ಸಿಂಧೂ ನದಿ ನೀರು ನಿಲ್ಲಿಸಲು 20 ವರ್ಷ ಬೇಕು; ಮೋದಿ ಸರ್ಕಾರ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ: ಶಂಕರಾಚಾರ್ಯ ಸ್ವಾಮೀಜಿ

Date:

  • ಸುರಕ್ಷಿತ ಕಾಶ್ಮೀರದ ನಿಮ್ಮ ಹೇಳಿಕೆಗಳು ಈಗ ಎಲ್ಲಿಗೆ ಹೋಗಿವೆ?
  • 370 ತೆಗೆದುಹಾಕಿದ ನಂತರ ಕಾಶ್ಮೀರದಲ್ಲಿ ಶಾಂತಿಯ ಭರವಸೆಗಳು ಏನಾದವು?

ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬೆನ್ನಲ್ಲೇ, ಭಾರತದಿಂದ ನೆರೆಯ ದೇಶಕ್ಕೆ ‘ಒಂದು ಹನಿ ನೀರು’ ಹರಿಯದಂತೆ ಮಾಡುವ, ಪಾಕಿಸ್ತಾನದ ಜೊತೆಗಿನ ಸಿಂಧೂ ನದಿ ನೀರು ಬಳಕೆ ಯೋಜನೆಯನ್ನು ಕೈಬಿಡುವ ಬಗ್ಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿದೆ. ಆದರೆ, ಇದು ಜನರನ್ನು ಮೂರ್ಖರನ್ನಾಗಿ ಮಾಡುವ ಘೋಷಣೆಯಷ್ಟೇ ಎಂದು ಉತ್ತರ ಪ್ರದೇಶದ ಆಗ್ರಾದಲ್ಲಿರುವ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಂಕರಾಚಾರ್ಯ ಸ್ವಾಮಿ, ”ಸಿಂಧೂ ನದಿ ನೀರನ್ನು ನಿಲ್ಲಿಸಲು ಮೋದಿ ಸರ್ಕಾರದ ಬಳಿ ಯಾವುದೇ ವ್ಯವಸ್ಥೆಯಿಲ್ಲ. ನದಿ ನೀರು ಪಾಕಿಸ್ತಾನಕ್ಕೆ ಹರಿದಂತೆ ನಿಲ್ಲಿಸುವ ವ್ಯವಸ್ಥೆ ಸಿದ್ಧಪಡಿಸಲು ಭಾರತಕ್ಕೆ ಕನಿಷ್ಠ 20 ವರ್ಷಗಳು ಬೇಕಾಗುತ್ತದೆ. ಇದರರ್ಥ, ಕೇಂದ್ರ ಸರ್ಕಾರ ಸಾರ್ವಜನಿಕರನ್ನು ಮೂರ್ಖರನ್ನಾಗಿ ಮಾಡುತ್ತಿದೆ” ಎಂದು ಹೇಳಿದ್ದಾರೆ.

”ಪಹಲ್ಗಾಮ್‌ನಲ್ಲಿ ಹಿಂದುಗಳ ಮೇಲಿನ ದಾಳಿಯು ಯೋಜಿತ ಪಿತೂರಿಯ ಭಾಗವಾಗಿದೆ. ಒಬ್ಬರ ಧರ್ಮ ಯಾವುದೆಂದು ಕೇಳಿ, ಬಳಿಕ ಅವರನ್ನು ಕೊಲ್ಲುವುದು ಅನಾಗರಿಕತೆಯ ಸಂಕೇತ. ಇದು ಭಯೋತ್ಪಾದಕರಿಂದ ಯುದ್ಧದ ನೇರ ಎಚ್ಚರಿಕೆಯಾಗಿದೆ. ಸರ್ಕಾರ ಇದನ್ನು ಖಂಡಿಸಬಾರದು ಬದಲಾಗಿ ದಂಡನಾತ್ಮಕ ಕ್ರಮ ಕೈಗೊಳ್ಳಬೇಕು. ಸಿಂಧೂ ನದಿ ನೀರು ಒಪ್ಪಂದವನ್ನು ಕೊನೆಗೊಳಿಸುವ ಮೂಲಕ ಸಾರ್ವಜನಿಕರನ್ನು ಮೋಸಗೊಳಿಸಲು ಸಾಧ್ಯವಿಲ್ಲ. ಮೊದಲನೆಯದಾಗಿ, ಭಯೋತ್ಪಾದಕ ದಾಳಿಗೆ ಕಾರಣರಾದ ವ್ಯಕ್ತಿಯನ್ನು ಗುರುತಿಸಿ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಮೊದಲು ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಳಿಕ, ಗಡಿಯಾಚೆ ಕುಳಿತಿರುವ ಅವರ ನಾಯಕರಿಗೆ ಪಾಠ ಕಲಿಸಲು ಸರ್ಕಾರ ಯುದ್ಧಕ್ಕೆ ಸಿದ್ಧವಾಗಬೇಕು. ದೇಶದ ಜನರು ಸರ್ಕಾರದ ಜೊತೆಗಿದ್ದಾರೆ” ಎಂದು ಹೇಳಿದ್ದಾರೆ.

”ಪಾಕಿಸ್ತಾನಕ್ಕೆ ನದಿ ನೀರು ಸರಬರಾಜು ಸ್ಥಗಿತಗೊಳಿಸುವ ಬಗ್ಗೆ ನಮ್ಮ ಸರ್ಕಾರ ಪದೇ ಪದೇ ಮಾತುಕತೆ ನಡೆಸುತ್ತಿದೆ. ಇದು ನಿಜವಾಗಿಯೂ ಸಾಧ್ಯವೇ? ನೀರು ಸರಬರಾಜು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕುವುದರಿಂದ ಈ ಭಯೋತ್ಪಾದಕ ಚಟುವಟಿಕೆ ನಿಲ್ಲುವುದಿಲ್ಲ. ಈಗಲೇ ನೇರ ಕ್ರಮ ಕೈಗೊಂಡರೆ ಉತ್ತಮ” ಎಂದಿದ್ದಾರೆ.

”ಕೇಂದ್ರದ ಮೋದಿ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಒಮರ್ ಅಬ್ದುಲ್ಲಾ ಸರ್ಕಾರಗಳು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಭಯೋತ್ಪಾದಕರು ಪಹಲ್ಗಾಮ್ ಪ್ರವೇಶಿಸಿ ಪ್ರವಾಸಿಗರನ್ನು ಹೇಗೆ ಗುರಿಯಾಗಿಸಿಕೊಂಡರು? ಸುರಕ್ಷಿತ ಕಾಶ್ಮೀರದ ನಿಮ್ಮ ಹೇಳಿಕೆಗಳು ಈಗ ಎಲ್ಲಿಗೆ ಹೋಗಿವೆ? 370 ತೆಗೆದುಹಾಕಿದ ನಂತರ ಕಾಶ್ಮೀರದಲ್ಲಿ ಶಾಂತಿಯ ಭರವಸೆಗಳು ಏನಾದವು?” ಎಂದು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...