ಒಡಿಶಾ | ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ, ಇಬ್ಬರು ದುರುಳರ ಬಂಧನ

Date:

22 ವರ್ಷದ ಯುವತಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಮಯೂರ್ಭಂಜ್‌ ಜಿಲ್ಲೆಯಲ್ಲಿ ನಡೆದಿದೆ. ಐವರ ಪೈಕಿ ಇಬ್ಬರ ಬಂಧನ ಮಾಡಲಾಗಿದೆ.

ಶುಕ್ರವಾರ ಸಂಜೆ ಮಹಿಳೆಗೆ ಪರಿಚಿತರಾಗಿರುವ ಇಬ್ಬರು ಕೆಲಸವೊಂದರ ಬಗ್ಗೆ ಮಾತನಾಡುವ ನೆಪದಲ್ಲಿ ಬಂಗಿರಿಪೋಸಿ ಪ್ರದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಪುದುಚೇರಿ | ಆಟೋ ಚಾಲಕ, ಪ್ರವಾಸಿಗರಿಂದ 16ರ ಬಾಲಕಿಯ ಸಾಮೂಹಿಕ ಅತ್ಯಾಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಗಿರ್ಪೋಸಿಯಲ್ಲಿರುವ ಯುವತಿಯ ಮನೆಯಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿರುವ ಉಡಾಲ ಪೊಲೀಸ್ ಠಾಣೆ ಪ್ರದೇಶದ ಸ್ಥಳಕ್ಕೆ ಆಕೆಯನ್ನು ಕರೆದೊಯ್ಯಲಾಯಿತು ಎಂದು ಮಹಿಳೆ ನೀಡಿದ ದೂರನ್ನು ಉಲ್ಲೇಖಿಸಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಾರಿನಲ್ಲಿ ಮೊದಲು ಇಬ್ಬರು ಯುವಕರು ಇದ್ದರು. ಬಳಿಕ ಆಕೆಯನ್ನು ಇತರ ಮೂವರು ಕಾರು ಹತ್ತಿದರು. ಯುವತಿಯನ್ನು ಉಡಾಲ ಮತ್ತು ಬಾಲಸೋರ್ ಪಟ್ಟಣವನ್ನು ಸಂಪರ್ಕಿಸುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಸ್‌ಡಿಪಿಒ (ಉಡಾಲ) ಹೃಷಿಕೇಶ್ ನಾಯಕ್ ತಿಳಿಸಿದ್ದಾರೆ.

ಅತ್ಯಾಚಾರ ಮಾಡಿದ ಬಳಿಕ ಯುವತಿಯನ್ನು ರಸ್ತೆಯಲ್ಲಿಯೇ ಒಂಟಿಯಾಗಿ ಬಿಟ್ಟು ಐವರೂ ತೆರಳಿದ್ದಾರೆ. ಆಕೆಯ ಹೇಳಿಕೆಯ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ನಡೆಯುತ್ತಿದೆ. ಪೊಲೀಸರು ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಿದ್ದಾರೆ. ಇತರ ಮೂವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ನಾಯಕ್ ಹೇಳಿದರು.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...