ಛತ್ತೀಸ್‌ಗಢ | ದಲಿತ ಬಾಲಕಿ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಿಗೆ ಮರಣ ದಂಡನೆ

Date:

ಛತ್ತೀಸ್‌ಗಢದ ಕೋಬ್ರಾ ಜಿಲ್ಲೆಯ ತ್ವರಿತ ವಿಶೇಷ ನ್ಯಾಯಾಲಯವೊಂದು ದಲಿತ ಸಮುದಾಯದ 16 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆ ಹಾಗೂ ಆಕೆಯ 2 ಕುಟುಂಬಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮರಣ ದಂಡನೆ ವಿಧಿಸಿದೆ.

2021ರ ಜನವರಿ 29ರಂದು 16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆಯ ಮೃತದೇಹವನ್ನು ಕಾಡಿಗೆ ಎಸೆದಿದ್ದರು. ಅತ್ಯಾಚಾರದ ಬಗ್ಗೆ ದೂರು ದಾಖಲಿಸಿದ್ದ ಬಾಲಕಿಯ ಎರಡು ಕುಟುಂಬದ ಮೂವರು ಸದಸ್ಯರನ್ನು ಆರೋಪಿಗಳು ಹತ್ಯೆ ಮಾಡಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ನ್ಯಾಯಾಲಯ ಮತ್ತೊಬ್ಬ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶರಾದ ಮಮತಾ ಬೋಜ್‌ವಾನಿ ಅವರು ಶಾಂತಾರಾಮ್‌, ಅಬ್ದುಲ್‌ ಜಬ್ಬಾರ್, ಅನಿಲ್‌ ಕುಮಾರ್, ಪ್ರದೇಶ್ ರಾಮ್ ಹಾಗೂ ಆನಂದ್‌ ರಾಮ್‌ ಎಂಬುವವರಿಗೆ ಕೊಲೆ, ಅತ್ಯಾಚಾರ, ಎಸ್‌ಸಿಎಸ್‌ಟಿ ದೌರ್ಜನ್ಯ ಹಾಗೂ ಇತರ ಐಪಿಸಿ ಸೆಕ್ಷನ್‌ ಕಾಯ್ದೆಯಡಿ ಮರಣ ದಂಡನೆ ಶಿಕ್ಷೆ ವಿಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಸರ್ಕಾರದ ಪರವಾಗಿ ವಿಶೇಷ ಅಭಿಯೋಜನ ಸುನಿಲ್‌ ಕುಮಾರ್ ಮಿಶ್ರಾ ಅವರು ವಾದ ಮಂಡಿಸಿದರು. ತೀರ್ಪನ್ನು ಜನವರಿ 17ರಂದು ನೀಡಲಾಗಿತ್ತಾದರೂ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲಾಯಿತು. ಆರೋಪಿಗಳ ಅಮಾನವೀಯ, ಕ್ರೂರ ಕೃತ್ಯವು ಅತ್ಯಂತ ವಿಕೃತ ಹಾಗೂ ಹೇಡಿತನದ್ದಾಗಿದೆ ಎಂದು ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ನ್ಯಾಯಾಲಯ ತಿಳಿಸಿದೆ.

ಜನವರಿ 29, 2021ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿ ಕ್ರೂರವಾಗಿ ಹತ್ಯೆ ಮಾಡಿ ಆಕೆಯ ಮೃತದೇಹವನ್ನು ಕಾಡಿಗೆ ಎಸೆಯಲಾಗಿತ್ತು. ಆರೋಪಿಗಳು ಸಂತ್ರಸ್ತೆಯ ತಂದೆ, ತಾಯಿ ಹಾಗೂ ಕುಟುಂಬಕ್ಕೆ ಸೇರಿದ 4 ವರ್ಷದ ಮಗುವನ್ನು ಕೊಲೆ ಮಾಡಿದ್ದರು.

ಆರೋಪಿಗಳಲ್ಲಿ ಒಬ್ಬನಾದ ಶಾಂತಾರಾಮ್‌ ಎಂಬಾತ ಸಂತ್ರಸ್ತೆಯನ್ನು ಎರಡನೆ ಮದುವೆಗೆ ಬಲವಂತಪಡಿಸಿದ್ದ. ವಿವಾಹಕ್ಕೆ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಸಿಟ್ಟಾಗಿ ತನ್ನ ಐವರು ಸಹಚರರೊಂದಿಗೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...