ಉತ್ತರಾಖಂಡ್‌ನ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 19 ಮಂದಿಯಲ್ಲಿ ನಾಲ್ವರು ಸಾವು

Date:

ಉತ್ತರಾಖಂಡ್‌  ಹಿಮಾಲಯದ ಗರ್‌ವಾಲ್‌ ಪರ್ವತ ಶ್ರೇಣಿಗಳಲ್ಲಿನ ಸಹಸ್ತ್ರ ತಲ್ ಮಾಯಾಲಿಗೆ ಬೆಂಗಳೂರಿನಿಂದ ಚಾರಣಕ್ಕೆ ತೆರಳಿದ್ದ 19 ಮಂದಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಉತ್ತರಾಖಂಡ್‌ನ ಕಂದಾಯ ಇಲಾಖೆಯ ಮಾಹಿತಿಯಂತೆ ಅಲ್ಲಿನ ಪ್ರದೇಶದಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ನಾಲ್ವರು ಚಾರಣಿಗರು ಸಾವನ್ನಪ್ಪಿದ್ದಾರೆ.

ರಾಜ್ಯ ವಿಪತ್ತು ಕಾರ್ಯಾಚರಣೆ ಪಡೆ ಹಾಗೂ ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ಪಡೆ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದು, ಆರು ಚಾರಣಿಗರನ್ನು ರಕ್ಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾರಣಿಗರನ್ನು ರಕ್ಷಿಸಲು ಹೆಚ್ಚಿನ ನೆರವಿಗಾಗಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಅನ್ನು ಕೋರಲಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸ್ಥಳೀಯ ಗ್ರಾಮಸ್ಥರು ಸಹಾಯದಲ್ಲಿ ತೊಡಗಿಸಿಕೊಂಡಿದ್ದಾರೆ.

ವಿವಿಧ ಸಂಸ್ಥೆಯ ನಾಲ್ಕು ಹೆಲಿಕಾಪ್ಟರ್‌ಅನ್ನು ಪರಿಹಾರ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದ್ದು, ರಕ್ಷಿಸಲಾದ ಚಾರಣಿಗರನ್ನು ಏರ್‌ಲಿಫ್ಟ್‌ ಮೂಲಕ ಡೆಹ್ರಾಡೂನ್‌ಗೆ ಕರೆತರಲಾಗಿದ್ದು, ತುರ್ತು ವೈದ್ಯಕೀಯ ನೆರವು ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

“ಸ್ಥಳದಲ್ಲಿ ಹವಾಮಾನ ಪರಿಸ್ಥಿತಿ ತುಂಬ ಕೆಟ್ಟದಾಗಿದೆ. ಹೆಚ್ಚು ಹಿಮ ಹಾಗೂ ಮಳೆ ಬೀಳುತ್ತಿರುವುದರಿಂದ ಗೋಚರತೆ ಕಡಿಮೆಯಿದೆ. ಈ ಕಾರಣದಿಂದ ಪರಿಹಾರ ಹೆಲಿಕಾಪ್ಟರ್‌ ಟೇಕ್‌ಆಫ್‌ ಆಗಿಲ್ಲ. ಆದಾಗ್ಯೂ ಎರಡು ಪರಿಹಾರ ತಂಡಗಳು ಕಣಿವೆಯಲ್ಲಿ ಸಿಲುಕಿಕೊಂಡಿರುವ ಬಳಿ ತೆರಳುತ್ತಿವೆ. ಇಂದು ಬೆಳಿಗ್ಗೆ ಹವಾಮಾನ ಪರಿಸ್ಥಿತಿ ಒಂಚೂರು ಸುಧಾರಿಸಿತ್ತು. ಪರಿಹಾರ ಹೆಲಿಕಾಪ್ಟರ್‌ ಕಣಿವೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಚಾರಣಿಗರನ್ನು ಕರೆತಂದಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ” ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ ರಶ್ಮಿ ಮಹೇಶ್‌ ತಿಳಿಸಿದ್ದಾರೆ.

ಪರಿಹಾರ ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮೇಲ್ವಿಚಾರಣೆ ನಡೆಸುತ್ತಿದ್ದು, ಕರ್ನಾಟಕ ಸರ್ಕಾರ ಕೂಡ ಪರಿಹಾರ ಕಾರ್ಯಾಚರಣೆಗೆ ಸಹಕರಿಸಲು ಉತ್ತರಾಖಂಡ್‌ಗೆ ಒಬ್ಬರು ಅಧಿಕಾರಿಗಳನ್ನು ಕಳಿಸುವ ಸಾಧ್ಯತೆಯಿದೆ.

ಇಂದು ಸಂಜೆಯೊಳಗೆ ಪರಿಹಾರ ಕಾರ್ಯಚರಣೆ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಖಾಸಗಿ ಸಂಸ್ಥೆಯ ಮೂಲಕ ಚಾರಣಿಗರು ಪರ್ವತ ಶ್ರೇಣಿಗಳಿಗೆ ತೆರಳಿದ್ದರು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...