ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

Date:

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36 ಮಂದಿ ಕಾಣೆಯಾಗಿದ್ದಾರೆ. ಆಗಸ್ಟ್ 14ರಂದು ಕಿಶ್ತ್ವಾರ್ ಜಿಲ್ಲೆಯ ಮೇಘಸ್ಫೋಟದಿಂದಾಗಿ ಪ್ರವಾಹ ಸಂಭವಿಸಿ ಹತ್ತು ದಿನ ಕಳೆದಿದ್ದು, ಇನ್ನೂ 36 ಮಂದಿ ನಾಪತ್ತೆಯಾಗಿದ್ದಾರೆ. ಮೂರು ದಿನಗಳಿಂದ ಯಾವುದೇ ಮೃತದೇಹ ಅಥವಾ ಸಂತ್ರಸ್ತರು ಪತ್ತೆಯಾಗಿಲ್ಲ ಎನ್ನಲಾಗಿದೆ.

ಚೆಸೋಟಿ ಗ್ರಾಮದಲ್ಲಿ ಇಂದು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ 10 ನೇ ದಿನಕ್ಕೆ ತಲುಪಿದೆ ಎಂದು ಎನ್‌ಡಿಆರ್‌ಎಫ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ NDRF, SDRF, ಸೇನೆ, BRO, ಪೊಲೀಸ್ ಮತ್ತು ಸರ್ಕಾರಿ ಸಂಸ್ಥೆಗಳ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಶ್ವಾನ ದಳಗಳು, ಇತರೆ ತಂತ್ರಜ್ಞಾನಗಳನ್ನು ಬಳಸಿಯೂ ಶೋಧ ನಡೆಯಸಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಮತ್ತೆ ಮೇಘಸ್ಫೋಟ: ನಾಲ್ವರ ಸಾವು, ಆರು ಮಂದಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚೆಸೋಟಿ ಗ್ರಾಮದಿಂದ ಹೊಳೆಯಲ್ಲಿ ಹುಡುಕಾಟವನ್ನು ನಡೆಸುತ್ತಿದ್ದೇವೆ. ದಿಢೀರ್ ಪ್ರವಾಹದಲ್ಲಿ ಶವಗಳು ಕೊಚ್ಚಿ ಹೋಗಿರಬಹುದು. ಆದರೂ ಶವಗಳು ಸಿಗಬಹುದು ಎಂಬ ಭರವಸೆಯಲ್ಲಿ ನಾವು ಹೊಳೆಯಲ್ಲಿ ಹುಡುಕಾಟವನ್ನು 40 ಕಿ.ಮೀ.ಗಳಿಗೆ ವಿಸ್ತರಿಸಿದ್ದೇವೆ. ಕಳೆದ ಮೂರು ದಿನಗಳಿಂದ ಯಾವುದೇ ಶವ ಪತ್ತೆಯಾಗಿಲ್ಲ” ಎಂದು NDRF ಅಧಿಕಾರಿ ಹೇಳಿದರು.

ಆಗಸ್ಟ್ 14ರಂದು ಚೆಸೋಟಿ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ದಿಢೀರ್ ಪ್ರವಾಹ ಮತ್ತು ಮಣ್ಣು ಕುಸಿತ ಉಂಟಾಗಿ 68 ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಸಂಭವಿಸಿದ ದಿಢೀರ್ ಪ್ರವಾಹದಲ್ಲಿ ಒಂದು ಡಜನ್‌ಗೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಎನ್‌ಡಿಆರ್‌ಎಫ್ ಅಧಿಕಾರಿಗಳ ಪ್ರಕಾರ, ಸುಮಾರು 36 ಮಂದಿ ಇನ್ನೂ ಕಾಣೆಯಾಗಿದ್ದಾರೆ. ಈವರೆಗೆ ಕನಿಷ್ಠ 6 ಶವಗಳನ್ನು ಹೊಳೆಯಿಂದ ಹೊರತೆಗೆಯಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...