ನಿಷೇಧಿತ ಸಂಘಟನೆಯ ಸದಸ್ಯತ್ವವೇ ಯುಎಪಿಎ ಅಡಿ ಅಪರಾಧ: ಸುಪ್ರೀಂಕೋರ್ಟ್‌

Date:

  • 2011ರ ದ್ವಿಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿದ ತ್ರಿಸದಸ್ಯ ಪೀಠ
  • ತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ಕೇಂದ್ರ, ಅಸ್ಸಾಂ ಸರ್ಕಾರ

ನಿಷೇಧಿತ ಸಂಘಟನೆಯ ಸದಸ್ಯತ್ವಪಡೆಯುವುದೇ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡುವುದಿಲ್ಲ ಎಂಬ ತನ್ನ 2011ರ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಮಾರ್ಚ್‌ 24) ಬದಲಿಸಿದೆ.

ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ ಆರ್ ಷಾ, ಸಿ ಟಿ ರವಿಕುಮಾರ್ ಮತ್ತು ಸಂಜಯ್ ಕರೋಲ್ ಅವರ ತ್ರಿಸದಸ್ಯ ಪೀಠ, ಈ ಹಿಂದೆ ದ್ವಿಸದಸ್ಯ ಪೀಠವು ನೀಡಿದ ತೀರ್ಪನ್ನು ರದ್ದುಮಾಡಿದೆ. ನಿಷೇಧಿತ ಸಂಘಟನೆಯ ಸದಸ್ಯತ್ವವು ಒಬ್ಬ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡುತ್ತದೆ. ಯುಎಪಿಎ (ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆ, 1967 ನಿಬಂಧನೆಗಳ ಅಡಿಯಲ್ಲಿ ವ್ಯಕ್ತಿಯು ವಿಚಾರಣೆಗೆ ಒಳಪಡುತ್ತಾನೆ ಎಂದು ಪೀಠ ಇದೀಗ ಅಭಿಪ್ರಾಯಪಟ್ಟಿದೆ.

ನಿಷೇಧಿತ ಸಂಘಟನೆಗಳ ಸದಸ್ಯತ್ವದ ಕುರಿತು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ನೀಡಿದ 2011ರ ತೀರ್ಪು, “ನಿಷೇಧಿತ ಸಂಘಟನೆಯ ಸದಸ್ಯತ್ವ ಅಪರಾಧವಾಗುವುದಿಲ್ಲ, ಸದಸ್ಯತ್ವಪಡೆದ ನಂತರ ವ್ಯಕ್ತಿ ಹಿಂಸೆ ಅಥವಾ ಹಿಂಸೆಗೆ ಪ್ರಚೋದನೆಯಂತಹ ಅಕ್ರಮ ಚಟುವಟಿಕೆಗಳನ್ನು ನಡೆಸಿದಲ್ಲಿ ಯುಎಪಿಎ ಅಡಿಯಲ್ಲಿ ಅಪರಾಧವಾಗುತ್ತದೆ” ಎಂದು ಹೇಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಷೇಧಿತ ಸಂಘಟನೆಗಳ ಸದಸ್ಯತ್ವದ ಕುರಿತು ಸುಪ್ರೀಂ ಕೋರ್ಟ್‌ನ 2011ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಸರ್ಕಾರದ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ.

ಅಮೆರಿಕದ ನ್ಯಾಯಾಲಯದ ಆದೇಶಗಳನ್ನು ಪರಿಗಣಿಸಿದ್ದರಿಂದ 2011ರ ತೀರ್ಪು ನೀಡಲಾಯಿತು. ಆದರೆ ಇಂತಹ ತೀರ್ಪುಗಳನ್ನು ಭಾರತದಲ್ಲಿನ ಪರಿಸ್ಥಿತಿಯನ್ನು ಅವಗಾಹಿಸದೆ ನೀಡಲಾಗುವುದಿಲ್ಲ ಎಂದು ತ್ರಿಸದಸ್ಯ ಪೀಠ ಹೇಳಿದೆ. 

3fc71c934f523957b32c0dd3d0e48cbcbd9cdd59923741ff837bb405a2b7ba0f?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...