ದೆಹಲಿಯ 69% ಕುಟುಂಬಗಳು ಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆಗೆ ತುತ್ತಾಗಿವೆ: ಸಮೀಕ್ಷೆ

Date:

ದೆಹಲಿಯಲ್ಲಿ ವಾಯು ಮಾಲಿನ್ಯವು ಹೆಚ್ಚುತ್ತಲೇ ಇದೆ. ದೀಪಾವಳಿಯ ಸಮಯದಲ್ಲಿ ಗಾಳಿಯ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದೆ. ದೀಪಾವಳಿ ಸಮಯದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಮಾಲಿನ್ಯಕಾರಕ ನಗರವೆಂಬ ಕುಖ್ಯಾತಿಗೆ ದೆಹಲಿ ಗುರಿಯಾಗಿದೆ. ಮಾಲಿನ್ಯವು ಜನರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ದೆಹಲಿಯ 69% ಕುಟುಂಬಗಲ್ಲಿ ಕನಿಷ್ಠ ಒಬ್ಬರು ಉಸಿರಾಟ ಮತ್ತು ಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆಗೆ ತುತುತ್ತಾಗಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಗುರುವಾರ, ದೀಪಾವಳಿ ಹಬ್ಬದ ರಾತ್ರಿ ದೆಹಲಿಯಲ್ಲಿ ಎಕ್ಯೂಐ (ವಾಯು ಗುಣಮಟ್ಟ ಸೂಚ್ಯಂಕ) 999 ತಲುಪಿತ್ತು. ಇದು ದೆಹಲಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಅತ್ಯಧಿಕ ದಾಖಲೆಯಗಿದೆ. ಈ ಬೆನ್ನಲ್ಲೇ, ಲೋಕಲ್ ಸರ್ಕಲ್ಸ್‌ ಸಮೀಕ್ಷೆ ನಡೆಸಿದೆ. ದೆಹಲಿ, ನೋಯ್ಡಾ, ಗುರುಗ್ರಾಮ್, ಫರಿದಾಬಾದ್ ಮತ್ತು ಗಾಜಿಯಾಬಾದ್‌ನ ಸುಮಾರು 21,000 ಕ್ಕೂ ಹೆಚ್ಚು ಮಂದಿಯನ್ನು ಮಾತನಾಡಿಸಿದೆ. ಸಮೀಕ್ಷೆಯ ಪ್ರಕಾರ, ದೆಹಲಿ ಮತ್ತು ಸುತ್ತಲಿನ 69% ಕುಟುಂಬಗಳಲ್ಲಿ ಒಬ್ಬರು ಅಥವಾ ಹೆಚ್ಚಿನ ಸದಸ್ಯರು ಗಂಟಲು ನೋವು ಅಥವಾ ಕೆಮ್ಮು ಸಮಸ್ಯೆಯಿಂದ ಬಳಲುತ್ತಿದ್ದಾರೆ. 62% ಕುಟುಂಬಗಳಲ್ಲಿ ಕನಿಷ್ಠ ಒಬ್ಬರು ಕಣ್ಣು ಉರಿ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗೂ ದೆಹಲಿಯ ಒಟ್ಟು ಜನರಲ್ಲಿ 46% ಮಂದಿ ‘ಮೂಗು ಕಟ್ಟುವ’ ಬಾಧೆಗೆ ತುತ್ತಾಗಿದ್ದರೆ. ಸಮೀಕ್ಷೆಗೆ ಒಳಪಟ್ಟವರಲ್ಲಿ ಹಲವರು ಒಂದಕ್ಕಿಂತ ಹೆಚ್ಚು ರೋಗಲಕ್ಷಣಗಳನ್ನು ಹೊಂದಿದ್ದಾರೆ.

ದೆಹಲಿಯಲ್ಲಿ 31% ಮಂದಿ ಉಸಿರಾಟದ ತೊಂದರೆ ಅಥವಾ ಆಸ್ತಮಾದಿಂದ ಬಳಲುತ್ತಿದ್ದಾರೆ. ಆತಂಕ (ಆ್ಯಂಸೈಟಿ)ಯಂತಹ ಸಮಸ್ಯೆಗೆ 23% ಮಂದಿ ತುತ್ತಾಗಿದ್ದರೆ, 15% ಮಂದಿ ನಿದ್ರಾಬಾಧೆ ಅನುಭವಿಸುತ್ತಿದ್ದಾರೆ. ಆದಾಗ್ಯೂ, ದೆಹಲಿ ಹೊರ ಭಾಗದ 31% ರಷ್ಟು ಜನರು ತಮ್ಮ ಕುಟುಂಬಗಳಲ್ಲಿ ಯಾರೂ ಮಾಲಿನ್ಯದ ಕಾರಣದಿಂದಾಗಿ ಯಾವುದೇ ಸಮಸ್ಯೆಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ‘ವಕ್ಫ್‌ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್‌ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ

ದೆಹಲಿಯ ಮೇಲೆ GRAP-1 (ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ) ಅನ್ನು ವಿಧಿಸಿದ ದಿನಗಳ ನಂತರ ಅಕ್ಟೋಬರ್ 19 ರಂದು ಇದೇ ರೀತಿಯ ಸಮೀಕ್ಷೆ ನಡೆಸಲಾಗಿತ್ತು. ಆ ಸಮೀಕ್ಷೆಗೆ ಹೋಲಿಸಿದರೆ ಹೊಸ ಸಮೀಕ್ಷೆ ನಡೆಯುವ ವೇಳೆಗೆ, ಅಂದರೆ, ಕೇವಲ ಎರಡು ವಾರಗಳಲ್ಲಿ ಗಂಟಲು ನೋವು ಮತ್ತು ಕೆಮ್ಮು ಹೊಂದಿರುವ ಸಂಖ್ಯೆಯು 36%ನಿಂದ 69%ಗೆ ಏರಿಕೆಯಾಗಿದೆ.

ಗಮನಾರ್ಹವೆಂದರೆ, ಸಮೀಕ್ಷೆ ಒಳಪಟ್ಟಿವರ ಪೈಕಿ ಕೇವಲ 23% ಜನರು ಮಾತ್ರ ವಾಯು ಶುದ್ಧಿಕಾರಕಗಳನ್ನು (ಏರ್‌ ಪಿಲ್ಟರ್‌) ಬಳಸುತ್ತಿದ್ದಾರೆ. 15% ಜನರು ತಮ್ಮ ದಿನನಿತ್ಯದ ಚಟುವಟಿಕೆಗಳಿಗಾಗಿ ಹೊರಹೋಗುವಾಗ ಮಾಸ್ಕ್‌ಗಳನ್ನು ಧರಿಸುತ್ತಿದ್ದಾರೆ. 15% ಜನರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರ ಅಥವಾ ಪಾನೀಯಗಳನ್ನು ಹೆಚ್ಚಾಗಿ ಬಳಸಲು ಯೋಜಿಸುತ್ತಿದ್ದಾರೆ. ಅಲ್ಲದೆ, ಹಲವು ಮಂದಿ ದೆಹಲಿಯನ್ನು ತೊರೆಯಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...