40% ಜಾಗತಿಕ ಉದ್ಯೋಗಗಳಿಗೆ ಹೊಡೆತ; AI ಕುರಿತು IMF ಮುಖ್ಯಸ್ಥರ ಎಚ್ಚರಿಕೆ

Date:

ಕೃತಕ ಬುದ್ಧಿಮತ್ತೆ (AI) ಪ್ರಭಾವದಿಂದ ಜಾಗತಿಕವಾಗಿ ಅಂದಾಜು 40%ರಷ್ಟು – ವಿಶೇಷವಾಗಿ ಆರಂಭಿಕ ಹಂತದ ಉದ್ಯೋಗಗಳು – ಹೊಡೆತ ಅನುಭವಿಸಲಿವೆ ಎಂದು ‘ಅಂತಾರಾಷ್ಟ್ರೀಯ ಹಣಕಾಸು ನಿಧಿ’ (IMF) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

ಇತ್ತೀಚೆಗೆ, ಎನ್‌ಡಿಟಿವಿ ನಡೆಸಿದ ಸಂದರ್ಶನದಲ್ಲಿ ಅವರು ಆರ್ಥಿಕತೆ ಮತ್ತು ಕಾರ್ಮಿಕ ಮಾರುಕಟ್ಟೆಯ ಮೇಲೆ ಎಐ ಪ್ರಭಾವದ ಕುರಿತು ವಿವರಿಸಿದ್ದಾರೆ. ಕಾರ್ಮಿಕ ಮಾರುಕಟ್ಟೆಯನ್ನು ಹೊಡೆಹಾಕುವ ಸುನಾಮಿಯಾಗಿ ಎಐ ಬೆಳೆಯುತ್ತಿದೆ ಎಂದು ಹೇಳಿದ್ದಾರೆ.

ಐಎಂಎಫ್‌ ಬೆಂಬಲಿತ ಅಧ್ಯಯನವನ್ನು ಉಲ್ಲೇಖಿಸಿದ ಅವರು, “ಮುಂದುವರಿದ ಆರ್ಥಿಕತೆ ಹೊಂದಿರುವ ರಾಷ್ಟ್ರಗಳಲ್ಲಿ ಉದ್ಯೋಗಗಳ ಮೇಲಿನ ಹೊಡೆತವು 60%ರೆಗೆ ಹೆಚ್ಚಾಗಬಹುದು. ಭಾರತದಲ್ಲಿ ಸುಮಾರು 26% ಉದ್ಯೋಗಗಳು ಎಐ ಪ್ರಭಾವದಿಂದ ಹೊಡೆತಕ್ಕೆ ಸಿಲುಕಲಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಐನಿಂದ ಯಾರು ಒತ್ತಡಕ್ಕೊಳಗಾಗುತ್ತಾರೆ? ನಾವು ವಿಶೇಷವಾಗಿ ಚಿಂತಿಸುವ ಉದ್ಯೋಗಗಳ ವರ್ಗ. ಈ ವರ್ಗವು ಈಗಾಗಲೇ ಹೊಡೆತ ಎದುರಿಸುತ್ತಿವೆ ಎಂಬುದಕ್ಕೆ ಪುರಾವೆಗಳಿವೆ. ಉದ್ಯೋಗ ಹರಸುತ್ತಿರುವ ಯುವ ಪದವೀಧರರು ತೀವ್ರ ಪರಿಣಾಮ ಎದುರಿಸುತ್ತಿದ್ದಾರೆ” ಎಂದಿದ್ದಾರೆ.

“ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ, ಭಾರತವು ಈಗಾಗಲೇ ನಿರುದ್ಯೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಪ್ರತಿ ವರ್ಷ ಲಕ್ಷಾಂತರ ಯುವಜನರು ಈ ಗುಂಪನ್ನು ಸೇರುತ್ತಿದ್ದಾರೆ. ಉದ್ಯೋಗಗಳನ್ನು ಸೃಷ್ಟಿಸಲು ಫೆಡರಲ್ ಮತ್ತು ರಾಜ್ಯ ಸರ್ಕಾರಗಳ ಮೇಲೆ ಗಮನಾರ್ಹ ಒತ್ತಡವಿದೆ. ಆದರೆ, ಈಗ ಕೃತಕ ಬುದ್ಧಿಮತ್ತೆ (AI) ಆಧಾರಿತ ತಂತ್ರಜ್ಞಾನದ ‘ಸುನಾಮಿ’ಯಿಂದ ಈ ಒತ್ತಡವು ಮತ್ತಷ್ಟು ಉಲ್ಬಣಗೊಳ್ಳಬಹುದು” ಎಂದು ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಅಮೆರಿಕ-ಇರಾನ್ ಯುದ್ಧದ ಕಾರ್ಮೋಡ; ಭಾರತದ ಆರ್ಥಿಕತೆ, ಭದ್ರತೆಗೇನು ಸವಾಲು?

“ಆದಾಗ್ಯೂ, ಸರಿಯಾಗಿ ನಿರ್ವಹಿಸಿದರೆ, AI ತಂತ್ರಜ್ಞಾನದ ಅಳವಡಿಕೆಯು ಭಾರತದ GDPಯನ್ನು ವಾರ್ಷಿಕವಾಗಿ 0.7%ರಷ್ಟು ಹೆಚ್ಚಿಸಬಹುದು. ಇದು ದೇಶವನ್ನು ದೀರ್ಘಾವಧಿಯ ಬೆಳವಣಿಗೆಯ ಗುರಿಗಳಿಗೆ ಹತ್ತಿರ ತರುತ್ತದೆ. ನಾನು ಭಾರತೀಯ ಆರ್ಥಿಕತೆಯನ್ನು ನೋಡಿದಾಗ, ನೀವು ತೆರಿಗೆಯಲ್ಲಿ ಆಳವಾದ ರಚನಾತ್ಮಕ ಸುಧಾರಣೆಗಳನ್ನು ಕೈಗೊಂಡಿದ್ದೀರಿ… ಕಾರ್ಮಿಕ ಮಾರುಕಟ್ಟೆಗಳಲ್ಲಿ ಭಾರತವನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸಲು, ಈ AI ಜಗತ್ತಿಗೆ ಹೆಚ್ಚು ಸಿದ್ಧವಾಗುವಂತೆ ಮಾಡಲು, ಕೌಶಲ್ಯಗಳನ್ನು ಹೇಗೆ ನಿಯೋಜಿಸಬೇಕು ಎಂಬುದರಲ್ಲಿ ನಮ್ಯತೆ ಇರಬೇಕು” ಎಂದು ಜಾರ್ಜೀವಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...