ವಿಮಾನ ಟಿಕೆಟ್ ಮರುಪಾವತಿಗೆ ಹೊಸ ನಿಯಮ: 48 ಗಂಟೆಯೊಳಗೆ ಉಚಿತ ರದ್ದತಿಗೆ ಅವಕಾಶ, ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಗಡುವು

Date:

ವಿಮಾನ ಪ್ರಯಾಣಿಕರಿಗೆ ಟಿಕೆಟ್ ಕಾಯ್ದಿರಿಸಿದ 48 ಗಂಟೆಗಳ ಒಳಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ (ಕೆಲವು ಷರತ್ತುಗಳಿಗೆ ಒಳಪಟ್ಟು) ಟಿಕೆಟ್ ರದ್ದುಗೊಳಿಸಲು ಅಥವಾ ಮಾರ್ಪಡಿಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅವಕಾಶ ಕಲ್ಪಿಸಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಟಿಕೆಟ್ ಮರುಪಾವತಿ ನಿಯಮಗಳನ್ನು ಪ್ರಾಧಿಕಾರವು ಪರಿಷ್ಕರಿಸಿದೆ.

​’ಸಾರ್ವಜನಿಕ ಸಾರಿಗೆ ಸಂಸ್ಥೆಗಳ ಪ್ರಯಾಣಿಕರಿಗೆ ವಿಮಾನ ಟಿಕೆಟ್ ಮರುಪಾವತಿ’ಗೆ ಸಂಬಂಧಿಸಿದ ನಾಗರಿಕ ವಿಮಾನಯಾನ ಅಗತ್ಯಗಳ (CAR) ನಿಯಮಾವಳಿಗಳಿಗೆ ಡಿಜಿಸಿಎ ತಿದ್ದುಪಡಿ ತಂದಿದೆ. ಇದರ ಅನ್ವಯ, ವಿಮಾನಯಾನ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಮೂಲಕ ನೇರವಾಗಿ ಟಿಕೆಟ್ ಖರೀದಿಸಿದ್ದರೆ ಮತ್ತು ಬುಕ್ ಮಾಡಿದ 24 ಗಂಟೆಗಳ ಒಳಗೆ ಗಮನಕ್ಕೆ ಬಂದರೆ, ಪ್ರಯಾಣಿಕರ ಹೆಸರಿನಲ್ಲಿರುವ ತಪ್ಪುಗಳನ್ನು ಸರಿಪಡಿಸಲು ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವಂತಿಲ್ಲ ಎಂದು ವಿಮಾನಯಾನ ಸಂಸ್ಥೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

“ಒಂದು ವೇಳೆ ಟ್ರಾವೆಲ್ ಏಜೆಂಟ್ ಅಥವಾ ಪೋರ್ಟಲ್ ಮೂಲಕ ಟಿಕೆಟ್ ಖರೀದಿಸಿದ್ದರೂ, ಆ ಏಜೆಂಟರು ಸಂಸ್ಥೆಯ ಪ್ರತಿನಿಧಿಗಳಾಗಿರುವುದರಿಂದ ಟಿಕೆಟ್ ಹಣ ಮರುಪಾವತಿಯ ಜವಾಬ್ದಾರಿ ವಿಮಾನಯಾನ ಸಂಸ್ಥೆಗಳ ಮೇಲೆಯೇ ಇರುತ್ತದೆ. ಮರುಪಾವತಿ ಪ್ರಕ್ರಿಯೆಯನ್ನು 14 ಕೆಲಸದ ದಿನಗಳ ಒಳಗೆ ಪೂರ್ಣಗೊಳಿಸುವುದನ್ನು ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು,” ಎಂದು ಡಿಜಿಸಿಎ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಟಿ ಸಾಮ್ರಾಜ್ಯದಲ್ಲಿ ‘ಎಐ’ ಭೂಕಂಪ: ಭಾರತಕ್ಕೆ ಕಾದಿವೆಯೇ ಕರಾಳ ದಿನಗಳು?

​ಫೆಬ್ರವರಿ 24ರಂದು ಹೊರಡಿಸಲಾದ ಈ ಪರಿಷ್ಕೃತ ನಿಯಮಾವಳಿಗಳು, ಪ್ರಯಾಣಿಕರು ಎದುರಿಸುವ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಟಿಕೆಟ್ ರದ್ದುಗೊಳಿಸುವ ನಿಯಮಗಳಿಗೂ ಅಗತ್ಯ ಬದಲಾವಣೆಗಳನ್ನು ಪರಿಚಯಿಸಿದೆ.

ಟಿಕೆಟ್ ಹಣ ಮರುಪಾವತಿಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಇತ್ತೀಚೆಗೆ ಪ್ರಯಾಣಿಕರ ದೂರುಗಳು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. 2025ರ ಡಿಸೆಂಬರ್‌ನಲ್ಲಿ ‘ಇಂಡಿಗೋ’ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾದಾಗ ಈ ಸಮಸ್ಯೆ ಮುನ್ನೆಲೆಗೆ ಬಂದಿತ್ತು. ಬಾಕಿ ಉಳಿದಿರುವ ಎಲ್ಲಾ ಮರುಪಾವತಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ನಾಗರಿಕ ವಿಮಾನಯಾನ ಸಚಿವಾಲಯವು ಆ ಸಂದರ್ಭದಲ್ಲಿ ವಿಮಾನಯಾನ ಸಂಸ್ಥೆಗೆ ನಿರ್ದೇಶನ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...