ಸದ್ಗುರು ಯೋಗ ಕೇಂದ್ರದಿಂದ 6 ಮಂದಿ ನಾಪತ್ತೆ; ಹೈಕೋರ್ಟ್‌ಗೆ ಪೊಲೀಸರ ವರದಿ

Date:

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ‘ಸದ್ಗುರು’ ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಯೋಗ ಕೇಂದ್ರದಿಂದ 2016ರಿಂದ ಈವರೆಗೆ ಆರು ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ, ಯಾರಾದರೂ ಮರಳಿ ಬಂದಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಮದ್ರಾಸ್ ಹೈಕೋರ್ಟ್‌ಗೆ ಪೊಲೀಸರು ತಿಳಿಸಿದ್ದಾರೆ.

ತಿರುಮಲೈ ಎಂಬವರು ತಮ್ಮ ಸಹೋದರ ಗಣೇಶನ್‌ ಕಾಣೆಯಾಗಿದ್ದಾರೆ. ಅತನನ್ನು ಹುಡುಕಿಸಿಕೊಡಬೆಕೆಂದು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂಎಸ್ ರಮೇಶ್ ಮತ್ತು ಸುಂದರ್ ಮೋಹನ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. ಅರ್ಜಿಯಲ್ಲಿ ತಮಿಳುನಾಡು ಪೊಲೀಸರು ಪ್ರತಿವಾದಿಗಳಾಗಿದ್ದು, ಪೊಲೀಸರು ಅಫಿಡವಿಟ್ ಸಲ್ಲಿಸಿದ್ದಾರೆ.

ಪೊಲೀಸರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ, “2016ರಿಂದ ಇಶಾ ಫೌಂಡೇಶನ್‌ನಿಂದ ನಾಪತ್ತೆಯಾದ ಅನೇಕ ಪ್ರಕರಣಗಳಿವೆ. ತನಿಖೆ ನಡೆಯುತ್ತಿದೆ. ಕೆಲವು ನಾಪತ್ತೆಯಾದ ವ್ಯಕ್ತಿಗಳು ಮರಳಿ ಬಂದಿರಬಹುದು. ಆದರೆ, ಆ ಬಗ್ಗೆ ಸಮಗ್ರ ವಿವರಗಳು ಲಭ್ಯವಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೀಠವು ಪೊಲೀಸರ ಅಫಿಡವಿಟ್‌ಅನ್ನು ಗಮನಿಸಿದೆ. ಏಪ್ರಿಲ್ 18ರೊಳಗೆ ತನಿಖೆಯ ಪ್ರಗತಿ ಬಗ್ಗೆ ವಿವರವಾದ ವರದಿ ನೀಡುವಂತೆ ಪೊಲೀಸರಿಗೆ ಸೂಚಿಸಿದೆ.

“2007ರಿಂದ ಇಶಾ ಫೌಂಡೇಶನ್‌ ಜೊತೆ ಚಾರಿಟಿ ಕೆಲಸದಲ್ಲಿ ತನ್ನ ಸಹೋದರ ತೊಡಗಿಸಿಕೊಂಡಿದ್ದರು. ಆದರೆ, ಅವರು 2023ರ ಮಾರ್ಚ್‌ನಲ್ಲಿ ಕೊಯಮತ್ತೂರಿನ ಇಶಾ ಫೌಂಡೇಶನ್‌ನಿಂದ ಕಾಣೆಯಾಗಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿರುಮಲೈ ತಿಳಿಸಿದ್ದಾರೆ.

ಗಣೇಶನ್ ಅವರ ಎರಡು ದಿನಗಳ ಮಾಹಿತಿ ಗೈರುಹಾಜರಿಯ ಬಗ್ಗೆ ಫೌಂಡೇಶನ್ ತನಗೆ ತಿಳಿಸಿತ್ತು ಎಂದು ತಿರುಮಲೈ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆತನ ಪತ್ತೆಗಾಗಿ ಮತ್ತು ಪ್ರಕರಣದ ತನಿಖೆಯಲ್ಲಿ ನ್ಯಾಯಾಲಯವು ಉಸ್ತುವಾರಿ ವಹಿಸಬೇಕೆಂದು ತಿರುಮಲೈ ಕೋರಿದ್ದಾರೆ.

ಗಣೇಶನ್ ಕಾಣೆಯಾದ ಕೆಲ ದಿನಗಳ ಬಳಿಕ, 2023ರ ಮಾರ್ಚ್‌ 5ರಂದು ಇಶಾ ಫೌಂಡೇಶನ್‌ನ ದಿನೇಶ್ ರಾಜಾ ಎಂಬವರು ಪೊಲೀಸ್ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ನಾಪತ್ತೆ ಪ್ರಕರಣ ದಾಖಲಾಗಿದೆ.

ಕಾಣೆಯಾದ ದೂರಿನ ಪ್ರಕಾರ, ಗಣೇಶನ್ ಅವರು 2023ರ ಫೆಬ್ರವರಿ 28ರ ಸಂಜೆ ಕೇಂದ್ರದಿಂದ ಹೊರಹೋಗಿದ್ದಾರೆ. ಅವರು ವೆಲ್ಲಿಯಂಗಿರಿ ಬೆಟ್ಟದ ಬಳಿಯ ಪೂಂಡಿ ದೇವಸ್ಥಾನಕ್ಕೆ ತೆರಳಲು ಆಟೋ ರಿಕ್ಷಾ ಹತ್ತಿದ್ದಾರೆ. ಅದಾದ ಬಳಿಕ ಅವರು ಕಾಣೆಯಾಗಿದ್ದಾರೆ.

ಆರು ಮಂದಿ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿರುವ ಇಶಾ ಫೌಂಡೇಶನ್, “2016ರಿಂದ ಈಶಾ ಯೋಗ ಕೇಂದ್ರದಿಂದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...