ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿ, ಅನೇಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.
ಬಿಲಾಸ್ಪುರ–ಕಟ್ನಿ ಮಾರ್ಗದ ಲಾಲ್ ಖದಾನ್ ಪ್ರದೇಶದ ಬಳಿ ಪ್ರಯಾಣಿಕ ರೈಲು ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಕೆಲವು ಬೋಗಿಗಳು ಒಂದರ ಮೇಲೊಂದು ಹತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಉಂಟಾಗಿದೆ. ಅನೇಕ ಬೋಗಿಗಳು ಹಳಿ ತಪ್ಪಿದ್ದು, ಮೇಲ್ಭಾಗದ ವಿದ್ಯುತ್ ತಂತಿ ಹಾಗೂ ಸಿಗ್ನಲ್ ವ್ಯವಸ್ಥೆ ಗಂಭೀರವಾಗಿ ಹಾನಿಯಾಗಿದೆ.
ರೈಲ್ವೆ ರಕ್ಷಣಾ ತಂಡಗಳು, ಆರ್ಪಿಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ತುರ್ತು ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ
ಅಧಿಕಾರಿಗಳು ಅಪಘಾತದ ಕಾರಣವನ್ನು ತನಿಖೆ ಮಾಡುತ್ತಿರುವುದಾಗಿ ತಿಳಿಸಿದ್ದು, ಹಳಿ ಪುನಃಸ್ಥಾಪನೆ ಕಾರ್ಯ ಜಾರಿಯಲ್ಲಿದೆ. ಹಲವು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಕೆಲವು ಮಾರ್ಗಾಂತರ ಚಲಾಯಿಸಲಾಗುತ್ತಿವೆ.
ಸಹಾಯವಾಣಿ ಸಂಖ್ಯೆಗಳು:
ಚಾಂಪಾ ಜಂಕ್ಷನ್ – 808595652
ರಾಯಗಢ – 975248560
ಪೇಂದ್ರಾ ರೋಡ್ – 8294730162
ಅಪಘಾತ ಸ್ಥಳ – 9752485499, 8602007202





