90ರಲ್ಲಿ ಮೂವರು ಮಾತ್ರ ಒಬಿಸಿ ಅಧಿಕಾರಿಗಳು: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಸೇರ್ಪಡೆಗೆ ರಾಹುಲ್ ಒತ್ತಾಯ

Date:

ದೇಶಾದ್ಯಂತ ಇರುವ 90 ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಲ್ಲಿ ಒಬಿಸಿ ಸಮುದಾಯದವರ ಸಂಖ್ಯೆ ಕೇವಲ ಮೂವರು ಮಾತ್ರ. ಇವರು ಭಾರತದ ಬಜೆಟ್‌ನ ಶೇ.5 ರಷ್ಟು ಮಾತ್ರ ನಿಯಂತ್ರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಸತಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಅವರು, “ಕಾರ್ಯದರ್ಶಿಗಳಲ್ಲಿ ಒಬಿಸಿ ಅಧಿಕಾರಿಗಳು ಎಷ್ಟಿದ್ದಾರೆ ಎಂದು ಕೇಳಿ ಉತ್ತರ ತಿಳಿದುಕೊಂಡಾಗ ನಾನು ಆಘಾತಕ್ಕೊಳಗಾದೆ. ಕೇವಲ ಮೂವರು ಮಾತ್ರ ಒಬಿಸಿ ಅಧಿಕಾರಿಗಳಿದ್ದು ಬಜೆಟ್‌ನ ಶೇ. 5 ರಷ್ಟು ಹಣ ಮಾತ್ರ ಅವರು ನಿಯಂತ್ರಿಸುತ್ತಾರೆ. ಇದು ಅವಮಾನ ಮತ್ತು ಅಪಮಾನಕರವಾದ ವಿಷಯವಾಗಿದೆ” ಎಂದು ತಿಳಿಸಿದರು.

“ದೇಶದಲ್ಲಿ ಎಷ್ಟು ಮಂದಿ ಒಬಿಸಿ, ದಲಿತರು ಮತ್ತು ಆದಿವಾಸಿಗಳಿದ್ದಾರೆ ಎಂದು ಪ್ರಶ್ನಿಸಿದ ಅವರು, ಜಾತಿ ಗಣತಿ ಬಳಸಿ ಮಾತ್ರ ಈ ಸಂಖ್ಯೆಯ ನಿಖರತೆಯನ್ನು ನಿರ್ಧರಿಸಲು ಸಾಧ್ಯ. ಪ್ರತಿಪಕ್ಷಗಳು ಜಾತಿ ಗಣತಿ ವಿಷಯ ಎತ್ತುವ ಕ್ಷಣದಲ್ಲಿ ಬಿಜೆಪಿಯು ಹೊಸ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತದೆ” ಎಂದು ರಾಹುಲ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹದೆಗೆಟ್ಟ ರಾಜತಾಂತ್ರಿಕ ಸಂಬಂಧ; ಕೆನಡಾದಲ್ಲಿರುವ ಭಾರತೀಯ ನಾಗರಿಕರಿಗೆ ಸಲಹೆ

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೋಟಾಕ್ಕೆ ಒತ್ತಾಯಿಸಿದ ರಾಹುಲ್ ಗಾಂಧಿ, ಈ ಸಮುದಾಯಕ್ಕೆ ಕೋಟಾದ ಕೊರತೆಯಿಂದಾಗಿ ಮೀಸಲಾತಿ ಉದ್ದೇಶ ಅಪೂರ್ಣವಾಗುತ್ತದೆ. ಮಹಿಳಾ ಮೀಸಲಾತಿ ಮಸೂದೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಕೋಟಾವನ್ನು ನೀಡಬೇಕು. ಅಲ್ಲದೆ ಜಾತಿ ಜನಗಣತಿ ಅಂಕಿಅಂಶವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಹೊಸ ಸಂಸತ್ತಿನ ಕಟ್ಟಡಕ್ಕೆ ಕಲಾಪಗಳನ್ನು ವರ್ಗಾವಣೆ ಮಾಡುವಾಗ ರಾಷ್ಟ್ರಪತಿಯನ್ನು ಆಹ್ವಾನಿಸಬೇಕಿತ್ತು ಎಂದೂ ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ಹೇಳಿದರು.

“ಇದು ಸಾಕಷ್ಟು ಸುಂದರವಾದ ಕಟ್ಟಡ, ನೆಲದ ಮೇಲೆ ಮತ್ತು ಕುರ್ಚಿಯಲ್ಲಿ ಸುಂದರವಾದ ನವಿಲುಗಳ ಚಿತ್ರವನ್ನು ಕೆತ್ತಲಾಗಿದೆ. ಆದರೆ ನಾನು ಒಬ್ಬ ಮಹಿಳೆಯಾಗಿರುವ ಭಾರತದ ರಾಷ್ಟ್ರಪತಿಯನ್ನು ನೋಡಲು ಇಷ್ಟಪಡುತ್ತೇನೆ. ಅವರು ಬುಡಕಟ್ಟು ಸಮುದಾಯವನ್ನು ಪ್ರತಿನಿಧಿಸುತ್ತಾರೆ. ಒಂದು ಸದನದಿಂದ ಇನ್ನೊಂದು ಸದನಕ್ಕೆ ವರ್ಗಾವಣೆಯಾಗುವಾಗ ಅವರು ಕಾಣಿಸಿಕೊಳ್ಳುವುದು ಸೂಕ್ತವಾಗಿತ್ತು” ಎಂದು ರಾಹುಲ್‌ ಗಾಂಧಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...