ಭಯೋತ್ಪಾದನಾ ಸಂಪರ್ಕ ಆರೋಪ; ‘ಜೆ-ಕೆ’ಯ 5 ಸರ್ಕಾರಿ ನೌಕರರ ವಜಾ

Date:

ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರನ್ನು ವಜಾಗೊಳಿಸಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಿನ್ಹಾ ನೇತೃತ್ವದ ಆಡಳಿತವು 2020ರಿಂದ ಈವರೆಗೆ 85 ಮಂದಿ ಸರ್ಕಾರಿ ನೌಕರರನ್ನು ಇದೇ ಆರೋಪಗಳ ಮೇಲೆ ವಜಾಗೊಳಿಸಿದೆ.

ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕಹೊಂದಿರುವವರು ಸರ್ಕಾರಿ ಸಂಸ್ಥೆಗಳ ಅಂತರಿಕ ವಿಚಾರಗಳನ್ನು ಭಯೋತ್ಪಾದಕರಿಗೆ ರವಾನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿತ ಸರ್ಕಾರಿ ನೌಕರರನ್ನು ಸಂವಿಧಾನದ 311(2)(ಸಿ) ವಿಧಿಯ ಅಡಿಯಲ್ಲಿ ವಜಾಗೊಳಿಸಲಾಗಿದೆ. ಈ ವಿಧಿಯು ಔಪಚಾರಿಕ ವಿಚಾರಣೆ ಇಲ್ಲದೆ ನೌಕರರನ್ನು ವಜಾಗೊಳಿಸಲು ಅವಕಾಶ ನೀಡುತ್ತದೆ. ರಾಜ್ಯದ ಭದ್ರತೆಯ ಹಿತದೃಷ್ಟಿಯಿಂದ ಆರೋಪಿಗಳ ವಿರುದ್ಧದ ತನಿಖೆ ನಡೆಸುವುದು ಪ್ರಯೋಗಿಕವಲ್ಲ ಎಂದು ಲೆಫ್ಟಿನೆಂಟ್‌ ಗವರ್ನರ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಜಾಗೊಂಡವರಲ್ಲಿ ಶಿಕ್ಷಕ ಮೊಹಮ್ಮದ್ ಇಶ್ಫಾಕ್, ಪ್ರಯೋಗಾಲಯ ತಂತ್ರಜ್ಞ ತಾರಿಕ್ ಅಹ್ಮದ್ ಶಾ, ಸಹಾಯಕ ಲೈನ್‌ಮ್ಯಾನ್ ಬಶೀರ್ ಅಹ್ಮದ್ ಮಿರ್, ಅರಣ್ಯ ಇಲಾಖೆಯ ಕ್ಷೇತ್ರಪಾಲಕ ಫಾರೂಕ್ ಅಹ್ಮದ್ ಭಟ್ ಹಾಗೂ ಆರೋಗ್ಯ ಇಲಾಖೆಯ ಕಾರು ಚಾಲಕ ಮೊಹಮ್ಮದ್ ಯೂಸುಫ್ ಸೇರಿದ್ದಾರೆ.

ಆಪಾದಿತ ದಾಖಲೆಯ ಪ್ರಕಾರ, ಮೊಹಮ್ಮದ್ ಇಶ್ಫಾಕ್ ಅವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ‘ಲಷ್ಕರ್-ಎ-ತೊಯ್ಬಾ’ (LeT) ಜೊತೆ ಸಂಬಂಧ ಹೊಂದಿದ್ದಾರೆ. ನೆರೆಯ ದೇಶದಿಂದ ಕಾರ್ಯನಿರ್ವಹಿಸುತ್ತಿರುವ ‘ಭಯೋತ್ಪಾದಕ’ನೆಂದು ಘೋಷಿಸಲಾದ ಎಲ್‌ಇಟಿ ಕಮಾಂಡರ್ ಮೊಹಮ್ಮದ್ ಅಮೀನ್ ಅಲಿಯಾಸ್ ಅಬು ಖುಬೈಬ್ ಜೊತೆ ಅವರು ಸಂಪರ್ಕದಲ್ಲಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಬಂಗಾಳ ಚುನಾವಣೆ | ಅಧಿಕಾರಕ್ಕಾಗಿ ಬಿಜೆಪಿ ತಂತ್ರ – ಮಮತಾ ಪ್ರತಿತಂತ್ರ

2022ರ ಆರಂಭದಲ್ಲಿ ದೋಡಾದಲ್ಲಿ ಪೊಲೀಸ್ ಅಧಿಕಾರಿಯ ಹತ್ಯೆಗಾಗಿ, ಆ ಅಧಿಕಾರಿಯ ಚಲನವಲನವನ್ನು ಪಟ್ಟಿಮಾಡಲು ಇಶ್ಫಾಕ್‌ನನ್ನು ಎಲ್‌ಇಟಿ ನಿಯೋಜಿಸಿತ್ತು. ಈ ಯೋಜನೆ ಕಾರ್ಯಗತಗೊಳ್ಳುವ ಮೊದಲೇ ಅವರನ್ನು 2022ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು ಎಂದು ವರದಿಯಾಗಿದೆ.

ಮತ್ತೊಬ್ಬ ಆರೋಪಿ ತಾರಿಕ್ ಅಹ್ಮದ್ – ಚಿಕ್ಕ ವಯಸ್ಸಿನಿಂದಲೇ ಹಿಜ್ಬ್-ಉಲ್-ಮುಜಾಹಿದ್ದೀನ್‌ನ ಪ್ರಭಾವಕ್ಕೆ ಒಳಗಾಗಿದ್ದರು. 2005 ರಲ್ಲಿ ಹಿಜ್ಬ್-ಉಲ್‌ನ ನಾಯಕ ಅಮೀನ್ ಬಾಬಾ ಪಾಕಿಸ್ತಾನಕ್ಕೆ ಪರಾರಿಯಾಗಿದ್ದರ ಕುರಿತು ತನಿಖೆ ನಡೆಸುವಾಗ, ಆ ಸಂಘಟನೆಗೂ ತಾರಿಕ್‌ಗೂ ಸಂಪರ್ಕ ಇರುವುದನ್ನು ರಾಜ್ಯ ತನಿಖಾ ಸಂಸ್ಥೆ (SIA) ಬಹಿರಂಗಪಡಿಸಿತ್ತು ಎಂದು ಹೇಳಲಾಗಿದೆ.

ಬಶೀರ್ ಅಹ್ಮದ್ ಮಿರ್ ಅವರು ಮಿರ್ ಬಂಡಿಪೋರಾದ ಗುರೆಜ್ ಪ್ರದೇಶದಲ್ಲಿ ಎಲ್‌ಇಟಿಯೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಅಂತೆಯೇ, ಫಾರೂಕ್ ಅಹ್ಮದ್ ಮತ್ತು ಮೊಹಮ್ಮದ್ ಯೂಸುಫ್ ಕೂಡ ಹಿಜ್ಬ್-ಉಲ್ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...