ಹಳಿ ದಾಟುತ್ತಿದ್ದಾಗ ಡಿಕ್ಕಿ ಹೊಡೆದ ರೈಲು; 3 ಕಾಡಾನೆಗಳು ಸಾವು

Date:

ರೈಲ್ವೇ ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದಿದ್ದು, ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಸ್ತೋಲಾ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಆನೆಗಳಲ್ಲಿ ಎರಡು ಮರಿ ಆನೆಗಳು ಎಂದು ತಿಳಿದುಬಂದಿದೆ.

ಖರಗ್‌ಪುರ-ಟಾಟಾನಗರ ನಡುವಿನ ರೈಲ್ವೇ ಮಾರ್ಗದಲ್ಲಿ ಏಳು ಆನೆಗಳು ಹಳಿ ದಾಟುತ್ತಿದ್ದಾಗ, ಮೂರು ಆನೆಗಳಿಗೆ ರೈಲು ಡಿಕ್ಕಿ ಹೊಡೆದಿದೆ. ಆನೆಗಳು ಪಶ್ಚಿಮ ಬಂಗಾಳದ ಖರಗ್‌ಪುರದ ಜಾರ್ಗ್ರಾಮ್ ಕಾಡಿನಿಂದ ಬಂದಿರಬಹುದು ಎಂದು ಹೇಳಲಾಗಿದೆ.

ಆನೆಗಳ ಮೃತದೇಹವನ್ನು ಕ್ರೇನ್‌ಗಳ ಮೂಲಕ ತೆರವುಗೊಳಿಸಲಾಗಿದೆ. ಆದರೆ, ಇಂತಹ ಘಟನೆಗಳು ಇದೇ ಮೊದಲೇನು ಅಲ್ಲ. ರೈಲ್ವೇ ಹಳಿಗಳನ್ನು ದಾಟುವಾಗ ಆನೆಗಳು ಸಾವನ್ನಪ್ಪಿದ ಹಲವಾರು ಪ್ರಕರಣಗಳು ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ವರದಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬದಲಾಗುತ್ತಿರುವ ಹವಾಮಾನ ಮತ್ತು ಋತುಮಾನಗಳಿಂದಾಗಿ ಆಹಾರ ಮತ್ತು ಸೂಕ್ತ ಆವಾಸಸ್ಥಾನಕ್ಕಾಗಿ ಆನೆಗಳು ಸೇರಿದಂತೆ ಕಾಡುಪ್ರಾಣಿಗಳು ವಲಸೆ ಹೋಗುತ್ತಿವೆ. ಹೀಗಾಗಿ, ಅರಣ್ಯ ಪ್ರದೇಶದಲ್ಲಿ ಹಾದುಹೋಗಿರುವ ರೈಲ್ವೇ ಹಳಿ ದಾಟುವಾಗ ರೈಲುಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವಿಗೆ ತುತ್ತಾಗುತ್ತಿವೆ ಎಂದು ಹೇಳಲಾಗಿದೆ.

ಆದಾಗ್ಯೂ, ಪ್ರಾಣಿಗಳು ರೈಲ್ವೇ ಹಳಿಗಳನ್ನು ದಾಟುವಾಗಲೆಲ್ಲ ರೈಲು ಚಾಲಕರಿಗೆ ಎಚ್ಚರಿಕೆ ನೀಡಲು ಅಂತಹ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲು ತಂತ್ರಜ್ಞಾನವನ್ನು ಬಳಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ತಮಿಳುನಾಡು, ಒಡಿಶಾ, ಅಸ್ಸಾಂ ಹಾಗೂ ಉತ್ತರಾಖಂಡಗಳಲ್ಲಿ ಆನೆಗಳ ಹಿಂಡು ನಿರ್ದಿಷ್ಟ ದಿಕ್ಕಿನಲ್ಲಿ ಚಲಿಸುವ ಬಗ್ಗೆ ಸ್ಪಷ್ಟ ಸಂದೇಶ ಒದಗಿಸಲು ಕೃತಕ ಬುದ್ಧಿಮತ್ತೆ ಬಳಸಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...