ಗುಜರಾತ್ | ನಾಲ್ವರು ಮಕ್ಕಳ ಸಾವು; ಚಂಡೀಪುರ ವೈರಸ್ ಸೋಂಕು ಶಂಕೆ

Date:

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು ಚಂಡೀಪುರ ವೈರಸ್ ಸೋಂಕು ಶಂಕೆ ವ್ಯಕ್ತವಾಗಿದೆ. ಇನ್ನೂ ಇಬ್ಬರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶನಿವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಬ್ಬರು ಮಕ್ಕಳು ಜಿಲ್ಲೆಯ ಹಿಮ್ಮತ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ನಾಲ್ವರು ಮಕ್ಕಳ ಪೈಕಿ ಒಬ್ಬರು ಸಬರಕಾಂತ ಜಿಲ್ಲೆಯವರಾದರೆ ಮತ್ತಿಬ್ಬರು ನೆರೆಯ ಅರಾವಳಿ ಜಿಲ್ಲೆಯವರಾಗಿದ್ದಾರೆ. ನಾಲ್ಕನೇ ಮಗು ರಾಜಸ್ಥಾನ ಮೂಲದ ಮಗುವಾಗಿದೆ.

ಜ್ವರ ಕಾಣಿಸಿಕೊಳ್ಳುವುದು, ಜ್ವರವಿರುವಂತೆ ಕೆಲವು ಲಕ್ಷಣಗಳು, ತೀವ್ರವಾದ ಮೆದುಳಿನ ಉರಿಯೂತವು ಚಂಡೀಪುರ ವೈರಸ್‌ ಸೋಂಕಿನ ಲಕ್ಷಣಗಾಗಿದೆ. ಈ ಸೋಂಕು ಸೊಳ್ಳೆ, ಉಣ್ಣಿ, ನೊಣದಿಂದ ಹರಡುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲಾ ಆರು ಮಕ್ಕಳ ರಕ್ತದ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್‌ಐವಿ) ಕಳುಹಿಸಲಾಗಿದ್ದು ವರದಿಗಾಗಿ ಕಾಯಲಾಗುತ್ತಿದೆ ಎಂದು ಸಬರಕಾಂತ ಮುಖ್ಯ ಜಿಲ್ಲಾ ಆರೋಗ್ಯ ಅಧಿಕಾರಿ ರಾಜ್ ಸುತಾರಿಯಾ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಶಿವಮೊಗ್ಗದಲ್ಲಿ ಝೀಕಾ ವೈರಸ್‌ಗೆ ಮೊದಲ ಬಲಿ

ಜುಲೈ 10ರಂದು ನಾಲ್ಕು ಮಕ್ಕಳು ಸಾವನ್ನಪ್ಪಿದ ನಂತರ ಹಿಮ್ಮತ್‌ನಗರ ಸಿವಿಲ್ ಆಸ್ಪತ್ರೆಯ ಮಕ್ಕಳ ವೈದ್ಯರು ಚಂಡಿಪುರ ವೈರಸ್‌ನ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಇತರ ಇಬ್ಬರು ಮಕ್ಕಳಲ್ಲಿಯೂ ಇದೇ ರೀತಿಯ ಲಕ್ಷಣಗಳು ಕಾಣಿಸಿಕೊಂಡಿವೆ. ಈ ಮಕ್ಕಳು ಕೂಡಾ ಅದೇ ವೈರಸ್‌ಗೆ ಒಳಗಾಗಿದ್ದಾರೆ ಎಂದು ರಾಜ್ ಸುತಾರಿಯಾ ಶಂಕಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಮಕ್ಕಳು ಕೂಡ ರಾಜಸ್ಥಾನ ಮೂಲದವರು ಎಂದು ತಿಳಿಸಿದ್ದಾರೆ. ಶಂಕಿತ ವೈರಲ್ ಸೋಂಕಿನಿಂದ ಮಗುವಿನ ಸಾವಿನ ಬಗ್ಗೆ ರಾಜಸ್ಥಾನದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಸೋಂಕನ್ನು ತಡೆಗಟ್ಟಲು, ಪೀಡಿತ ಪ್ರದೇಶಗಳಲ್ಲಿ ನೊಣಗಳ ನಾಶಕ್ಕೆ ಬೇಕಾದ ಕ್ರಮಗಳನ್ನು ನಡೆಸಲು ಜಿಲ್ಲಾ ಅಧಿಕಾರಿಗಳು ತಂಡಗಳನ್ನು ನಿಯೋಜಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...