ಮೊಬೈಲ್‌ಗಾಗಿ 1500 ಎಕರೆ ಭೂಮಿಗೆ ಬೇಕಿದ್ದ 21 ಲಕ್ಷ ಲೀಟರ್‌ ನೀರು ಖಾಲಿ ಮಾಡಿಸಿದ ಅಧಿಕಾರಿ!

Date:

ಸರ್ಕಾರಿ ಅಧಿಕಾರಿಯೊಬ್ಬ ಸೆಲ್ಫಿ ತೆಗೆದುಕೊಳ್ಳುವಾಗ ತನ್ನ ಒಂದು ಲಕ್ಷ ರೂ. ಮೌಲ್ಯದ ಮೊಬೈಲ್‌ ಜಲಾಶಯಕ್ಕೆ ಬಿದ್ದಿತೆಂದು ಡ್ಯಾಂನಿಂದ ಬರೋಬ್ಬರಿ 21 ಲಕ್ಷ ಲೀಟರ್‌ ನೀರನ್ನು ಪೋಲು ಮಾಡಿದ ಘಟನೆ ಛತ್ತೀಸ್‌ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ.

ಕಂಕೇರ್ ಜಿಲ್ಲೆಯ ಕೊಯಿಲಿಬೀಡಾ ಬ್ಲಾಕ್‌ನ ಆಹಾರ ನಿರೀಕ್ಷಕ ರಾಜೇಶ್ ವಿಶ್ವಾಸ್ ಖೇರ್ಕಟ್ಟಾ ಅಣೆಕಟ್ಟಿನಲ್ಲಿ ತನ್ನ ಸ್ನೇಹಿತರೊಂದಿಗೆ  ಮೇ 21ರಂದು ರಜೆ ಕಳೆಯಲು ಬಂದಿದ್ದಾನೆ. ಸೆಲ್ಫಿ ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ಆತನ ₹ 1 ಲಕ್ಷ ಮೌಲ್ಯದ ಸ್ಮಾರ್ಟ್‌ಫೋನ್ ಜಲಾಶಯಕ್ಕೆ ಬಿದ್ದಿದೆ. ಮೊಬೈಲ್ 15 ಅಡಿ ಆಳದ ನೀರಿನಲ್ಲಿ ಬಿದ್ದಿದ್ದು, ಸ್ಥಳೀಯರು ಅದನ್ನು ದಿನವಿಡಿ ಹುಡುಕಿದರೂ ಸಿಗಲಿಲ್ಲ.

ಮೊಬೈಲ್‌ ಸಿಗದ ಕಾರಣಕ್ಕೆ ರಾಜೇಶ್ ವಿಶ್ವಾಸ್ ನಾಲ್ಕು ದಿನಗಳ ಕಾಲ ನಿರಂತರವಾಗಿ ಎರಡು 30 ಎಚ್‌ಪಿ ಡೀಸೆಲ್ ಪಂಪ್‌ಗಳನ್ನು ಬಳಸಿ 21 ಲಕ್ಷ ಲೀಟರ್ ನೀರನ್ನು ಹೊರ ಹಾಕಿದ್ದಾರೆ. ಈತ ವ್ಯರ್ಥ ಮಾಡಿದ ನೀರು ಅಂದಾಜು 1500 ಎಕರೆ ಕೃಷಿ ಭೂಮಿಗೆ ಆಧಾರವಾಗುತ್ತಿತ್ತು. ಆದರೆ ಅಧಿಕಾರಿಯ ಮೊಂಡುತನಕ್ಕೆ ಸಂಪೂರ್ಣವಾಗಿ ನೀರು ಪೋಲಾಗಿದೆ. ಇಷ್ಟೆಲ್ಲಾ ಸಾಹಸ ಮಾಡಿದ ನಂತರ ಅಧಿಕಾರಿಗೆ ಕೊನೆಗೂ ಮೊಬೈಲ್‌ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗುಜರಾತ್ | ಬಿಜೆಪಿ ವಿರುದ್ಧ ಜನಮಂಚ್‌; ಜನರ ಬಳಿ ಕಾಂಗ್ರೆಸ್ ನಡಿಗೆ

ಈ ಘಟನೆ ಬೆಳಕಿಗೆ ಬರುತ್ತಿದಂತೆಯೇ ಜಿಲ್ಲಾಧಿಕಾರಿ ಪ್ರಿಯಾಂಕ್‌ ಶುಕ್ಲಾ ದರ್ಪದ ಅಧಿಕಾರಿಯನ್ನು ಅಮಾನತುಗೊಳಿಸಿ ಜಲ ಸಂಪನ್ಮೂಲ ಇಲಾಖೆಯ ಎಸ್‌ಡಿಓಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿದ್ದಾರೆ. 24 ಗಂಟೆಯ ಒಳಗಾಗಿ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.

ತನ್ನ ಮೊಬೈಲ್‌ನಲ್ಲಿ ಮುಖ್ಯವಾದ ಅಗತ್ಯ ಮಾಹಿತಿ ಇದ್ದ ಕಾರಣ ಈ ಕ್ರಮ ತೆಗೆದುಕೊಳ್ಳಬೇಕಾಯಿತು ಎಂದು ಆಹಾರ ನಿರೀಕ್ಷಕ ರಾಜೇಶ್ ಬಿಸ್ವಾಸ್ ನೀರು ವ್ಯರ್ಥ ಮಾಡಿದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾನೆ.

ಜಲಸಂಪನ್ಮೂಲ ಇಲಾಖೆಯ ಉಪ ಅಧಿಕಾರಿ ರಾಮ್ ಲಾಲ್ ಧಿವರ್ ಪ್ರಕಾರ, ಐದು ಅಡಿ ಆಳದವರೆಗೆ ನೀರು ಹರಿಸಲು ಮೌಖಿಕ ಅನುಮತಿ ನೀಡಲಾಗಿದೆ. ಆದರೆ, ಇಲ್ಲಿಯವರೆಗೆ 10 ಅಡಿಗೂ ಹೆಚ್ಚು ನೀರು ಕಡಿಮೆಯಾಗಿದೆ. ಅಧಿಕಾರಿಗಳು ನೀರಾವರಿಯ ಮೇಲಿನ ಪರಿಣಾಮವನ್ನು ಮೌಲ್ಯಮಾಪನ ಮಾಡುತ್ತಿದ್ದಾರೆ ಮತ್ತು ಪೋಲಾದ ನೀರನ್ನು ಸರಿದೂಗಿಸಲು ಕ್ರಮಗಳನ್ನು ಜರುಗಿಸುತ್ತಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...