ಬಿಹಾರ| ಮತ್ತೆ ಮೂರು ಸೇತುವೆ ಕುಸಿತ; 15 ದಿನಗಳಲ್ಲಿ ಒಂಬತ್ತು ಪ್ರಕರಣ!

Date:

ಬಿಹಾರದಲ್ಲಿ ಕಳೆದ 15 ದಿನಗಳಲ್ಲಿಯೇ ಸುಮಾರು ಒಂಬತ್ತು ಸೇತುವೆ ಕುಸಿತ ಘಟನೆಗಳು ನಡೆದಿದೆ. ಭಾರೀ ಮಳೆಯ ನಡುವೆ ಸಿವಾನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಮೂರು ಸೇತುವೆಗಳು ಕುಸಿದು ಬಿದ್ದಿದ್ದು, ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ ಒಂಬತ್ತನೇ ಘಟನೆಯಾಗಿದೆ.

ಇತ್ತೀಚಿನ ಸೇತುವೆ ಕುಸಿತ ಘಟನೆಯಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ. ಸೇತುವೆ ಕುಸಿದ ಬಳಿಕ ಸಿವಾನ್‌ನ ಗಂಡಕ್ ಮತ್ತು ಧಾಮ್ಹಿ ನದಿಗಳ ಉದ್ದಕ್ಕೂ ಇರುವ ವಿವಿಧ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಗ್ರಾಮಗಳು ಜಿಲ್ಲಾ ಕೇಂದ್ರದಿಂದ ಸಂಪರ್ಕ ಕಳೆದುಕೊಂಡಿದೆ.

ಸಿವಾನ್ ಜಿಲ್ಲೆಯ ಪಟೇರಾ, ಧಮಾಯಿ ಗ್ರಾಮಗಳಲ್ಲಿ, ಜಿಲ್ಲೆಯ ತೆವ್ಟಾ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇತುವೆ ಕುಸಿದ ಘಟನೆಗಳು ನಡೆದಿದೆ. ಜಿಲ್ಲೆಯ ಮಹಾರಾಜ್‌ಗಂಜ್ ಉಪವಿಭಾಗದ ಪತೇರಾ ಗ್ರಾಮದ ದೇವರಿಯಾದಲ್ಲಿ ಮೊದಲ ಘಟನೆ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಗಂಡಕ್ ನದಿಗೆ ನಿರ್ಮಿಸಲಾದ ಸೇತುವೆಯ ಒಂದು ಭಾಗವು ಬುಧವಾರ ಕುಸಿದಿದೆ. 36-40 ವರ್ಷಗಳ ಹಿಂದೆ ನಿರ್ಮಿಸಿದ ಸೇತುವೆ ಇದುವರೆಗೆ ದುರಸ್ತಿ ಕಂಡಿಲ್ಲ ಎಂದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ಈ ಸೇತುವೆಯ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು. ಸೇತುವೆಯು ಗ್ರಾಮಸ್ಥರಿಗೆ ಏಕೈಕ ಸಾರಿಗೆ ಸಾಧನವಾಗಿತ್ತು.

ಇದನ್ನು ಓದಿದ್ದೀರಾ?  ಬಿಹಾರ| ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; 9 ದಿನಗಳಲ್ಲಿ ಐದನೇ ಪ್ರಕರಣ

ಅದೇ ರೀತಿ ಮಹಾರಾಜ್‌ಗಂಜ್ ಬ್ಲಾಕ್‌ನ ತೆವ್ತಾ ಪಂಚಾಯತ್‌ನಲ್ಲಿ ನೌತಾನ್ ಮತ್ತು ಸಿಕಂದರ್‌ಪುರವನ್ನು ಸಂಪರ್ಕಿಸುವ ಸೇತುವೆ ಕುಸಿದಿದೆ. ಧಮಾಯಿ ಗ್ರಾಮದಲ್ಲಿಯೂ ಸೇತುವೆ ಕುಸಿದಿದೆ. ಗಂಡಕ್ ನದಿಗೆ ಸೇತುವೆ ನಿರ್ಮಿಸಲಾಗಿದ್ದು, ಕೆಲ ದಿನಗಳ ಹಿಂದೆಯಷ್ಟೇ ದುರಸ್ತಿ ಮಾಡಲಾಗಿದೆ. ಬಲವಾದ ನೀರಿನ ಹರಿವಿನಿಂದಾಗಿ ಸೇತುವೆ ಕುಸಿದಿದೆ.

ಕಳೆದ ಹದಿನೈದು ದಿನಗಳಲ್ಲಿ ನಡೆದ ಸೇತುವೆ ಕುಸಿತ ಘಟನೆಗಳ ಹಿಂದೆ ರಾಜಕಾರಣಿಗಳು, ಗುತ್ತಿಗೆದಾರರು ಮತ್ತು ಅಧಿಕಾರಿಗಳ ನಡುವೆ ನಡೆದಿರುವ ಅಕ್ರಮಗಳೇ ಈ ಎಲ್ಲ ಸೇತುವೆಗಳ ಕುಸಿತಕ್ಕೆ ಕಾರಣ ಎಂದು ಆರೋಪ ಮಾಡಲಾಗಿದೆ.

“ಅಧಿಕಾರಿಗಳು ಮತ್ತು ಗುತ್ತಿಗೆದಾರರೊಂದಿಗೆ ಶಾಮೀಲಾಗಿರುವ ರಾಜಕಾರಣಿಗಳು ದುರ್ಬಲ ಸೇತುವೆಗಳ ನಿರ್ಮಾಣಕ್ಕೆ ಕಾರಣರಾಗಿದ್ದಾರೆ” ಎಂದು ಎ ಎನ್ ಸಿನ್ಹಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸ್ಟಡಿ ಮಾಜಿ ನಿರ್ದೇಶಕ ಪ್ರೊ.ಎಸ್ ನಾರಾಯಣ್ ದೂರಿದ್ದಾರೆ.

ಇದನ್ನು ಓದಿದ್ದೀರಾ?  9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

“ಗುತ್ತಿಗೆದಾರರು, ಅಧಿಕಾರಿಗಳು ಮತ್ತು ರಾಜಕಾರಣಿಗಳ ನಡುವಿನ ನಂಟು ಮುಖ್ಯವಾಗಿ ರಾಜ್ಯದಲ್ಲಿ ಸೇತುವೆ ಕುಸಿತಕ್ಕೆ ಕಾರಣವಾಗಿದೆ. ರಾಜಕೀಯ ನಿಧಿಯ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನು ಎನ್‌ಡಿಎ ಒಕ್ಕೂಟದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಈ ನಡುವೆ ಸೇತುವೆ ಕುಸಿತದ ಬಗ್ಗೆ ತನಿಖೆ ನಡೆಸಲು ಬಿಹಾರ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಕುಸಿದಿರುವ ಬಹುತೇಕ ಸೇತುವೆಗಳನ್ನು ಗ್ರಾಮೀಣ ಕಾಮಗಾರಿ ಇಲಾಖೆಯಿಂದ ನಿರ್ಮಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...