ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳಿಗೆ ಸ್ಥಾನ

Date:

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಸ್ಥಾನ ಪಡೆದಿವೆ. ಸ್ವಿಸ್ ಗ್ರೂಪ್ ಎಕ್ಯೂಏರ್‌ ಅಂಕಿಅಂಶಗಳ ಪ್ರಕಾರ ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಭಾರತದ ರಾಜಧಾನಿ ದೆಹಲಿಯು ಮೊದಲ ಸ್ಥಾನದಲ್ಲಿದೆ.

ಹಾಗೆಯೇ ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಮೊದಲ 10ರಲ್ಲಿ ಸ್ಥಾನ ಪಡೆದಿವೆ. ಉಳಿದ ಎರಡು ನಗರಗಳು ಕೋಲ್ಕತ್ತಾ ಮತ್ತು ಮುಂಬೈ.

483 ಎಕ್ಯೂಐನೊಂದಿಗೆ(ವಾಯು ಗುಣಮಟ್ಟ ಸೂಚ್ಯಂಕ) ಪಟ್ಟಿಯಲ್ಲಿ ನವದೆಹಲಿ ಮತ್ತೆ ಅಗ್ರಸ್ಥಾನದಲ್ಲಿದೆ. ಪಾಕಿಸ್ತಾನದ ಲಾಹೋರ್ 371 ಎಕ್ಯೂಐ ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಕೋಲ್ಕತ್ತಾ ಮತ್ತು ಮುಂಬೈ ಕೂಡ ವಾಯುಮಾಲಿನ್ಯದಿಂದ ಹೆಚ್ಚು ಹಾನಿಗೊಳಗಾದ 5 ನಗರಗಳಲ್ಲಿ ಕ್ರಮವಾಗಿ 206 ಮತ್ತು 162 ಎಕ್ಯೂಐನೊಂದಿಗೆ ಮೂರು ಮತ್ತು ಆರನೇ ಸ್ಥಾನದಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನುಳಿದ ಮೊದಲ 10ರ ಪಟ್ಟಿಯಲ್ಲಿ ಚೀನಾದ ಮೂರು, ಪಾಕಿಸ್ತಾನದ ಎರಡು, ಬಾಂಗ್ಲಾದೇಶದ ಒಂದು ಹಾಗೂ ಕುವೈತ್‌ನ ಒಂದು ನಗರಗಳು ಪಟ್ಟಿಯಲ್ಲಿವೆ.

ಈ ಸುದ್ದಿ ಓದಿದ್ದೀರಾ? ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ: ನ.10ರವರೆಗೆ ಪ್ರಾಥಮಿಕ ಶಾಲೆ ಮುಚ್ಚಲು ಸರ್ಕಾರ ಆದೇಶ

ತಜ್ಞರು ಮತ್ತು ವೈದ್ಯರ ಪ್ರಕಾರ, ಯಾವುದೇ ಆರೋಗ್ಯವಂತ ವ್ಯಕ್ತಿಗೆ ಶಿಫಾರಸು ಮಾಡಲಾದ ಎಕ್ಯೂಐ ಮಟ್ಟ 50 ಕ್ಕಿಂತ ಕಡಿಮೆ ಇರಬೇಕು.

ಕಡಿಮೆ ತಾಪಮಾನದ ಸಂಯೋಜನೆ, ಗಾಳಿಯ ಕೊರತೆ ಮತ್ತು ನೆರೆಯ ಪ್ರದೇಶಗಳಲ್ಲಿ ಕೃಷಿ ತ್ಯಾಜ್ಯ ಸುಡುವುದು ವಾಯು ಮಾಲಿನ್ಯದ ಹೆಚ್ಚಳಕ್ಕೆ ಕಾರಣವಾಗಿದೆ.

ಕೆಲವು ಕಡೆಗಳಲ್ಲಿ ಎಕ್ಯೂಐ 550 ಕ್ಕಿಂತ ಹೆಚ್ಚಾದ ಕಾರಣ ನವದೆಹಲಿಯ 2 ಕೋಟಿ ನಿವಾಸಿಗಳಲ್ಲಿ ಅನೇಕರು ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಗಂಟಲಿನ ತುರಿಕೆ ಅನುಭವಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...