ಕೇರಳ | ತಪ್ಪು ಮಾಹಿತಿ ನೀಡಿದ ಗೂಗಲ್‌ ಮ್ಯಾಪ್‌: ಕಾರು ನದಿಗೆ ಉರುಳಿ ಇಬ್ಬರು ವೈದ್ಯರ ಸಾವು

Date:

ಗೂಗಲ್‌ ಮ್ಯಾಪ್‌ ನೀಡಿದ ತಪ್ಪಾದ ಮಾಹಿತಿಯಿಂದ ಕಾರು ನದಿಗೆ ಬಿದ್ದು ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳ ರಾಜ್ಯದ ಎರ್ನಾಕುಲಂನ ಗೊತ್ತುರುತ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಭಾರೀ ಮಳೆ ಮತ್ತು ಗೂಗಲ್‌ ಮ್ಯಾಪ್‌ ತಪ್ಪು ದಿಕ್ಕು ತೋರಿಸಿದ್ದು ಅಪಘಾತಕ್ಕೆ ಕಾರಣವಾಯಿತು. ಹೀಗಾಗಿ ಕಾರು ರಸ್ತೆಯಿಂದ ನದಿಗೆ ಧುಮುಕಿದೆ.

ಮೃತರನ್ನು ಕೊಲ್ಲಂನ ಅದ್ವೈತ್ ಮತ್ತು ಕೊಡುಂಗಲ್ಲೂರಿನ ಅಜ್ಮಲ್ ಎಂದು ಗುರುತಿಸಲಾಗಿದೆ. ಇಬ್ಬರೂ 28 ವರ್ಷ ವಯಸ್ಸಿನವರಾಗಿದ್ದು ಕೊಡುಂಗಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ವೈದ್ಯ ಖಾಸಿಕ್ ಕಬೀರ್, ನರ್ಸಿಂಗ್ ವಿದ್ಯಾರ್ಥಿ ಜಿಸ್ಮನ್ ಮತ್ತು ಮೆಡಿಕಲ್ ವಿದ್ಯಾರ್ಥಿ ತಮನ್ನ ಅವರನ್ನು ರಕ್ಷಣೆ ಮಾಡಲಾಗಿದೆ. ಅವರ ಸ್ಥಿತಿ ಸುಧಾರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಣಿಪುರ | ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ

ಕೊಚ್ಚಿಯಲ್ಲಿ ವೈದ್ಯ ಅದ್ವೈತ್ ಅವರ ಹುಟ್ಟಿದ ಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಕಾರಿನಲ್ಲಿ ವಾಪಸ್‌ ಬರುತ್ತಿದ್ದರು. ಅವರು ಮಧ್ಯರಾತ್ರಿ 12.35 ರ ಸುಮಾರಿಗೆ ಎಡಕ್ಕೆ ತಿರುಗುವ ಬದಲು, ಅವರು ಗೂಗಲ್ ನಕ್ಷೆಗಳಲ್ಲಿನ ನಿರ್ದೇಶನಗಳನ್ನು ಆಧರಿಸಿ ಲೇಬರ್ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ಜಲಾವೃತವಾದ ರಸ್ತೆಯನ್ನು ಪ್ರವೇಶಿಸುತ್ತಿದ್ದಾರೆ ಎಂಬುದಾಗಿ ಭಾವಿಸಿದ್ದಾರೆ.

ನೇರವಾಗಿ ದೇವಸ್ಥಾನದ ದೀಪಗಳನ್ನು ನೋಡಿದ್ದರಿಂದ ಅದು ರಸ್ತೆಯೇ ಎಂದು ಅವರು ತಿಳಿದು ಕಾರನ್ನು ಎದುರು ಚಲಾಯಿಸಿದರು. ಆದರೆ ವಾಸ್ತವವಾಗಿ ದೇವಾಲಯವು ನದಿಯ ಇನ್ನೊಂದು ಬದಿಯಲ್ಲಿತ್ತು ಎಂದು ವಡಕ್ಕೇಕರ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದರು.

ಕಾರು ನೀರಿಗೆ ಬೀಳುವುದನ್ನು ಕಂಡ ಸ್ಥಳೀಯರು ತಕ್ಷಣ ಮೂವರನ್ನು ರಕ್ಷಿಸಿದ್ದಾರೆ. ಆದರೆ ಇಬ್ಬರು ವೈದ್ಯರು ಕೊಚ್ಚಿ ಹೋಗಿದ್ದರಿಂದ ಅವರ ರಕ್ಷಣೆ ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳದವರು ಬಂದು ಇಬ್ಬರ ಮೃತದೇಹ ಮೇಲಕ್ಕೆತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...