ಬಂಗಾಳ, ಅಸ್ಸಾಂನಲ್ಲಿ ಚಂಡಮಾರುತ: 8 ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಪಶ್ಚಿಮ ಬಂಗಾಳದ ಜಲ್‌ಪಾಯ್‌ಗುರಿ ಹಾಗೂ ಮುಂತಾದ ಕಡೆ ನಿನ್ನೆ ಸಂಭವಿಸಿದ ಹಠಾತ್ ಚಂಡಮಾರುತ ದಿಂದ ಐವರು ಮೃತಪಟ್ಟು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಚಂಡಮಾರುತದ ಜೊತೆ ಅಲಿಕಲ್ಲು ಮಳೆಯಿಂದ ಪ್ರವಾಹ ಉಂಟಾಗಿ 800ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಜಲ್ಪಾಯ್‌ಗುರಿ ಮತ್ತು ಪಕ್ಕದ ಮೈನಾಗುರಿ ಪ್ರದೇಶದ ಬಹುತೇಕ ಕಡೆಗಳಲ್ಲಿ ಬೀಸಿದ ರಭಸದ ಗಾಳಿಗೆ ಹಲವು ಮರಗಳು ಹಾಗೂ ವಿದ್ಯುತ್‌ ಕಂಬಗಳು ಉರುಳಿಬಿದ್ದಿವೆ. ನೂರಾರು ಎಕರೆ ಕೃಷಿ ಭೂಮಿ ಕೂಡ ನಾಶವಾಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಲ್ಪಾಯ್‌ಗುರಿಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಜನರನ್ನು ಭೇಟಿ ಮಾಡಿದರು. ಸ್ಥಳದಲ್ಲಿ ಪರಿಸ್ಥಿತಿಯ ಅವಲೋಕನ ನಡೆಸಿದ ಮಮತಾ ಮೃತಪಟ್ಟ ಕುಟುಂಬಗಳಿಗೆ ಸಾಂತ್ವಾನ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಚಂಡಮಾರುತದಿಂದ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಎಕ್ಸ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಅಸ್ಸಾಂನಲ್ಲಿ ಭಾರಿ ಚಂಡ ಮಾರುತ: ದೋಣಿ ಮಗುಚಿ ಮೂವರ ಸಾವು

ಭಾರಿ ಚಂಡಮಾರುತ ಹಾಗೂ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮಗುಚಿ ಇಬ್ಬರು ಮಕ್ಕಳು ಒಳಗೊಂಡು ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 20 ಮಂದಿಯನ್ನು ರಕ್ಷಿಸಲಾಗಿದೆ.

ಅಸ್ಸಾಂನ ದಕ್ಷಿಣ – ಸಾಲ್‌ಮರ ಮನ್‌ಕಚಾರ್‌ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ದೋಣಿ ಮಗುಚಿದೆ. ದೋಣಿ ಉರುಳಿದ ನಂತರ ಚಂಡಮಾರುತದಿಂದ ನೀರಿನ ಹರಿವು ಹೆಚ್ಚಾಗಿ ದುರಂತ ಸಂಭವಿಸಿದೆ. ದೋಣಿಯಿಂದ ಬಿದ್ದ ಪ್ರಯಾಣಿಕರನ್ನು ಮೀನುಗಾರರು ಹಾಗೂ ಅಧಿಕಾರಿಗಳು ರಕ್ಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಅಸ್ಸಾಂನಲ್ಲಿ ಏಪ್ರಿಲ್‌ 1ರಿಂದ 4ರವರೆಗೆ ಭಾರಿ ಮಳೆ ಬೀಳುವುದಾಗಿ ಆರೆಂಜ್‌ ಅಲರ್ಟ್‌ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...