ನೇಪಾಳಕ್ಕೆ ಹೋಗುತ್ತಿದ್ದ ಬಸ್ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾಗಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ ಉತ್ತರ ಪ್ರದೇಶದ ಬಲರಾಂಪುರ-ಗೊಂಡಾ ರಸ್ತೆಯಲ್ಲಿ ನಡೆದಿದೆ.
ಸೋನೌಲಿ ಗಡಿಯಿಂದ ದೆಹಲಿಗೆ ಬಸ್ ಹೋಗುತ್ತಿದ್ದಾಗ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಯಾಣಿಕರಲ್ಲಿ ಕೆಲವು ನೇಪಾಳಿ ಪ್ರಜೆಗಳು ಸೇರಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ದುರ್ಗಾ ಪೂಜೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎನ್ಕೌಂಟರ್; ಬಂಧನ
ಮೂವರು ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಗಾಯಾಳುಗಳನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಪಿನ್ ಜೈನ್ ತಿಳಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವವರನ್ನು ನೇಪಾಳ ಮತ್ತು ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಜೈನ್ ತಿಳಿಸಿದ್ದಾರೆ.





