400 ವರ್ಷ ಹಳೆಯ ಬಾಡಾ ರಾಮಮಂದಿರ ಮಠದ ಭೂ ವಿವಾದ; ರೈತರಿಗೆ ನೋಟಿಸ್

Date:

ನಿಜಾಮಾಬಾದ್‌ನ ಬ್ರಹ್ಮ ಪುರಿಯಲ್ಲಿರುವ 400 ವರ್ಷ ಹಳೆಯದಾದ ಬಾದಾ ರಾಮಮಂದಿರ ಮಠದ ಆಸ್ತಿ ವಿವಾದ ಮುನ್ನೆಲೆಗೆ ಬಂದಿದೆ. ಬಡಾ ಅಥವಾ ಪೆದ್ದಾ ರಾಮಮಂದಿರ ಎಂದು ಕರೆಯಲ್ಪಡುವ ಈ ಮಠವನ್ನು ಛತ್ರಪತಿ ಶಿವಾಜಿ ಮಹಾರಾಜರ ಗುರು ಎನ್ನಲಾಗಿರುವ ಸಮರ್ಥ ರಾಮದಾಸ್ ಸ್ಥಾಪಿಸಿದ್ದರು. ಇದೀಗ, ಸಂಸ್ಥೆಗೆ ಸೇರಿದ ಜಮೀನುಗಳಲ್ಲಿ ಕೆಲವರು ಸಾಗುವಳಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಅಂತವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಮಠದ ಮುಖ್ಯಸ್ಥರ ನಿಧನದ ನಂತರ ಜಮೀನುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಮೊದಲು ಬೆಳಕಿಗೆ ಬಂದವು. ನ್ಯಾಯಾಲಯದ ಆದೇಶದ ನಂತರ, ದತ್ತಿ ಇಲಾಖೆಯು ಸಂಸ್ಥೆಯ ಆಸ್ತಿಗಳ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಆ ಆಸ್ತಿಯ ಮೌಲ್ಯ ಈಗ ಕೋಟ್ಯಂತರ ರೂಪಾಯಿಗೆ ಏರಿಕೆಯಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಬಡಾ ರಾಮ ಮಂದಿರವು ತೆಲಂಗಾಣದ ನಿಜಾಮಾಬಾದ್ ಮತ್ತು ಅದಿಲಾಬಾದ್ ಜಿಲ್ಲೆಗಳಲ್ಲಿ ಮತ್ತು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಸುಮಾರು 413 ಎಕರೆ ಕೃಷಿ ಭೂಮಿಯನ್ನು ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಬಡಾ ರಾಮಮಂದಿರ ಮಠದ ಮುಖ್ಯಸ್ಥರ ಕಚೇರಿಯು ಆಸ್ತಿಗಳ ಸರಿಯಾದ ದಾಖಲೆಗಳನ್ನು ನಿರ್ವಹಿಸಿಲ್ಲ. ಭೂಮಾಪನ ಸಂಖ್ಯೆಗಳು ಮತ್ತು ನಕ್ಷೆಗಳ ಆಧಾರದ ಮೇಲೆ ದತ್ತಿ ಅಧಿಕಾರಿಗಳು ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳ ಸಮನ್ವಯದಲ್ಲಿ ಜಮೀನುಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ.

ಈವರೆಗೆ ಎರಡು ಪ್ರಕರಣಗಳು ದಾಖಲಾಗಿದ್ದು, ಜಮೀನು ಸಾಗುವಳಿ ಮಾಡುತ್ತಿರುವವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಠದಲ್ಲಿ ದಾಖಲೆಗಳ ಕೊರತೆಯಿಂದ ಕೆಲವು ಜಮೀನುಗಳನ್ನು ಲೀಸ್‌ಗೆ ನೀಡಿ ನಂತರ ಪ್ಲಾಟ್‌ಗಳಾಗಿ ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ದತ್ತಿ ಇಲಾಖೆಯ ಮಧ್ಯ ಪ್ರವೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಾವು ಬಾಡ ರಾಮಮಂದಿರ ಮಠದ ಮುಖ್ಯಸ್ಥರಿಗೆ ಪ್ರತಿ ಎಕರೆಗೆ ವಾರ್ಷಿಕ ಮೊತ್ತವನ್ನು ಪಾವತಿಸುವ ಹಿಡುವಳಿ ರೈತರಾಗಿದ್ದೇವೆ ತಿಳಿಸಿದ್ದಾರೆ. ಪ್ರತ್ಯೇಕ ಕಾಯಿದೆಗಳು ಮಠಗಳು ಮತ್ತು ಇತರ ದೇವಾಲಯಗಳ ನಿರ್ವಹಣೆಯನ್ನು ನಿಯಂತ್ರಿಸುವುದರಿಂದ ಮಠಾಧಿಪತಿಗಳು ಜಮೀನುಗಳನ್ನು ಗೇಣಿದಾರರಿಗೆ ಗುತ್ತಿಗೆ ನೀಡುವ ಹಕ್ಕನ್ನು ಹೊಂದಿದ್ದಾರೆ ಎಂದು ಅವರು ವಾದಿಸಿದ್ದಾರೆ.

“ನಾವು ಬಾಡಾ ರಾಮಮಂದಿರ ಮತ್ತು ಅದರ ಆಸ್ತಿಗಳನ್ನು ವಿರೋಧಿಸುವುದಿಲ್ಲ. ಆದರೂ ಮಠಾಧಿಪತಿಗಳು ಒಕ್ಕಲು ವ್ಯವಸ್ಥೆಯನ್ನು ಕಾಯ್ದುಕೊಳ್ಳುವಂತೆ ಒತ್ತಾಯಿಸುತ್ತೇವೆ” ಎಂದು ರೈತರು ಹೇಳಿದ್ದಾರೆ.

ನ್ಯಾಯಾಲಯದ ಆದೇಶದ ಕಾರಣ ನಾವು ಕ್ರಮಕ್ಕೆ ಮುಂದಾಗಿದ್ದೇವೆ. ಸಾಗುವಳಿದಾರರು ಮಠಕ್ಕೆ ಪಾವತಿಸಿದ ದಾಖಲೆಗಳು ಮತ್ತು ಬಿಲ್‌ಗಳನ್ನು ನೀಡಬೇಕು ಎದು ಮಠದ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಜಿ ವೇಣು ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ದಾಖಲೆಗಳನ್ನು ನಿರ್ವಹಿಸುವ ಪ್ರಯತ್ನಗಳನ್ನು ಗಮನಿಸಿದ ವೇಣು, “ದೇವಾಲಯದ ಭೂಮಿ ಮತ್ತು ಆಸ್ತಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರದ ನಾಂದೇಡ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಠವು ಆಸ್ತಿಯನ್ನು ಹೊಂದಿದೆ. ಈ ವಿಷಯದ ಬಗ್ಗೆ ಮಹಾರಾಷ್ಟ್ರ ಸರ್ಕಾರದೊಂದಿಗೆ ಉನ್ನತ ಅಧಿಕಾರಿಗಳು ಮಾತುಕತೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

“ಜಮೀನುಗಳು ಕೇವಲ ಮಠಕ್ಕೆ ಸೇರಿದ್ದು, ಬೇರೆ ಯಾರಿಗೂ ಭೂಮಿಯನ್ನು ಮಾರಾಟ ಮಾಡುವ ಅಥವಾ ಗುತ್ತಿಗೆ ನೀಡುವ ಹಕ್ಕು ಇಲ್ಲ. ವಿವರಗಳನ್ನು ಸರ್ಕಾರದ ಆನ್‌ಲೈನ್ ಪೋರ್ಟಲ್‌ನಲ್ಲಿ ದಾಖಲಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...