ಬಿಹಾರ | ಬಿರುಗಾಳಿ, ಗುಡುಗು-ಮಿಂಚು ಸಹಿತ ಭಾರೀ ಮಳೆ; 58 ಮಂದಿ ಸಾವು

Date:

ಗುರುವಾರ ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಬಿರುಗಾಳಿ, ಮಿಂಚು ಸಹಿತ ಭಾರೀ ಮಳೆಯಾಗಿದ್ದು, 58 ಮಂದಿ ಸಾವನ್ನಪ್ಪಿದ್ದಾರೆ. ನಳಂದ ಜಿಲ್ಲೆಯೊಂದರಲ್ಲೇ 23 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

58 ಮಂದಿ ಮೃತರ ಪೈಕಿ 35 ಜನರು ಮರ ಅಥವಾ ಗೋಡೆಗಳು ಕುಸಿದು ಸಾವನ್ನಪ್ಪಿದ್ದಾರೆ. ಇತರ 23 ಮಂದಿ ರಾಜ್ಯಾದ್ಯಂತ ಸಿಡಿಲು ಬಡಿದು ಪ್ರಾಣ ಕಳೆದುಕೊಂಡಿದ್ದಾರೆ. ನಳಂದ ಜಲ್ಲೆಯಲ್ಲಿ ಅಧಿಕ ಸಾವು, ಆಸ್ತಿಪಾಸ್ತಿ ಹಾನಿ ಉಂಟಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ಶುಭಂಕರ್ ದೃಢಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರೀ ಮಳೆ | ತಾಪ ಏರಿಕೆಯಿಂದ ದೆಹಲಿಗೆ ಮುಕ್ತಿ, ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶುಭಂಕರ್, “ಮರಗಳು ಅಥವಾ ಗೋಡೆಗಳು ಕುಸಿದು 22 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ” ಎಂದು ಹೇಳಿದರು.

“ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿರ್ದೇಶನದಂತೆ ಎಲ್ಲಾ ಸಂತ್ರಸ್ತ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುತ್ತದೆ. ಹಲವು ಮಂದಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಉಳಿದವರಿಗೆ ಶುಕ್ರವಾರವೇ ಪಾವತಿಸಲಾಗುವುದು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬಿಹಾರ | ಸಿಡಿಲು ಬಡಿದು ಮತ್ತೆ 12 ಮಂದಿ ಸಾವು, ಮೃತರ ಸಂಖ್ಯೆ 40ಕ್ಕೆ ಏರಿಕೆ

ಮೂರರಿಂದ ನಾಲ್ಕು ಗಾಯಾಳುಗಳು ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಳಂದದಲ್ಲಿ ಚಂಡಮಾರುತವು ವ್ಯಾಪಕ ನಾಶನಷ್ಟವನ್ನುಂಟುಮಾಡಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳು ಮತ್ತು ಬೆಳೆಗಳಿಗೆ ತೀವ್ರ ಹಾನಿಯಾಗಿದೆ.

“ಐದು ಜಾನುವಾರುಗಳೂ ಸಾವನ್ನಪ್ಪಿದೆ. ಪರಿಹಾರ ನೀಡುವ ಮುನ್ನ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸಾವಿನ ವರದಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ನಳಂದ ಜಿಲ್ಲೆಯಲ್ಲಿ 18 ಕಿ.ಮೀ.ಗೂ ಹೆಚ್ಚು ವಿದ್ಯುತ್ ಮಾರ್ಗಕ್ಕೆ ಹಾನಿಯಾಗಿದೆ. 300 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಹಲವಾರು ಟ್ರಾನ್ಸ್‌ಫಾರ್ಮರ್‌ಗಳು ನಾಶವಾಗಿವೆ. ವಿದ್ಯುತ್ ಸಂಪರ್ಕ ಮತ್ತೆ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...