ಪಾಕ್ ಪರ ಸಂಭ್ರಮಾಚರಣೆ | ಪೊಲೀಸರ ‘ಕಟ್ಟುಕಥೆ’ ಬಯಲಿಗೆಳೆದ ನ್ಯಾಯಾಲಯ; 6 ವರ್ಷಗಳ ಬಳಿಕ 17 ಮುಸ್ಲಿಂ ಯುವಕರು ಖುಲಾಸೆ

Date:

2017ರ ಜೂನ್‌ನಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯವೊಂದರಲ್ಲಿ ಪಾಕಿಸ್ತಾನ ಜಯಗಳಿಸಿದ ಬಳಿಕ ಮುಸ್ಲಿಂ ಯುವಕರು ವಿಜಯೋತ್ಸವ ನಡೆಸಿದ್ದಾರೆಂಬ ಆರೋಪದ ಮೇಲೆ ಬಂಧಿತರಾಗಿದ್ದ 17 ಮಂದಿಯನ್ನು ಆರು ವರ್ಷದ ಬಳಿಕ ನ್ಯಾಯಾಲಯವು ಖುಲಾಸೆಗೊಳಿಸಿದೆ. ಅಲ್ಲದೇ, ಪೊಲೀಸರ ಕಟ್ಟುಕಥೆಯನ್ನು ಬಯಲಿಗೆಳೆದಿದೆ.

ಪಾಕಿಸ್ತಾನದ ವಿಜಯವನ್ನು ಆಚರಿಸಿದ ಆರೋಪದ ಮೇಲೆ 17 ಮುಸ್ಲಿಂ ಪುರುಷರು ಮತ್ತು ಇಬ್ಬರು ಅಪ್ರಾಪ್ತರ ಮೇಲೆ ಮಧ್ಯಪ್ರದೇಶದಲ್ಲಿ ಪ್ರಕರಣ ದಾಖಲಾಗಿತ್ತು.

ಆರು ವರ್ಷಗಳ ನಂತರ ಇದೀಗ ಮಧ್ಯಪ್ರದೇಶದ ನ್ಯಾಯಾಲಯವು ಹಿಂದೂ ದೂರುದಾರ ಮತ್ತು ಸರ್ಕಾರಿ ಸಾಕ್ಷಿಗಳು ಸುಳ್ಳು ಹೇಳಿಕೆಗಳನ್ನು ನೀಡಲು ಒತ್ತಾಯಿಸಿರುವುದನ್ನು ಬಯಲಿಗೆಳೆದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ‘ ಪೊಲೀಸರ ಕಟ್ಟುಕಥೆ’ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾವು ಮಾಡದ ತಪ್ಪಿಗೆ ಅಕ್ಟೋಬರ್ 2023 ರಲ್ಲಿ ಬಿಡುಗಡೆಗೊಂಡ ನಿರಪರಾಧಿಗಳು‌ ಆರು‌ ವರ್ಷ ಜೈಲಿನಲ್ಲಿ ತಮ್ಮ ಜೀವನ ಕಳೆಯಬೇಕಾಗಿ ಬಂದಿತ್ತು. ಪೊಲೀಸ್ ಕಸ್ಟಡಿಯಲ್ಲಿ ತಮ್ಮನ್ನು ಥಳಿಸಲಾಯಿತು ಮತ್ತು ಅವಾಚ್ಯವಾಗಿ ನಿಂದಿಸಲಾಗಿದೆ ಎಂದು ಆರೋಪಿಸಿದ್ದಾರೆ.

40 ವರ್ಷದ ಒಬ್ಬ ಆರೋಪಿ ಇಬ್ಬರು ಮಕ್ಕಳ ತಂದೆ, ಈ ಪ್ರಕರಣದ ಕಾರಣದಿಂದಾಗಿ ಮನನೊಂದು ಮುರಿದು 2019 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.

ಪ್ರಕರಣದ ಹಿನ್ನೆಲೆ

18 ಜೂನ್ 2017 ರಂದು ಲಂಡನ್‌ನ ಓವಲ್ ಸ್ಟೇಡಿಯಂನಲ್ಲಿ ಭಾರತವು ಚಾಂಪಿಯನ್ ಟ್ರೋಫಿ ಫೈನಲ್‌ನಲ್ಲಿ ಸೋತಾಗ, ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಮೊಹಾದ್‌ನ ಗ್ರಾಮಸ್ಥರು ಪಾಕಿಸ್ತಾನವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಿದ್ದಾರೆ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಲ್ಲದೇ, ಪಟಾಕಿಗಳನ್ನು ಸಿಡಿಸಿದ್ದಾರೆ ಎಂಬ ವದಂತಿ ಹರಡಿಸಲಾಗಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ , 1860 ರ ಅಡಿಯಲ್ಲಿ ದೇಶದ್ರೋಹ ಮತ್ತು ಕ್ರಿಮಿನಲ್ ಪಿತೂರಿಗಾಗಿ ಮೊಕದ್ದಮೆ ದಾಖಲಿಸಲಾಗಿತ್ತು. ಆರೋಪಿಗಳು ತಾವು ತಪ್ಪು ಮಾಡಿಲ್ಲ ಎಂದು ಹೇಳಿದರೂ ಸಾಕ್ಷ್ಯಾಧಾರವಿಲ್ಲದೆ ಪ್ರಕರಣ ಮುಂದುವರಿಸಲಾಗಿತ್ತು.

ಆರು ವರ್ಷದ ನಂತರ ಇದೀಗ ಸಾಕ್ಷ್ಯಾಧಾರ ಇಲ್ಲದ ಕಾರಣ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ.
ಹಿಂದೂ ದೂರುದಾರರು ಮತ್ತು ಸರ್ಕಾರಿ ಸಾಕ್ಷಿಗಳು ಸುಳ್ಳು ಆರೋಪಗಳನ್ನು ಮಾಡಲು ನಮಗೆ ಒತ್ತಡ ಹೇರಲಾಗಿತ್ತು ಎಂದು ನ್ಯಾಯಾಲಯದಲ್ಲಿ ಸತ್ಯ ನುಡಿದ ಕಾರಣ, ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ದೇವಂದರ್ ಶರ್ಮಾ ಅವರು 16 ಮುಸ್ಲಿಂ ಆರೋಪಿಗಳನ್ನು (2019 ರಲ್ಲಿ ಒಬ್ಬರು ಮೃತಪಟ್ಟಿದ್ದಾರೆ) ಖುಲಾಸೆಗೊಳಿಸಿದರು.

ದೇಶದ ಹಲವು ಗೋದಿ ಮಾಧ್ಯಮಗಳು ಅಂದು ಈ ಅಮಾಯಕರನ್ನು ‘ದೇಶದ್ರೋಹಿ’ಗಳೆಂದು ಬಿಂಬಿಸಿ ಸುದ್ದಿ ಪ್ರಸಾರ ಮಾಡಿದ್ದವು. ಇದೀಗ ಅವರು ಖುಲಾಸೆಗೊಂಡಾಗ ಸುಮ್ಮನಿದ್ದು, ಮಾಧ್ಯಮಗಳು ತಮ್ಮ ಕುತಂತ್ರ ಬುದ್ದಿಯನ್ನು ಮತ್ತೊಮ್ಮೆ ಸಾಬೀತು ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...