ಛತ್ತೀಸ್‌ಗಢ | 1.18 ಕೋಟಿ ರೂ. ಬಹುಮಾನ ಹೊಂದಿದ್ದ 23 ನಕ್ಸಲ್ ನಾಯಕರು ಮುಖ್ಯವಾಹಿನಿಗೆ

Date:

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಬರೋಬ್ಬರಿ 1.18 ಕೋಟಿ ರೂ. ಬಹುಮಾನ ಹೊಂದಿದ್ದ 23 ನಕ್ಸಲ್ ನಾಯಕರು ಮುಖ್ಯವಾಹಿನಿಗೆ ಬಂದಿದ್ದಾರೆ. ಇದರಲ್ಲಿ ಮೂವರು ದಂಪತಿಗಳೂ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಖ್ಯವಾಹಿನಿಗೆ ಬಂದವರಲ್ಲಿ 11 ಹಿರಿಯ ಕಾರ್ಯಕರ್ತರು ಸೇರಿದ್ದಾರೆ. ಈ ಪೈಕಿ ಹೆಚ್ಚಿನವರು ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ) ಬೆಟಾಲಿಯನ್ ನಂ.1 ನಲ್ಲಿ ಸಕ್ರಿಯರಾಗಿದ್ದವರು. ಇದು ಮಾವೋವಾದಿಗಳ ಪ್ರಬಲ ಮಿಲಿಟರಿ ಪಡೆದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ಹೇಳಿಕೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆಗೆ ನೋಟಿಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್, “ಸಂಘಟನೆಯೊಳಗೆ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ನಿರಾಶೆಯಿಂದಾಗಿ ಹಿರಿಯ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಗಳ ಮುಂದೆ ನಕ್ಸಲರು ಶರಣಾಗಿದ್ದಾರೆ. ಶರಣಾದವರಲ್ಲಿ ಒಂಬತ್ತು ಮಹಿಳೆಯರು ಇದ್ದಾರೆ” ಎಂದು ಹೇಳಿದ್ದಾರೆ.

ಲೋಕೇಶ್ ಅಲಿಯಾಸ್ ಪೋಡಿಯಂ ಭೀಮ (35), ರಮೇಶ್ ಅಲಿಯಾಸ್ ಕಲ್ಮು ಕೇಸ (23), ಕವಾಸಿ ಮಾಸ (35), ಮಡ್ಕಮ್ ಹಂಗಾ (23), ನುಪ್ಪೊ ಗಂಗಿ (28), ಪುನೆಮ್ ದೇವೆ (30), ಪಾರಸ್ಕಿ ಪಾಂಡೆ (22), ಮದ್ವಿ ಜೋಗ (20), ನುಪ್ಪೊ ಲಚ್ಚು (25), ಪೋಡಿಯಂ ಸುಖ್‌ರಾಮ್ (24) ಮತ್ತು ದುಧಿ ಭೀಮಾ ಅವರಿಗೆ ತಲಾ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮೋದಿ ಮತ್ತು ಬಿಜೆಪಿ ನಾಯಕರು ಜಾತಿ ಗಣತಿ ವಿರುದ್ಧ ಹೇಗೆಲ್ಲ ದಾಳಿ ನಡೆಸಿದ್ದರು ಗೊತ್ತೆ?

“ಲೋಕೇಶ್ ವಿಭಾಗೀಯ ಸಮಿತಿ ಸದಸ್ಯರಾಗಿದ್ದರು ಮತ್ತು ಇತರ ಎಂಟು ಮಂದಿ ಪಿಎಲ್‌ಜಿಎ ಬೆಟಾಲಿಯನ್ ನಂ.1 ಮಾವೋವಾದಿಗಳ ಪಡೆಯ ಸದಸ್ಯರಾಗಿದ್ದರು. ಈ ಬೆಟಾಲಿಯನ್ ದುರ್ಬಲಗೊಳ್ಳುತ್ತಿದೆ ಮತ್ತು ಸುಕ್ಮಾ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸುತ್ತಿರುವುದರಿಂದ ಅದರ ಸದಸ್ಯರು ನಿರಂತರವಾಗಿ ನಕ್ಸಲ್‌ವಾದವನ್ನು ತ್ಯಜಿಸುತ್ತಿದ್ದಾರೆ” ಎಂದು ಚವಾಣ್ ಹೇಳಿದರು.

ಇನ್ನು ಶುಕ್ರವಾರ, ಅಭುಜ್ಮದ್ ಪ್ರದೇಶದಲ್ಲಿ ಸಕ್ರಿಯರಾಗಿದ್ದ ಮತ್ತು 37.5 ಲಕ್ಷ ರೂ.ಗಳ ಸಾಮೂಹಿಕ ಬಹುಮಾನವನ್ನು ಹೊಂದಿದ್ದ 22 ನಕ್ಸಲ್ ನಾಯಕರು ನಾರಾಯಣಪುರ ಜಿಲ್ಲೆಯಲ್ಲಿ ಮುಖ್ಯವಾಹಿನಿಗೆ ಬಂದಿದ್ದಾರೆ. ಛತ್ತೀಸ್‌ಗಢದಲ್ಲಿ ನಿರಂತರವಾಗಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಯುತ್ತಿದ್ದು ನೂರಾರು ಮಂದಿಯ ಎನ್‌ಕೌಂಟರ್ ನಡೆದಿದೆ. ಈ ನಡುವೆ ಮಾವೋ ನಾಯಕರು ಮುಖ್ಯವಾಹಿನಿಗೆ ಮರಳುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...