷ್ಟಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರವು ತನಿಖೆಗೆ ಒಂಬತ್ತು ಸದಸ್ಯರ ತಂಡವನ್ನು ನೇಮಿಸಿದೆ.

ಅಹಮದಾಬಾದ್ ವಲಯದ ಪ್ರಾದೇಶಿಕ ಆರೋಗ್ಯ ಉಪನಿರ್ದೇಶಕ ಡಾ. ಸತೀಶ್‌ಭಾಯ್ ಮಕ್ವಾನಾ ಮಾತನಾಡಿ, “ಐದು ಜನರನ್ನು ಅಹಮದಾಬಾದ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ, ಆದರೆ ಕಡಿಮೆ ಸಮಸ್ಯೆಗಳಿರುವ ಸುಮಾರು 12 ಜನರನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಎಲ್ಲ ರೋಗಿಗಳನ್ನು  ಪರಿವೀಕ್ಷಣೆಯಲ್ಲಿಡಲಾಗಿದೆ ” ಎಂದರು.

ಆಸ್ಪತ್ರೆಯ ಉಪಾಧ್ಯಕ್ಷ ನಾರಾಯಣ ದಳವಾಡಿ ಮಾತನಾಡಿ, “ಈ ಸಂಸ್ಥೆಯು ಕಳೆದ 40 ವರ್ಷಗಳಿಂದ ಈ ಆಸ್ಪತ್ರೆಯನ್ನು ನಡೆಸುತ್ತಿದೆ. ಒಂದು ಲಕ್ಷಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿದೆ. ಆದರೆ ಇದುವರೆಗೆ ದೂರು ಬಂದಿಲ್ಲ. ಬಹುಶಃ ಇದು ವೈರಸ್ ಆಗಿರುವ ಸಾಧ್ಯತೆಯಿದ್ದು, ತನಿಖೆ ನಡೆಸಲಾಗುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...