2025ರ ಐದು ತಿಂಗಳಲ್ಲಿ 453 ಮಂದಿ ಹಳಿಗಳ ಮೇಲೆ ಸಾವು: ಬಾಂಬೆ ಹೈಕೋರ್ಟ್‌ಗೆ ರೈಲ್ವೆ ಮಾಹಿತಿ

Date:

2025ರ ಮೊದಲ ಐದು ತಿಂಗಳಲ್ಲಿ 453 ಜನರು ರೈಲ್ವೆ ಹಳಿಗಳ ಮೇಲೆ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ರೈಲ್ವೆ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ ಅಫಿಡವಿಟ್ ಸಲ್ಲಿಸಿ ಕೇಂದ್ರ ಈ ಮಾಹಿತಿ ನೀಡಿದೆ.

ವಕೀಲೆ ಅನಾಮಿಕಾ ಮಲ್ಹೋತ್ರಾ ಅವರ ಮೂಲಕ ಈ ಅಫಿಡವಿಟ್ ಸಲ್ಲಿಸಲಾಗಿದೆ. ಅತಿಕ್ರಮಣ, ಹಳಿಗಳನ್ನು ದಾಟುವಾಗ ಕೆಲವರು ಸಾವನ್ನಪ್ಪಿದ್ದರೆ, ಇನ್ನು ಕೆಲವರು ಸ್ಥಳೀಯ ರೈಲುಗಳಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ಹೇಳಿದೆ.

ಇದನ್ನು ಓದಿದ್ದೀರಾ? ಮುಂಬೈ | ಪ್ರಯಾಣಿಕರ ದಟ್ಟಣೆ: ರೈಲಿನಿಂದ ಬಿದ್ದು ಐವರು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025ರಲ್ಲಿ ಹಳಿಗಳನ್ನು ದಾಟುವಾಗ 293 ಮಂದಿ ಮತ್ತು ಚಲಿಸುವ ರೈಲುಗಳಿಂದ ಬಿದ್ದು 150 ಮಂದಿ ಸಾವನ್ನಪ್ಪಿದ್ದಾರೆ ಎಂದು ದತ್ತಾಂಶದಲ್ಲಿ ಉಲ್ಲೇಖಿಸಲಾಗಿದೆ. ಕಳೆದ ವರ್ಷ(2024) ಹಳಿಗಳನ್ನು ದಾಟುವಾಗ ಸಾವನ್ನಪ್ಪಿದವರ ಸಂಖ್ಯೆ 674 ಆಗಿದ್ದರೆ, ರೈಲುಗಳಿಂದ ಬಿದ್ದು 387 ಜನರು ಸಾವನ್ನಪ್ಪಿದ್ದಾರೆ. ಹಾಗೆಯೇ 2023ರಲ್ಲಿ, ಹಳಿಗಳನ್ನು ದಾಟುವಾಗ ಒಟ್ಟು 782 ಜನರು ಸಾವನ್ನಪ್ಪಿದ್ದರೆ, 431 ಮಂದಿ ಚಲಿಸುವ ರೈಲುಗಳಿಂದ ಬಿದ್ದು ಸಾವನ್ನಪ್ಪಿದ್ದಾರೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಕೇಂದ್ರ ರೈಲ್ವೆ ಅಫಿಡವಿಟ್ ಸಲ್ಲಿಸಿದೆ. ಜೂನ್ 9ರಂದು ಮುಂಬ್ರಾದಲ್ಲಿ ಎರಡು ಸ್ಥಳೀಯ ರೈಲುಗಳಿಂದ ಎಂಟು ಪ್ರಯಾಣಿಕರು ಬಿದ್ದು ಐವರು ಸಾವನ್ನಪ್ಪಿದ ಘಟನೆಯ ನಂತರ ಹೈಕೋರ್ಟ್ ವರದಿ ಕೇಳಿದೆ.

ಮುಂಬ್ರಾ ಘಟನೆಯ ತನಿಖೆಗಾಗಿ ತಂಡವನ್ನು ರಚಿಸಲಾಗಿದ್ದು ತನಿಖೆ ಇನ್ನೂ ಮುಂದುವರೆದಿದೆ ಎಂದು ಕೇಂದ್ರ ರೈಲ್ವೆ ನ್ಯಾಯಾಲಯಕ್ಕೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...