ಉತ್ತರಾಖಂಡ್ ಅರಣ್ಯದಲ್ಲಿ ಕಾಡ್ಗಿಚ್ಚು: ಐವರು ಸಾವು, ಸಾವಿರಾರು ಎಕರೆ ಕಾಡು ನಾಶ

Date:

ಉತ್ತರಾಖಂಡ್‌ ಅರಣ್ಯಗಳಲ್ಲಿ ಕಾಡ್ಗಿಚ್ಚು ಸಂಭವಿಸಿ ಐವರು ಮೃತಪಟ್ಟು, ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಗಾಗಿದೆ.

ಪಿತೋರಾಘರ್‌ ಜಿಲ್ಲೆಯ ಗಂಗೋಲಿಹಟ್‌ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಾನವ ನಿರ್ಮಿತವಾದ ಈ ಘಟನೆಗೆ ಸಂಬಂಧಿಸಿದಂತೆ ಭಾರತೀಯ ಅರಣ್ಯ ಕಾಯ್ದೆಯಡಿ ಪಿಯೂಶ್ ಸಿಂಗ್, ಆಯೂಶ್ ಸಿಂಗ್‌, ರಾಹುಲ್ ಸಿಂಗ್‌ ಹಾಗೂ ಅಂಕಿತ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಡೆಹರಾಡೂನ್‌ನ ಹವಾಮಾನ ಕೇಂದ್ರದ ನಿರ್ದೇಶಕ ಬಿಕ್ರಮ್‌ ಸಿಂಗ್‌ ಮಾತನಾಡಿ, ಮೇ 7 ರಿಂದ ಮೇ 8 ಹಾಗೂ ಮೇ 11 ರಿಂದ ಉತ್ತರಾಖಂಡ್‌ನಲ್ಲಿ ಮಳೆಬರುವ ಸಾಧ್ಯತೆಯಿದ್ದು, ಕಾಡ್ಗಿಚ್ಚು ಶಮನಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಮಾಲಯದ ಕಣಿವೆಯ ರಾಜ್ಯದಲ್ಲಿ ಸಂಭವಿಸುವ ಕಾಡ್ಗಿಚ್ಚು ತಿಂಗಳುಗಳ ಕಾಲ ಮುಂದುವರೆಯುತ್ತದೆ. 2023ರ ನವೆಂಬರ್‌ 1ರಂದ 910 ಅರಣ್ಯಗಳಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ 1145 ಹೆಕ್ಟೇರ್‌ ಅರಣ್ಯ ನಾಶವಾಗಿತ್ತು. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂ. ನಷ್ಟವಾಗಿತ್ತು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಕಾಡ್ಗಿಚ್ಚು ವಸತಿ ಪ್ರದೇಶದಲ್ಲಿ ವಾಸಿಸುವ ಜನರಿಗೂ ಅಪಾಯ ತಂದೊಡ್ಡಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕೆಂದು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಮಾನವ ನಿರ್ಮಿತದಿಂದ ಸಂಭವಿಸುವ ಕಾಡ್ಗಿಚ್ಚಿನ ಪ್ರಕರಣದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮೇ 8 ರಂದು ತುರ್ತಾಗಿ ಪರಿಗಣಿಸಲು ಇಂದು ಒಪ್ಪಿಗೆ ಸೂಚಿಸಿದೆ.ಕಾಡ್ಗಿಚ್ಚಿನಿಂದ ಸಂಭವಿಸುವ ಅನಾಹುತದಲ್ಲಿ ಶೇ.90 ರಷ್ಟು ಮಾನವ ನಿರ್ಮಿತವಾಗಿರುತ್ತದೆ.

ನ್ಯಾಯಮೂರ್ತಿ ಬಿ ಆರ್‌ ಗವಾಯಿ ನೇತೃತ್ವದ ಪೀಠ ಹಿರಿಯ ನ್ಯಾಯವಾದಿ ರಾಜೀವ್‌ ದತ್ತ, ವಕೀಲ ಕೆ ಪರಮೇಶ್ವರ್‌ ಒಳಗೊಂಡ ಅರ್ಜಿದಾರರಿಗೆ ಸೂಚನೆ ನೀಡಿದೆ.

ಘಟನೆಯು ಆಘಾತಕಾರಿಯಾಗಿದ್ದು, ಅರಣ್ಯದ ಎಲ್ಲಡೆ ಇಂಗಾಲದ ಡೈಆಕ್ಸೈಡ್‌ ಹೊಗೆ ಆವರಿಸಿದೆ. ಕಳೆದ 6 ತಿಂಗಳಲ್ಲಿ ಸಂಭವಿಸಿದ ಅಗ್ನಿ ಅನಾಹುತಗಳಲ್ಲಿ 900ಕ್ಕೂ ಹೆಚ್ಚು ಘಟನೆಗಳು ಮಾನವ ನಿರ್ಮಿತವಾಗಿದ್ದು, ಇದರಿಂದ ಸಾವಿರಾರು ಎಕರೆ ಅರಣ್ಯ ನಾಶವಾಗಿದೆ ಎಂದು ಹಿರಿಯ ನ್ಯಾಯವಾದಿ ರಾಜೀವ್‌ ದತ್ತ ಕೋರ್ಟ್‌ಗೆ ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...