ವಿದೇಶಿ ಮಹಿಳೆಯಿಂದ 400 ಮೀಟರ್‌ ಪ್ರಯಾಣಕ್ಕೆ ₹18,000 ಸುಲಿಗೆ ಮಾಡಿದ ಟ್ಯಾಕ್ಸಿ ಚಾಲಕ

Date:

ವಾಣಿಜ್ಯ ನಗರಿ ಮುಂಬೈಗೆ ಬಂದಿಳಿದ ವಿದೇಶಿ ಪ್ರವಾಸಿಗರೊಬ್ಬರಿಂದ ಟ್ಯಾಕ್ಸಿ ಚಾಲಕನೊಬ್ಬ ಕೇವಲ 400 ಮೀಟರ್ ದೂರದ ಹೋಟೆಲ್‌ಗೆ ಕರೆದೊಯ್ಯಲು ಬರೋಬ್ಬರಿ 18,000 ರೂಪಾಯಿ (200 ಡಾಲರ್) ವಸೂಲಿ ಮಾಡಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

​ವಿದೇಶಿ ಪ್ರವಾಸಿಗರೊಬ್ಬರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ (ಟ್ವಿಟರ್) ತಮ್ಮ ಕಹಿ ಅನುಭವವನ್ನು ಹಂಚಿಕೊಂಡ ನಂತರ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಪೋಸ್ಟ್‌ ಮಾಡಿರುವ ಪ್ರಕಾರ, ಅವರು ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅಲ್ಲಿಂದ ಸಮೀಪದ ‘ಹಿಲ್ಟನ್ ಹೋಟೆಲ್‌’ಗೆ ತೆರಳಲು ಟ್ಯಾಕ್ಸಿ ಒಂದನ್ನು ಬಾಡಿಗೆಗೆ ಪಡೆದರು.

ಆದರೆ, ಟ್ಯಾಕ್ಸಿ ಚಾಲಕ ಮತ್ತು ಆತನೊಂದಿಗಿದ್ದ ಮತ್ತೊಬ್ಬ ವ್ಯಕ್ತಿ ಅವರನ್ನು ನೇರವಾಗಿ ಹೋಟೆಲ್‌ಗೆ ಕರೆದೊಯ್ಯುವ ಬದಲು, ದಾರಿ ತಪ್ಪಿಸಿ ಅಪರಿಚಿತ ಸ್ಥಳವೊಂದಕ್ಕೆ ಕರೆದೊಯ್ದಿದ್ದಾರೆ. ಅಂತಿಮವಾಗಿ ವಿಮಾನ ನಿಲ್ದಾಣದಿಂದ ಕೇವಲ 400 ಮೀಟರ್‌ ದೂರದಲ್ಲಿದ್ದ ಹೋಟೆಲ್‌ಗೆ ತಲುಪಿಸಿ, ಪ್ರಯಾಣ ದರದ ಹೆಸರಿನಲ್ಲಿ 200 ಡಾಲರ್ (ಅಂದಾಜು ₹18,000) ಹಣವನ್ನು ಪೀಕಿಸಿದ್ದಾರೆ ಎಂದು ಆರೋಪಿಸಲಾಗಿದೆ. ​ವಂಚನೆ ಎಸಗಿದ ಟ್ಯಾಕ್ಸಿ ಸಂಖ್ಯೆ MH 01 BD 5405 ಎಂದು ಸಂತ್ರಸ್ತರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ವೈರಲ್ ಆಗಿರುವ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮುಂಬೈ ಪೊಲೀಸರು, “ನಾವು ನಿಮ್ಮನ್ನು ಫಾಲೋ ಮಾಡಿದ್ದೇವೆ. ದಯವಿಟ್ಟು ನಿಮ್ಮ ಸಂಪರ್ಕ ವಿವರಗಳನ್ನು ಡಿಎಂ (Direct Message) ಮೂಲಕ ಹಂಚಿಕೊಳ್ಳಿ,” ಎಂದು ಸೂಚಿಸಿದ್ದಾರೆ. ಆದರೆ, ಚಾಲಕನ ವಿರುದ್ಧ ಈವರೆಗೆ ಯಾವ ರೀತಿಯ ಶಿಸ್ತು ಕ್ರಮ ಜರುಗಿಸಲಾಗಿದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಈ ಘಟನೆಯು ಮುಂಬೈ ಹಾಗೂ ಭಾರತದ ಪ್ರವಾಸೋದ್ಯಮದ ಘನತೆಗೆ ಧಕ್ಕೆ ತರುವಂತಿದೆ ಎಂದು ನೆಟ್ಟಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ​”ಇದು ಮಹಾರಾಷ್ಟ್ರ ಮತ್ತು ಭಾರತದಲ್ಲಿ ಪ್ರವಾಸಿಗರನ್ನು ನಡೆಸಿಕೊಳ್ಳುವ ರೀತಿಯಲ್ಲ. ಕೂಡಲೇ ಚಾಲಕನ ಪರವಾನಗಿ ರದ್ದುಗೊಳಿಸಿ, ಆತನನ್ನು ಜೈಲಿಗಟ್ಟಬೇಕು. ಪ್ರವಾಸಿಗರು ಪೊಲೀಸ್ ಠಾಣೆಗೆ ಅಲೆಯುವಂತಾಗಬಾರದು, ಆನ್‌ಲೈನ್ ಸಾಕ್ಷ್ಯಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಿ,” ಎಂದು ಬಳಕೆದಾರರೊಬ್ಬರು ಆಗ್ರಹಿಸಿದ್ದಾರೆ.​ಇನ್ನೊಬ್ಬರು, “ಓಲಾ ಅಥವಾ ಊಬರ್ ಆಪ್‌ಗಳ ಮೂಲಕ ಬುಕ್ ಮಾಡಿದ್ದರೆ, ನಿಖರವಾದ ದರ ತಿಳಿಯುತ್ತಿತ್ತು,” ಎಂದು ಸಲಹೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...