ಉಗ್ರರ ದಾಳಿ ಬೆದರಿಕೆ: ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಮುಚ್ಚಿದ ಸರ್ಕಾರ

Date:

ಗುಪ್ತಚರ ಇಲಾಖೆಗಳಿಂದ ಇನ್ನು ಹೆಚ್ಚಿನ ಉಗ್ರರ ದಾಳಿಯಾಗುವ ಸಾಧ್ಯತೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ 87 ಪ್ರವಾಸಿ ತಾಣಗಳಲ್ಲಿ 48 ತಾಣಗಳನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸ್ಥಗಿತಗೊಳಿಸಿದೆ.

ಪಹಲ್ಗಾಮ್‌ ದಾಳಿಯ ನಂತರ ಕೆಲವು ಉಗ್ರ ಸಂಘಟನೆಗಳು ಕಾಶ್ಮೀರದಲ್ಲಿ ಇನ್ನೂ ಸಕ್ರಿಯವಾಗಿದ್ದು, ದಾಳಿ ನಡೆಸುವ ಸೂಚನೆ ಇದೆಯೆಂದು ಅಧಿಕೃತ ಮಾಹಿತಿಗಳು ದೃಢೀಕರಿಸಿವೆ.

ಪ್ರಶಾಂತ ಕಣಿವೆಗಳು ಮತ್ತು ಸುಂದರವಾದ ಪರ್ವತಗಳಿಗೆ ಹೆಸರುವಾಸಿಯಾದ ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 48 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ. ಬುದ್ಗಾಮ್‌ನ ದೂಧಪತ್ರಿ ಮತ್ತು ಅನಂತನಾಗ್‌ನ ವೆರಿನಾಗ್‌ನಂತಹ ಹಲವಾರು ಪ್ರವಾಸಿ ತಾಣಗಳಿಗೆ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳಮೀಸಲಾತಿ ಗಣತಿ ಚಾರಿತ್ರಿಕ ದಾಖಲೆ, ತಪ್ಪದೇ ಭಾಗಿಯಾಗಿರಿ

ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆ ಹಿನ್ನೆಲೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರು ವಾಪಸ್ಸಾಗುತ್ತಿದ್ದಾರೆ. ಅನೇಕ ಜನರು ತಮ್ಮ ನಿಗದಿಗೊಳಿಸಿದ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ. ಒಂದು ವಾರದ ಹಿಂದೆ ಪಹಲ್ಗಾಮ್ ಪಟ್ಟಣವು ಪ್ರವಾಸಿಗರಿಂದ ತುಂಬಿ ಕೊಂಡಿತ್ತು.

ಆದರೆ ಈಗ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಪ್ರವಾಸೋದ್ಯಮ ಸ್ಥಳೀಯರ ಪ್ರಮುಖ ಆದಾಯದ ಮೂಲವಾಗಿತ್ತು. ಪ್ರವಾಸಿಗರ ಕುಸಿತವು ತಮ್ಮ ಆದಾಯದ ಮೂಲ ಮತ್ತು ಜೀವನೋಪಾಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಸ್ಥಳೀಯರಿಗೆ ಆತಂಕವಾಗಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸ್ಥಳೀಯರು ಇತ್ತೀಚಿಗಷ್ಟೆ ಬಂದ್‌ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...