ಉತ್ತರ ಪ್ರದೇಶ ಗೋಂಡದ ರೈಲ್ವೆ ನಿಲ್ದಾಣದ ಸಮೀಪ ಚಂಡೀಗಢ – ದಿಬ್ರುಗಢ ಎಕ್ಸ್ಪ್ರೆಸ್ನ ಕೆಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 4 ಮೃತಪಟ್ಟು, 25 ಮಂದಿ ಗಾಯಗೊಂಡಿದ್ದಾರೆ.
ಅಸ್ಸಾಂನ ದಿಬ್ರುಗಢ ನಿಲ್ದಾಣಕ್ಕೆ ಹೊರಡಬೇಕಿದ್ದ ಚಂಡಿಘಡ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 11.35ಕ್ಕೆ ಹೊರಟಿತ್ತು. ಉತ್ತರ ಪ್ರದೇಶದ ಗೋಂಡ ಜಿಲ್ಲೆಯ ಮೋತಿಗಂಜ್ – ಜಿಲಾಹಿ ರೈಲು ನಿಲ್ದಾಣಗಳ ಮಧ್ಯೆ ಬೋಗಿಗಳು ಹಳಿತಪ್ಪಿವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ
ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ತಕ್ಷಣ ಹೊರಟು ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತುರ್ತಾಗಿ ಪರಿಹಾರ ಕಾರ್ಯಗಳನ್ನು ಒದಗಿಸುವಂತೆ ರಾಜ್ಯ ವಿಪತ್ತು ನಿರ್ವಹಣೆ ತಂಡಕ್ಕೆ ಸೂಚನೆ ನೀಡಲಾಗಿದೆ.





