ಹಿಂಸೆಗೆ ತಿರುಗಿದ ಲಡಾಖ್‌ನ ರಾಜ್ಯ ಸ್ಥಾನಮಾನದ ಕೂಗು; 5 ಸಾವು, 80ಕ್ಕೂ ಹೆಚ್ಚು ಗಾಯಾಳುಗಳು

Date:

ಲಡಾಖ್‌ನಲ್ಲಿ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್‌ನಡಿ ಸೇರ್ಪಡೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಗಳು ಬುಧವಾರ ಹಿಂಸಾತ್ಮಕವಾಗಿ ಬದಲಾಗಿದ್ದು, ಕನಿಷ್ಠ ಐವರು ಸಾವನ್ನಪ್ಪಿ, 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 10 ಮಂದಿಯ ಸ್ಥಿತಿ ಗಂಭೀರವಾಗಿದೆ. ಈ ಘಟನೆಯ ಬಳಿಕ ಲೇಹ್‌ನಲ್ಲಿ ಪೊಲೀಸ್‌ ಅಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಿದ್ದು, ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪಿನ ಸಭೆಗೆ ನಿಷೇಧ ಹೇರಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಒಂದು ವಾಹನವನ್ನೂ ಸುಟ್ಟುಹಾಕಲಾಗಿದೆ. ಹಿಂಸಾಚಾರವನ್ನು ತಡೆಯಲು ಪೊಲೀಸರು ಆಶ್ರುವಾಯು ಮತ್ತು ಲಾಠಿ ಚಾರ್ಜ್‌ ಮಾಡಿದ್ದಾರೆ. ಲೇಹ್ ಲಡಾಖ್‌ನ ಒಕ್ಕೂಟ ಪ್ರದೇಶದ ಆಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)2023ರ ಸೆಕ್ಷನ್ 163ರ ಅಡಿಯಲ್ಲಿ ಕರ್ಫ್ಯೂ ಜಾರಿಗೊಳಿಸಿದ್ದು, ಲೇಹ್‌ನಲ್ಲಿ ಯಾವುದೇ ಪ್ರತಿಭಟನೆ, ರ‍್ಯಾಲಿ ಅಥವಾ ಮೆರವಣಿಗೆಗೆ ನಿಷೇಧ ವಿಧಿಸಲಾಗಿದೆ.

ಲೇಹ್ ಅಪೆಕ್ಸ್ ಬಾಡಿ (LAB) ಯುವ ಘಟಕದಿಂದ ಕರೆ ನೀಡಲಾಗಿದ್ದ ಈ ಆಂದೋಲನವು ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಶೆಡ್ಯೂಲ್‌ನಡಿ ಸೇರ್ಪಡೆಗೆ ಒತ್ತಾಯಿಸುವ ನಿರಂತರ ಅಭಿಯಾನದ ಭಾಗವಾಗಿತ್ತು. ಲಡಾಖ್ ಮೊದಲು ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿತ್ತು. 2019ರ ಆಗಸ್ಟ್ 5ರಂದು 370ನೇ ವಿಧಿ ರದ್ದುಗೊಂಡ ಬಳಿಕ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರದ ನೇರ ನಿಯಂತ್ರಣಕ್ಕೆ ಒಳಪಟ್ಟಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಿನೆಮಾ ಟಿಕೆಟ್ ದರಗಳಿಗೆ ಸರ್ಕಾರಿ ಕಡಿವಾಣದ ಸಂಗತಿಯೇನು?

ಸೆಪ್ಟೆಂಬರ್ 10ರಿಂದ ಆರಂಭವಾದ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ 15 ಜನರಲ್ಲಿ ಇಬ್ಬರ ಆರೋಗ್ಯ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಈ ಬೆಳವಣಿಗೆಯ ಬಳಿಕ ಒಂದು ದಿನದ ಬಂದ್‌ಗೆ ಕರೆ ನೀಡಲಾಗಿತ್ತು. ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ತಮ್ಮ 15 ದಿನಗಳ ಉಪವಾಸವನ್ನು ಮಂಗಳವಾರ ಕೊನೆಗೊಳಿಸಿದ್ದು, ತಮ್ಮ ಬೆಂಬಲಿಗರಿಗೆ ಹಿಂಸೆಯಿಂದ ದೂರವಿರುವಂತೆ ಮನವಿ ಮಾಡಿದ್ದರು.

ಕೆಲವು ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪದಿಂದ ಉದ್ವಿಗ್ನತೆ ತಾರಕಕ್ಕೇರಿತು. ಬಳಿಕ ಪ್ರತಿಭಟನಾಕಾರರು ಲೇಹ್‌ನ ಬಿಜೆಪಿ ಕಚೇರಿಯ ಹೊರಗಡೆ ಭದ್ರತಾ ವಾಹನಕ್ಕೆ ಬೆಂಕಿ ಹಚ್ಚಿದರು. ಶಾಂತಿ ಸ್ಥಾಪನೆಗೆ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...