ಕೋಚಿಂಗ್ ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಹೃದಯ ಸ್ತಂಭನ: ವಿದ್ಯಾರ್ಥಿ ಸಾವು

Date:

ಹದಿನೆಂಟು ವರ್ಷದ ವಿದ್ಯಾರ್ಥಿಯೊಬ್ಬ ಕೋಚಿಂಗ್‌ ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಹೃದಯ ಸ್ತಂಭನಕ್ಕೊಳಗಾಗಿ ಮೃತಪಟ್ಟ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ಇಂಧೋರ್‌ನ ಬಾನ್‌ವರ್‌ಕೋನ್‌ ಪ್ರದೇಶದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು 18 ವರ್ಷದ ರಾಜ್‌ ಲೋಧಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಯು ಕೋಚಿಂಗ್‌ ತರಗತಿಯಲ್ಲಿ ಕೈಕಟ್ಟಿಕೊಂಡು ಪಾಠ ಕೇಳುತ್ತಿದ್ದಾಗಲೇ ಹೃದಯ ಸ್ತಂಭನವುಂಟಾಗಿ ಮೇಜಿನ ಮೇಲೆ ಬಿದ್ದಿದ್ದಾನೆ. ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನಕಾರಿಯಾಗಲಿಲ್ಲ. ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಇಂಧೋರ್‌ನ 650 ಕಿ.ಮೀ ದೂರದ ಸಂತ ಜಿಲ್ಲೆಯವನಾದ ರಾಜ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಇಂಧೋರ್‌ಗೆ ಆಗಮಿಸಿದ್ದ. ಪಾಠ ಕೇಳುವ ಸಂದರ್ಭದಲ್ಲಿ ಹೃದಯದಲ್ಲಿ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿ ಮೇಜಿನ ಮೇಲೆ ಬಿದ್ದ. ಘಟನೆಯ ಪೂರ್ಣ ದೃಶ್ಯಗಳು ಸಿಸಿ ಟಿವಿಯಲ್ಲಿ ದಾಖಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈತ ಕೈಕಟ್ಟಿ ಕುಳಿತುಕೊಂಡು ಪಾಠ ಕೇಳುತ್ತಿದ್ದ ಸಂದರ್ಭದಲ್ಲಿಯೇ ಇದ್ದಕ್ಕಿದ್ದಂತೆ ಮೇಜಿನ ಮೇಲೆ ಬಿದ್ದಿದ್ದಾನೆ. ಮೊದಲಿಗೆ ನಾವು ಮಲಗಿರಬಹುದು ಎಂದುಕೊಂಡೆ. ಆದರೆ ಆತನ ಮುಖದ ಭಾವನೆಗಳನ್ನು ಗಮನಿಸಿದಾಗ ನೋವಿನಿಂದ ಬಳಲುತ್ತಿರುವುದಾಗಿ ಅನಿಸಿತು. ನಾನು ಆತನ ಬೆನ್ನನ್ನು ಉಜ್ಜಲು ಪ್ರಯತ್ನಿಸಿದೆ. ಆದರೆ ಆತ ಕೆಳಗೆ ಕುಸಿದುಬಿದ್ದ” ಎಂದು ಪಕ್ಕದಲ್ಲಿದ್ದ ರಾಜ್‌ನ ಸ್ನೇಹಿತ ರಾಹುಲ್ ಯಾದವ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

ಕೇವಲ ಐದಾರು ನಿಮಿಷಗಳಲ್ಲಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ವಿದ್ಯಾರ್ಥಿ ಮೃತಪಟ್ಟಿರುವುದಾಗಿ ಘೋಷಿಸಿದರು. ವಿದ್ಯಾರ್ಥಿಯ ಪೋಷಕರು ಇಂಧೋರ್‌ಗೆ ಆಗಮಿಸಿದ್ದರು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಒಪ್ಪಿಸಲಾಯಿತು. ವಿದ್ಯಾರ್ಥಿಯ ತವರಿನಲ್ಲಿ ಅಂತಿಮ ಸಂಸ್ಕಾರ ನಡೆಸಲಾಗಿದೆ.

ಸದ್ಯ ಸಾವಿಗೆ ಹೃದಯ ಸ್ತಂಭನ ಕಾರಣ ಎಂದು ಶಂಕಿಸಲಾಗಿದೆ. ಪೂರ್ಣ ಪರೀಕ್ಷೆಯ ನಂತರ ನಿಖರವಾದ ಕಾರಣವನ್ನು ಹೇಳಬಹುದು ಎಂದು ಶವ ಪರೀಕ್ಷೆ ಕೈಗೊಂಡ ವೈದ್ಯರು ತಿಳಿಸಿದ್ದಾರೆ.

ಮೃತಪಟ್ಟ ವಿದ್ಯಾರ್ಥಿ ರಾಜ್‌ ಲೋಧಿ ಪೌಷ್ಟಿಕಾಂಶ ಆಹಾರ ಸೇವಿಸುತ್ತಿದ್ದ ಜಿಮ್‌ಗೆ ಹೋಗುವ ಸಲುವಾಗಿ ನಿತ್ಯ ಮುಂಜಾನೆ 5 ಗಂಟೆಗೆ ಎದ್ದೇಳುತ್ತಿದ್ದ. ಕೆಲವು ದಿನಗಳಿಂದ ಕೂದಲು ಉದರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಮಾತ್ರೆಗಳನ್ನು ಸೇವಿಸುತ್ತಿದ್ದ ಎಂದು ವಿದ್ಯಾರ್ಥಿ ಸಹೋದರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...